ಹಾಸನ | ಹಾಸನಾಂಬ ದೇವಾಲಯ; 9 ದಿನದಲ್ಲಿ 5.5 ಕೋಟಿ ರೂ. ಸಂಗ್ರಹ

Date:

Advertisements

ವರ್ಷದಲ್ಲಿ ಒಮ್ಮೆ ಮಾತ್ರವೇ ತೆರೆಯುವ ಹಾಸನಾಂಬ ದೇವಾಲಯವನ್ನು ದೀಪಾವಳಿ ಸಮಯದಲ್ಲಿ ತೆರೆಯಲಾಗಿದೆ. 9 ದಿನಗಳಿಂದ ತೆರೆದಿರುವ ದೇವಾಲಯದಲ್ಲಿ ಬರೋಬ್ಬರಿ 5.52 ಕೋಟಿ ರೂ. ಹಣ ಸಂಗ್ರಹವಾಗಿದೆ ಎಂದು ತಿಳಿದುಬಂದಿದೆ.

ಹಣ ಸಂಗ್ರಹದ ಬಗ್ಗೆ ದೇವಸ್ಥಾನದ ಆಡಳಿತ ಮಂಡಳಿ ಮಾಹಿತಿ ನೀಡಿದೆ. ದೇವಸ್ಥಾನಕ್ಕೆ ಭೇಟಿ ನೀರುವವರಿಗೆ ವಿಶೇಷ ಪಾಸ್‌ ವ್ಯವಸ್ಥೆಯಿತ್ತು. 1,000 ರೂ. ಮತ್ತು 400 ರೂ.ಗಳ ಪಾಸ್‌ಗಳನ್ನು ವಿತರಿಸಲಾಗುತ್ತಿತ್ತು. ಪಾಸ್‌ ಮತ್ತು ಲಡ್ಡು ಮಾರಾಟ ಹಾಗೂ ಹುಂಡಿಯಿಂದ ಒಂಬತ್ತು ದಿನಗಳಲ್ಲಿ 5.52 ಕೋಟಿ ರೂ. ಸಂಗ್ರಹವಾಗಿದೆ ಎಂದು ಹೇಳಿದೆ.

ಮಂಗಳವಾರವೂ ಸಂಜೆ ದೇವಾಲಯದ ಬಾಗಿಲು ಮುಚ್ಚುವ ಹಿನ್ನೆಲೆಯಲ್ಲಿ ಇಂದು ಹೆಚ್ಚಿನ ಭಕ್ತರು ಭೇಟಿ ನೀಡುವ ಸಾಧ್ಯತೆ ಇದೆ. ಹೀಗಾಗಿ, ಸಂಜೆಯ ವೇಳೆಗೆ ಸಂಗ್ರಹದ ಒಟ್ಟು ಮೊತ್ತ ಸುಮಾರು 6.50 ಕೋಟಿ ರೂ. ದಾಟುವ ಸಾಧ್ಯತೆ ಇದೆ ಎಂದು ಮಂಡಳಿ ಅಂದಾಜಿಸಿದೆ.

Advertisements

ದೇವಾಲಯವು ವರ್ಷದಲ್ಲಿ ಒಮ್ಮೆ ಮಾತ್ರ 10 ದಿನಗಳ ಕಾಲ ದೇವಾಲಯ ತೆರೆದಿರುತ್ತದೆ. ಹೀಗಾಗಿ, ಭಕ್ತರು ನೂಕುನುಗ್ಗಲಿನಲ್ಲಿ ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಈ ಬಾರಿ 1,000 ರೂ. ಮೊತ್ತದ ವಿಶೇಷ ಟಿಕೆಟ್‌ಅನ್ನು 28,052 ಮಂದಿ ಖರೀಸಿದ್ದಾರೆ. 400 ರೂ. ಮೊತ್ತದ ಟಿಕೆಟ್‌ಅನ್ನು 71,885 ಮಂದಿ ಖರೀದಿಸಿದ್ದಾರೆ ಎಂದು ದೇವಸ್ಥಾನದ ಆಡಳಿತಾಧಿಕಾರಿ ಮಾರುತಿ ಗೌಡ ತಿಳಿಸಿದ್ದಾರೆ.

ದೇವಸ್ಥಾನದ ಆವರಣದಲ್ಲಿ ಶುಕ್ರವಾರ ಭಕ್ತರಿಗೆ ವಿದ್ಯುತ್‌ ಶಾಕ್ ತಗುಲಿತ್ತು. ಸುಮಾರು 17 ಮಂದಿ ಗಾಯಗೊಂಡಿದ್ದರು. ಜನರು ಭಯದಿಂದ ಚೆಲ್ಲಾಪಿಲ್ಲಿಯಾಗಿ ಓಡಿದ್ದರಿಂದ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X