ಹಗರಿಬೊಮ್ಮನಹಳ್ಳಿ | ತುಂಗಭದ್ರ ಕ್ರಸ್ಟ್ ಗೇಟ್‌; ಅಧಿಕಾರಿಗಳ ಅಮಾನತುಗೊಳಿಸುವಂತೆ ರೈತರಿಂದ ಮನವಿ

Date:

Advertisements

ಹೊಸಪೇಟೆಯಲ್ಲಿರುವ ತುಂಗಭದ್ರಾ ನೀರನ್ನು ಉಳಿಸುವಂತೆ ಒತ್ತಾಯಿಸಿ ವಿಜಯನಗರ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಪ್ರತಿಭಟನೆ ಮಾಡಲಾಯಿತು. ಆ ಬಳಿಕ ಹಗರಿಬೊಮ್ಮನಹಳ್ಳಿಯ ತಹಶೀಲ್ದಾರ್ ಅವರ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಪತ್ರ ಸಲ್ಲಿಸಿದರು.

ಮನವಿ ಸಲ್ಲಿಸಿ ರಾಜ್ಯ ಕಾರ್ಯದರ್ಶಿ ಗೋಣಿಬಸಪ್ಪ ಬಿ.ಮಾತನಾಡಿ, “ವಿಜಯನಗರ ಜಿಲ್ಲೆಯ ತುಂಗಭದ್ರ ಡ್ಯಾಮ್‌ನ 19 ನೇ ಗೇಟ್ ಸಂಪೂರ್ಣ ಕಿತ್ತು ಹೋಗಿದ್ದು, ಅದನ್ನು ಕೂಡಲೆ ರಿಪೇರಿ ಮಾಡಿಸಿ, ನೀರನ್ನು ರಕ್ಷಿಸಬೇಕು. ಈ ನದಿಯ ನೀರನ್ನು ನಂಬಿ ಮೂರು ರಾಜ್ಯಗಳ 22 ಜಿಲ್ಲೆಯ ರೈತರು ವ್ಯವಸಾಯ ಮಾಡುತ್ತಿದ್ದಾರೆ. ಈಗ ನೀರು ಸಂಪೂರ್ಣ ಪೋಲಾಗುವುದರಿಂದ ಬೆಳೆಗಳಿಗೆ ಹಾಕಿರುವ ಬಂಡವಾಳ ನಷ್ಟವಾಗುತ್ತದೆ” ಎಂದು ಕಳವಳ ವ್ಯಕ್ತಪಡಿಸಿದರು.

ತುಂಗ ಭದ್ರ ಹಿನ್ನೀರಿನ ಏತ ನೀರಾವರಿ ಯೋಜನೆಗಳನ್ನು ನಂಬಿ ಕೋಟ್ಯಾನುಗಟ್ಟಲೆ ಬಂಡವಾಳ ಹಾಕಿ ಹಲವು ರೈತರು ಕೃಷಿ ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕ್ರಸ್ಟ್ ಗೇಟ್ ಒಡೆದು ನೀರು ಹೋಗುತ್ತಿರುವುದರಿಂದ ಹಾಕಿರುವ ಬಂಡವಾಳ ವಾಪಸು ಬರದೇ ರೈತರು ಕಂಗಾಲಾಗಿದ್ದಾರೆ. ಮುಂದಿನ ದಿನಗಳಲ್ಲಿ ಸಾಲದ ಹೊರೆಗೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುವ ಸಂದರ್ಭ ಬರಬಹುದು. ಇದನ್ನು ತಡೆಗಟ್ಟಬೇಕಾದರೆ, ಎಲ್ಲ ರೈತರಿಗೆ ಬೆಳೆ ಪರಿಹಾರ ಕೂಡಲೇ ನೀಡಬೇಕು. ಈ ಬಗ್ಗೆ ಕೇಂದ್ರ ಮತ್ತೆ ರಾಜ್ಯ ಸರ್ಕಾರಗಳು ಸಮೀಕ್ಷೆ ಮಾಡಿ, ಬೆಳೆ ಪರಿಹಾರ ಕೊಡಬೇಕು ಎಂದು ಆಗ್ರಹಿಸಿ ಮನವಿ ಪತ್ರ ಸಲ್ಲಿಸಿದರು.

Advertisements

ಈ ಸಂದರ್ಭದಲ್ಲಿ ಬಿ. ಗೋಣಿಬಸಪ್ಪ, ಎನ್. ವೀರಣ್ಣ, ಹರಟಿಕಾಳಪ್ಪ, ಕೆ. ಶಿವಣ್ಣ, ವಿ. ನಾಗೇಂದ್ರಪ್ಪ, ರವಿಕುಮಾರ್,ಬಿ. ಯಮುನೂರಪ್ಪ, ಬಗಪ್ಪ, ಬಿ. ಬಸವರಾಜ್ ಇನ್ನಿತರರು ಉಪಸ್ಥಿತರಿದ್ದರು.

ಹಕ್ಕೊತ್ತಾಯಗಳು:

  1. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರಿಗೆ ಪರಿಹಾರ ಒದಗಿಸಿ ಕೊಡಬೇಕು.
  2. ತುಂಗಭದ್ರ ಡ್ಯಾಮ್‌ನ ಕ್ರಸ್ಟ್ ಗೇಟ್‌ನ ಚೇನ್ ಕಟ್ಟಾಗಿ ಗೇಟು ಮುರಿಯಲು ಕಾರಣರಾದ ಬೇಜವಾಬ್ದಾರಿ ಅಧಿಕಾರಿಗಳನ್ನು ಈ ಕೂಡಲೆ ಅಮಾನತುಗೊಳಿಸಬೇಕು
  3. ಕೂಡಲೆ ಗೇಟ್ ರಿಪೇರಿ ಮಾಡಬೇಕು.
  4. ಆಯಕಟ್ಟಿನ ರೈತರ ಮುಂಗಾರಿನ ಬೆಳೆಗೆ ಮತ್ತು ಏತ ನೀರಾವರಿ ಯೋಜನೆಯ ಎಲ್ಲ ರೈತರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬೆಳೆ ಪರಿಹಾರವನ್ನು 1 ಎಕರೆಗೆ ರೂ 25,000ದಂತೆ ಕೂಡಲೇ ನೀಡಬೇಕು.
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X