ಕಲಬುರಗಿ | ಕಾಂತರಾಜು ಆಯೋಗದ ವರದಿಯನ್ನು ಸಾರ್ವಜನಿಕ ಚರ್ಚೆಗೆ ಬಿಡುಗಡೆ ಮಾಡಲಿ: ಸಿಪಿಐಎಂ

Date:

Advertisements

ಜಾತಿ ಸಮೀಕ್ಷೆಯ ಎಚ್. ಕಾಂತರಾಜು ನೇತೃತ್ವದ ಹಿಂದುಳಿದ ವರ್ಗಗಳ ಆಯೋಗ ವರದಿಯನ್ನು ಸಾರ್ವಜನಿಕ ಚರ್ಚೆಗೆ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳಿಗೆ ಸಿಪಿಐಎಂ ಕರ್ನಾಟಕ ರಾಜ್ಯ ಸಮಿತಿ ಆಗ್ರಹಿಸಿದೆ.

ಅಗಾಧ ಶ್ರಮ ಹಾಗೂ ಸಂಪನ್ಮೂಲಗಳ ವ್ಯಯದೊಂದಿಗೆ ಸಿದ್ಧಪಡಿಸಲಾದ ವರದಿಯನ್ನು ಪಟ್ಡಭದ್ರ ಹಿತಾಸಕ್ತಿಗಳ ಒತ್ತಡಕ್ಕೆ ಮಣಿದು ಮೂಲೆಗುಂಪಾಗಲು ಬಿಡಬಾರದೆಂದು ಸಿಪಿಐಎಂ ಕಲಬುರಗಿ ಜಿಲ್ಲಾ ಕಾರ್ಯದರ್ಶಿ ಕೆ. ನೀಲಾ ಒತ್ತಾಯಿಸಿದ್ದಾರೆ.

“ಎಚ್. ಕಾಂತರಾಜುರವರ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗವು 2015 ರಲ್ಲಿ ಸುಮಾರು 170 ಕೋಟಿ ರೂ.ಗಳ ಸಾರ್ವಜನಿಕ ವೆಚ್ಚದಲ್ಲಿ, ಸರ್ಕಾರದ ಸುಪರ್ದಿಯಲ್ಲಿರುವ 22,180 ಮೇಲ್ವಿಚಾರಕ ಅಧಿಕಾರಿಗಳ ಉಸ್ತುವಾರಿಯಲ್ಲಿ 1.33 ಲಕ್ಷ ರೂ. ನೌಕರ ಗಣತಿದಾರರು ಒಂದು ತಿಂಗಳ ಕಾಲ ರಾಜ್ಯದಾದ್ಯಂತ ತಲಾ 150 ರಿಂದ 175 ಮನೆಗಳಿಗೆ ಭೇಟಿ ಮಾಡಿ ಸುಮಾರು 55 ಪ್ರಶ್ನೆಗಳ ಮೂಲಕ, ಸುಮಾರು 1,351 ಜಾತಿ – ಉಪ ಜಾತಿಗಳ ಕುಟುಂಬಗಳಿಂದ ಮಾಹಿತಿ ಸಂಗ್ರಹಿಸಲಾಗಿದೆ” ಎಂದು ತಿಳಿಸಿದರು.

Advertisements

“ಸ್ವಾತಂತ್ರ್ಯ ನಂತರದ 76 ವರ್ಷಗಳ ಅವಧಿಯಲ್ಲಿ ರಾಜ್ಯದ ಎಲ್ಲ ಸಮುದಾಯಗಳ ಸಾಮಾಜಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿಗಾಗಿ ಒಕ್ಕೂಟ ಹಾಗೂ ರಾಜ್ಯ ಸರಕಾರಗಳು ಲಕ್ಷಾಂತರ ಕೋಟಿ ರೂ.ಗಳನ್ನು ವ್ಯಯ ಮಾಡಿದ್ದು, ಅದರ ಫಲಿತಾಂಶವನ್ನು ಇಂತಹ ಸಮೀಕ್ಷೆಗಳ ಮೂಲಕ ರಾಜ್ಯದ ಜನತೆ ತಿಳಿಯುವುದು ಅಗತ್ಯವಿದೆ. ವರದಿಯು, ಸಾರ್ವಜನಿಕ ಚರ್ಚೆಗೆ ಬಹಿರಂಗಗೊಂಡ ನಂತರವೇ ಅದು ಸರಿಯಿದೆಯಾ ಅಥವಾ ವ್ಯತ್ಯಾಸವಾಗಿದೆಯಾ ಎಂಬ ಪ್ರಶ್ನೆಗೆ ಉತ್ತರ ಸಿಗಲಿದೆ. ಅದು ಬಿಡುಗಡೆಯಾಗದೇ, ಅದರಲ್ಲೇನಿದೆಯೆಂಬುದು ತಿಳಿಯದೇ ಊಹೆಯ ಮೇಲೆ ವಿರೋಧಿಸುವುದು ಅಥವಾ ಬೆಂಬಲಿಸುವುದು ಸರಿಯಾದ ಕ್ರಮವಲ್ಲ” ಎಂದರು.

“ಬಹುಶಃ ಸಮೀಕ್ಷೆಯ ಫಲಿತಾಂಶ ಮತ್ತು ಅದರಿಂದ ಆಗಬಹುದಾದ ಮುಂದಿನ ಕ್ರಮಗಳು, ಕೆಲವರನ್ನು ಭಯ ಭೀತಿಗೊಳಿಸಿರುವುದರಿಂದ ಅದನ್ನು ವಿರೋಧಿಸಿ ತಡೆಯುವ ಕ್ರಮಗಳಿಗೆ ಮುಂದಾಗುವ ಮೂಲಕ ಸರಕಾರದ ಮೇಲೆ ಒತ್ತಡ ಹೇರುತ್ತಿರುವಂತೆ ಕಾಣುತ್ತಿದೆ. ವೈಜ್ಣಾನಿಕವಾದ ಸಾಮಾಜಿಕ ಹಾಗೂ ಶೈಕ್ಷಣಿಕ ಗಣತಿಯು, ಕೆಲವರ ಕೈಯಲ್ಲಿ ಕೇಂದ್ರೀಕೃತವಾದ ಅಧಿಕಾರ ಹಾಗೂ ಕೆಲವರಿಗೆ ಲಾಭಕರವಾಗಿರುವ ಸಾರ್ವಜನಿಕ ವೆಚ್ಚದ ಹೂರಣವನ್ನು ಬಯಲಿಗೆಳೆಯಲಿದೆ. ಹೀಗಾಗಿ ಈ ಕೆಲವರಿಗೆ ಅಧಿಕಾರ ಹಾಗೂ ಸಾರ್ವಜನಿಕ ವೆಚ್ಚದಿಂದ ಸಿಗುವ ಆದಾಯವು ಕಡಿತಗೊಳ್ಳಬಹುದೆಂಬ ಭೀತಿಯು ಕಾಡುತ್ತಿರಬಹುದು” ಎಂದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಬರ ಪರಿಹಾರ ಶೀಘ್ರ ಬಿಡುಗಡೆಗೆ ರೈತ ಸಂಘಟನೆಗಳು ಆಗ್ರಹ

“ರಾಜ್ಯದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಇಂತಹ ಸಮೀಕ್ಷೆಗಳ ಅಗತ್ಯವಿದೆ. ಆದ್ದರಿಂದ ಇದರ ಸತ್ಯಾಸತ್ಯತೆ ಜನತೆ ತಿಳಿಯುವಂತಾಗಲು ಈ ವರದಿ ಬಹಿರಂಗವಾಗುವುದು ಅಗತ್ಯವಾಗಿದೆ. ಯಾವುದೇ ಆಂತರಿಕ ಹಾಗೂ ಬಾಹ್ಯ ಒತ್ತಡಗಳಿಗೆ ಮಣಿಯದೇ ಮುಖ್ಯಮಂತ್ರಿಗಳು ಆಯೋಗದ ವರದಿಯನ್ನು ಸಾರ್ವಜನಿಕ ಚರ್ಚೆಗೆ ಬಿಡುಗಡೆ ಮಾಡುವಂತೆ” ಪತ್ರಿಕಾ ಪ್ರಕಟಣೆ ಮೂಲಕ ರಾಜ್ಯ ಸರ್ಕಾರವನ್ನು ಅವರು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X