ಬೀದರನಲ್ಲಿ ಐ.ಟಿ ಪಾರ್ಕ್ ಸ್ಥಾಪನೆಗೆ ಗುರುನಾಥ ವಡ್ಡೆ ಆಗ್ರಹ

Date:

  • ಡಾ. ಡಿ ಎಂ ನಂಜುಂಡಪ್ಪ ಸಮಿತಿ ವರದಿ ಸಲ್ಲಿಸಿ 20 ವರ್ಷ ಕಳೆದಿವೆ
  • ಉದ್ಯೋಗಕ್ಕಾಗಿ ಬೆಂಗಳೂರು, ಹೈದರಬಾದ್‌, ಪುಣೆ ನಗರಗಳಿಗೆ ವಲಸೆ

ಡಾ. ಡಿ ಎಂ ನಂಜುಂಡಪ್ಪ ವರದಿ ಆಧರಿಸಿ, ಬೀದರ್‌ ಜಿಲ್ಲೆಯಲ್ಲಿ ಐ.ಟಿ ಪಾರ್ಕ್ ಸ್ಥಾಪನೆ ಮಾಡಬೇಕು ಎಂದು ಸಮಾಜಿಕ ಕಾರ್ಯಕರ್ತ ಗುರುನಾಥ ವಡ್ಡೆ ಒತ್ತಾಯಿಸಿದ್ದಾರೆ. ಬೀದರ್‌ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ.

ಬೀದರ್‌ ಜಿಲ್ಲೆ ರಾಜ್ಯದ ರಾಜಧಾನಿಯಿಂದ ದೂರದ ಜಿಲ್ಲೆಯಾಗಿದೆ. ವಿಜ್ಞಾನ ತಂತ್ರಜ್ಞಾನದ ಜೊತೆಗೆ ಅಭಿವೃದ್ಧಿಯಲ್ಲೂ ಬಹು ಹಿಂದೆ ಉಳಿದಿದೆ. ಆದ್ದರಿಂದ ಹಿಂದುಳಿದ ಬೀದರ ಜಿಲ್ಲೆಯಲ್ಲಿ ಐ.ಟಿ. ಪಾರ್ಕ್ ಸ್ಥಾಪನೆ ಮಾಡುವುದು ಅತ್ಯಂತ ಅವಶ್ಯಕವಾಗಿದೆ ಎಂದು ಮನವಿ ಮಾಡಿದ್ದಾರೆ.

ಬೀದರ್‌ ಜಿಲ್ಲೆಯಲ್ಲಿ ಐ.ಟಿ. ಪಾರ್ಕ್ ಸ್ಥಾಪನೆಗಾಗಿ 2014 ರಿಂದ ಸರ್ಕಾರಕ್ಕೆ ನಿರಂತರ ಮನವಿ ಮಾಡಲಾಗುತ್ತಿದ್ದು, ಇಂದಿನವರೆಗೆ ಸರ್ಕಾರದಿಂದ ಯಾವುದೇ ಸಕರಾತ್ಮಕ ಕ್ರಮ ಆಗಿಲ್ಲ. ಡಾ. ಡಿ ಎಂ ನಂಜುಂಡಪ್ಪ ಅವರು ಸರ್ಕಾರಕ್ಕೆ ಸಲ್ಲಿಸಿದ ವರದಿಯಲ್ಲಿ ಎಲ್ಲ ಜಿಲ್ಲೆಗಳಲ್ಲಿ ಐ.ಟಿ. ಪಾರ್ಕ್ ಸ್ಥಾಪಿಸಬೇಕೆಂದು ಸೂಚಿಸಿದ್ದಾರೆ. ಆದರೆ, ವರದಿ ಸಲ್ಲಿಸಿ 20ವರ್ಷ ಕಳೆದರೂ ಸರ್ಕಾರದಿಂದ ಡಾ. ಡಿ ಎಂ ನಂಜುಂಡಪ್ಪ ವರದಿ ಅನುಷ್ಠಾನಗೊಂಡಿಲ್ಲ. ಬೀದರ ಜಿಲ್ಲೆಯಲ್ಲಿ ಐ.ಟಿ. ಪಾರ್ಕ್ ಸ್ಥಾಪನೆ ಆಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬೀದರ್‌ ಜಿಲ್ಲೆಯಲ್ಲಿ ಸಾವಿರಾರು ಐ.ಟಿ. ಉದ್ಯೋಗಿಗಳು ಕೆಲಸಕ್ಕಾಗಿ ರಾಜಧಾನಿ ಬೆಂಗಳೂರು ಅಲ್ಲದೇ ನೆರೆ ರಾಜ್ಯದ ಹೈದರಬಾದ್‌ ಹಾಗೂ ಪುಣೆಯಲ್ಲಿ ಉದ್ಯೋಗಕ್ಕಾಗಿ ವಲಸೆ ಹೋಗುವುದು ಸಾಮಾನ್ಯವಾಗಿದೆ. ಬೀದರನಲ್ಲಿ ಐ.ಟಿ. ಉದ್ಯಮಿಗಳಿದ್ದರೂ ಐ.ಟಿ. ಪಾರ್ಕ್ ಇಲ್ಲದ ಕಾರಣ ಅವರೂ ಸಂಕಷ್ಟದಲ್ಲಿದ್ದಾರೆ ಎಂದು ವಿವರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕಲುಷಿತ ನೀರು ಸೇವನೆ; ಮತ್ತೊಂದು ಗ್ರಾಮದಲ್ಲಿ 8 ಮಂದಿ ಅಸ್ವಸ್ಥ

“ಇದರಿಂದಾಗಿ ಬೀದರ ಜಿಲ್ಲೆಯ ಅಭಿವೃದ್ಧಿಗಾಗಿ ಮತ್ತು ಬೀದರ ಜಿಲ್ಲೆಯಲ್ಲಿನ ಐ.ಟಿ. ಉದ್ಯೋಗಿಗಳ ಅನುಕೂಲಕ್ಕಾಗಿ ಹಾಗೂ ಉದ್ಯಮಿಗಳ ಅನುಕೂಲಕ್ಕಾಗಿ ಬೀದರ ಜಿಲ್ಲೆಯಲ್ಲಿ ವಿಜ್ಞಾನ ತಂತ್ರಜ್ಞಾನದಲ್ಲಿ ಅಭಿವೃದ್ಧಿ ಪಡಿಸುವುದಕ್ಕಾಗಿ ಸರ್ಕಾರದಿಂದ ತಕ್ಷಣ ಬೀದರ ಜಿಲ್ಲೆಯಲ್ಲಿ ಐ.ಟಿ. ಪಾರ್ಕ್ ಸ್ಥಾಪನೆ ಮಾಡಬೇಕು” ಎಂದು ಸಾಮಾಜಿಕ ಕಾರ್ಯಕರ್ತ ಗುರುನಾಥ ವಡ್ಡೆ, ಸಿಎಂಗೆ ಸಲ್ಲಿಸಿದ ಮನವಿಯಲ್ಲಿ ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ; ಮತದಾನ ಮಾಡಲು ಬಂದ ವೈದ್ಯನಿಂದ ಜೀವ ರಕ್ಷಣೆ

ಬೆಂಗಳೂರಿನ ಜೆ ಪಿ ನಗರದಲ್ಲಿರುವ ಜಂಬೂ ಸವಾರಿ ದಿನ್ನೆ ಮತಗಟ್ಟೆಯಲ್ಲಿ ಮತದಾನ...

ಚಿತ್ರದುರ್ಗ | ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಸಾವು

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ...

ಶಿವಮೊಗ್ಗ | ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ; ತಿಮ್ಲಾಪುರದ ಮಹಿಳೆಯರು ಸಂತಸ

"ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ" ಯಾವ ಸರ್ಕಾರ ಏನೇ ಮಾಡಿದರೂ 32...

ಕೋಲಾರ | ಮೂಲಭೂತ ಸೌಕರ್ಯ ಕೊರತೆ : ಮತದಾನ ಬಹಿಷ್ಕರಿಸಿದ ಗ್ರಾಮಸ್ಥರು

ದೇಶದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದ್ದರೇ, ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ...