ಹಾಸನ ಪೆನ್‌ಡ್ರೈವ್‌ | ಬ್ಲಾಕ್‌ಮೇಲ್‌ಗಾಗಿ ವಿಡಿಯೋ ಮಾಡಿಕೊಂಡಿದ್ರಾ?; ನ್ಯಾಯಾಂಗ ತನಿಖೆಗೆ ಆಗ್ರಹ

Date:

Advertisements

ಹಾಸನ ಪೆನ್‌ಡ್ರೈವ್ ವಿಚಾರದಲ್ಲಿ ಸುಮೊಟೊ ಪ್ರಕರಣ ದಾಖಲಿಸಿಕೊಂಡು, ನ್ಯಾಯಾಂಗ ತನಿಖೆ ನಡೆಸಬೇಕು. ಪ್ರಕರಣದಲ್ಲಿ ಯಾರು ಅಪರಾಧಿ ಇದ್ದಾರೋ, ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಕ್ರಮ ಕೈಗೊಳ್ಳಬೇಕು ಎಂದು ಹಿರಿಯ ಪತ್ರಕರ್ತ, ಸಾಮಾಜಿಕ ಕಾರ್ಯಕರ್ತ ಆರ್‌.ಪಿ ವೆಂಕಟೇಶ ಮೂರ್ತಿ ಒತ್ತಾಯಿಸಿದ್ದಾರೆ.

ಹಾಸನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು. “ಪ್ರಕರಣ ಗಂಭೀರವಾದದ್ದು. ಒಬ್ಬ ಅಸಹಾಯ ಮಹಿಳೆ ಇಂತಹ ಕೃತ್ಯವನ್ನ ನಿರಾಕರಿಸಿದರೂ, ಆಕೆಯನ್ನ ಬಲವಂತವಾಗಿ ತನ್ನ ಕಾಮವಾಂಚೆ ತೀರಿಸಿಕೊಳ್ಳಲು ಬಳಸಿಕೊಂಡಿದ್ದಾನೆ. ಆತನನ್ನ ಬಂಧಿಸಬೇಕು. ಪ್ರಕರಣದಲ್ಲಿ ಮೊದಲ ಸಾಕ್ಷ್ಯಯಾಗಿ ಬಿಜೆಪಿಯ ದೇವರಾಜೇಗೌಡ ಅವರನ್ನು ಪರಿಗಣಿಸಬೇಕು” ಎಂದು ಹೇಳಿದರು.

“’ಗೃಹ ಸಚಿವ ಅಮಿತ್ ಶಾ, ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರಿಗೆ ಪತ್ರ ಬರೆದಿದ್ದೆ. ಈ ವ್ಯಕ್ತಿಯ ಹಲವಾರು ವಿಡಿಯೋಗಳಿವೆ, ಆತನನ್ನ ಮೈತ್ರಿ ಅಭ್ಯರ್ಥಿ ಮಾಡಬೇಡಿ ಅಂತ ಹೇಳಿದ್ದೆ. ಆದರೂ, ಮೈತ್ರಿ ಮಾಡಿಕೊಂಡಿದ್ದಾರೆ’ ಅಂತ ದೇವರಾಜೇಗೌಡ ಹೇಳಿದ್ದರು. ಆತನ ಹೇಳಿರುವುದು ನಿಜವಾ? 2900ಕ್ಕೂ ಹೆಚ್ಚು ವಿಡಿಯೋಗಳಿವೆ ಎಂದು ದೇವರಾಜೇಗೌಡ ಹೇಳಿದ್ದಾರೆ. ಅದರಲ್ಲಿ, ಒಂದು ವಿಡಿಯೋ ಗಮನಿಸಿದರೆ, ಅದು ಅತ್ಯಾಚಾರ ಎಂಬುದು ಸ್ಪಷ್ಟವಾಗಿದೆ. ಆಕೆಯ ಸಮ್ಮತಿ ಇಲ್ಲದಿದ್ದರೂ, ಆಕೆಯ ಮೇಲೆ ದೌರ್ಜನ್ಯ ಎಸಲಾಗಿದೆ” ಎಂದು ವೆಂಕಟೇಶ ಮೂರ್ತಿ ಅರೋಪಿಸಿದರು.

Advertisements

“ಬಹಳ ಜನ ಪ್ರಕರಣದ ಬಗ್ಗೆ ಮಾತನಾಡುತ್ತಿಲ್ಲ. ಕೋರ್ಟ್‌ನಲ್ಲಿ ಸ್ಟೇ ತಂದಿದ್ದಾರೆ ಎಂಬ ಕಾರಣಕ್ಕೆ ಅವರ ಹೆಸರನ್ನು ನಾನು ಹೇಳುತ್ತಿಲ್ಲ. ನನ್ನನ್ನ ಕೇಳೋರು ಯಾರು ಇಲ್ಲ ಎಂಬ ಅಹಃ ಇಂತಹ ಕೃತ್ಯಕ್ಕೆ ಕಾರಣ. ಆ ಮಹಿಳೆಯರ ಕುಟುಂಬವು ಈ ವಿಡಿಯೋಗಳನ್ನು ನೋಡಿದ್ರೆ, ಆ ಮಹಿಳೆಯರು ಮತ್ತು ಕುಟುಂಬದ ಪರಿಸ್ಥಿತಿ ಏನಾಗಬೇಕು” ಎಂದರು.

“ಕೆಲವರು ಸಮ್ಮತಿಯಿಂದಲೇ ಕೃತ್ಯದಲ್ಲಿ ಪಾಲ್ಗೊಂಡಿರಬಹುದು. ಆದರೆ, ಆ ಕೃತ್ಯವನ್ನ ತಾನೇ ವಿಡಿಯೋ ಮಾಡಿಕೊಂಡಿರುವುದು ವಿಕೃತಿ. ಬ್ಲಾಕ್‌ಮೇಲ್ ಮಾಡುವ ಉದ್ದೇಶದಿಂದ ಆತ ವಿಡಿಯೋ ಮಾಡಿಕೊಂಡಿದ್ದಾನಾ” ಎಂದು ಪ್ರಶ್ನಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಅಧಿಕ ಮಳೆಯಿಂದ ಹಾನಿಗೀಡಾದ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಿ : ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್

 "ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಿಂದ ಸಾಕಷ್ಟು ಮಳೆಯಾಗುತ್ತಿದ್ದು, ಮಳೆಯಿಂದ ಹಾನಿಗೊಳಗಾಗುವ ಪ್ರದೇಶಗಳ ಸಾರ್ವಜನಿಕರ...

ಅಸ್ತಿತ್ವಕ್ಕೆ ಬಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಅಧ್ಯಕ್ಷರಾಗಿ ಸಿಎಂ, 75 ಸದಸ್ಯರಿಗೆ ಅವಕಾಶ

ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು ರಚಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಒಟ್ಟು...

ಬೀದರ್‌ | ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಸಚಿವದ್ವಯರ ಭೇಟಿ; ಪರಿಶೀಲನೆ

ಕಮಲನಗರ ಹಾಗೂ ಔರಾದ್‌ ತಾಲೂಕಿನಲ್ಲಿ ಅಧಿಕ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಉಸ್ತುವಾರಿ...

ಹಾವೇರಿ | ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ

"ಪರಿಶಿಷ್ಟ ವರ್ಗದ ಜನಾಂಗದ ಏಳಿಗಾಗಿ ಶ್ರಮಿಸಿದ ಅರ್ಹ ವ್ಯಕ್ತಿಗಳಿಗೆ ಶ್ರೀ ಮಹರ್ಷಿ...

Download Eedina App Android / iOS

X