ಹಾಸನಾಂಬೆ ಜಾತ್ರಾ ಮಹೋತ್ಸವ | ಜಿಲ್ಲಾಡಳಿತದ ವಿರುದ್ಧ ಜೆಡಿಎಸ್ ಶಾಸಕ ಆಕ್ರೋಶ

Date:

Advertisements

ಹಾಸನದ ಶಕ್ತಿ ದೇವತೆ ಹಾಸನಾಂಬೆ ಜಾತ್ರಾ ಮಹೋತ್ಸವ ಆರಂಭವಾಗಿದ್ದು, ಮೊದಲ ದಿನದಿಂದಲೂ ಗೊಂದಲದ ಗೂಡಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ವಿರುದ್ಧ ಸ್ಥಳೀಯ ಶಾಸಕ ಸ್ವರೂಪ್ ಪ್ರಕಾಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಾಸನಾಂಬ ಜಾತ್ರಾ ಮಹೋತ್ಸವದಲ್ಲಿ ಶಾಸಕರ ಯಾವುದೇ ಮಾತನ್ನು ಗಣನೆಗೆ ತೆಗೆದುಕೊಳ್ಳದೆ ತಮ್ಮದೇ ಅಧಿಕಾರವನ್ನು ನಡೆಸುತ್ತಿದ್ದಾರೆಂದು ಆರೋಪಿಸಿ ಶಾಸಕ ಸ್ವರೂಪ್ ಪ್ರಕಾಶ್ ಅವರು ಜಿಲ್ಲಾಧಿಕಾರಿ ಮತ್ತು ಜಿಲ್ಲಾಡಳಿತದ ವಿರುದ್ಧ ಪ್ರತಿಭಟನೆ ನಡೆಸಿದರು.

ಇದೀಗ ಕಳಸ ಪ್ರತಿಷ್ಠಾಪನೆಗೆ ಕರೆಯದೆ ಇದ್ದಿದ್ದಕ್ಕೆ ಕ್ಷೇತ್ರದ ಶಾಸಕ ಸ್ವರೂಪ್ ಪ್ರಕಾಶ್ ಜಿಲ್ಲಾಧಿಕಾರಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದು, “ನನ್ನನ್ನು ಎರಡು ಲಕ್ಷ ಮಂದಿ ಆಯ್ಕೆ ಮಾಡಿದ್ದಾರೆ, ಅವರಿಗೆ ನಾನು ಉತ್ತರ ಕೊಡಬೇಕು. ಎಷ್ಟೋ ಮಂದಿ ಡಿಸಿಗಳು ಬಂದಿದ್ದಾರೆ, ಹೋಗಿದ್ದಾರೆ. ಈ ರೀತಿ ಯಾರೂ ನಡೆದುಕೊಂಡಿರಲಿಲ್ಲ” ಎಂದು ಹಾಸನಾಂಬೆ ದೇವಾಲಯದ ಎದುರು ಪ್ರತಿಭಟಿಸಿದರು.

Advertisements

“ದೇವಾಲಯದ ನೂತನ ಕಳಸ ಪ್ರತಿಷ್ಠಾಪನೆಗೂ ನನ್ನನ್ನು ಆಹ್ವಾನಿಸಿಲ್ಲ. ದೇವಾಲಯದಲ್ಲಿ ಜಿಲ್ಲಾಧಿಕಾರಿ ಪತಿಯೊಂದಿಗೆ ಹೋಮ ಹವನ ಮಾಡಿದ್ದು, ತಮ್ಮ ಸಂಬಂಧಿಕರನ್ನು ಕರೆದು ದೇವಾಲಯದಲ್ಲಿ ವಿಶೇಷ ಕಾರ್ಯಕ್ರಮ ಮಾಡುವುದು ಎಷ್ಟು ಸರಿ” ಎಂದು ಪ್ರಶ್ನಿಸಿದರು

“ಹೆಲಿಟೂರಿಸಂ ಉದ್ಘಾಟನೆ, ಪ್ಯಾರಾ ಸೈಲಿಂಗ್ ಹಾಗೂ ಇತರೆ ಕಾರ್ಯಕ್ರಮಗಳಿಗೂ ನನ್ನನ್ನು ಕರೆದಿಲ್ಲ. ಬರಗಾಲದಂತ ಪರಿಸ್ಥಿತಿಯಲ್ಲಿ ಹೆಲಿಟೂರಿಸಂಗೆ ಒಬ್ಬರಿಗೆ ₹4,300 ದರ ನಿಗದಿ ಮಾಡಿದ್ದಾರೆ. ಇಷ್ಟೊಂದು ಹಣ ಏಕೆ ನಿಗದಿ ಮಾಡಿದ್ದೀರೆಂದು ಪ್ರಶ್ನಿಸಿದರೆ, ಜಿಲ್ಲಾಧಿಕಾರಿ ಹಾರಿಕೆಯ ಉತ್ತರ ನೀಡುತ್ತಾರೆ” ಎಂದು ಆರೋಪಿಸಿದರು.

“ಗಂಡ ಹೆಂಡತಿ ಮಾತ್ರ ಹೋಮ ಹವನ ಮಾಡಿಸಿದ್ದೀರಿ. ಬೇರೆಯವರು ಲೆಕ್ಕಕ್ಕೆ ಇಲ್ಲವಾ. ನಾನೇನು ದನ ಕಾಯಲು ಇದ್ದೀನಾ. ನಿಮಗೊಂದು ನ್ಯಾಯ, ಬೇರೆಯವರಿಗೆ ಒಂದು ನ್ಯಾಯಾನಾ” ಎಂದು ಜಿಲ್ಲಾಧಿಕಾರಿ ವಿರುದ್ಧ ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಜಾತಿ ಗಣತಿಗೆ ವಿರೋಧ ವ್ಯಕ್ತ ಪಡಿಸಿರುವುದು ಖಂಡನೀಯ: ಸಿದ್ದು ಬಿ.ಎಸ್ ಸೂರನಹಳ್ಳಿ

ಪ್ರತಿಭಟನೆ ವೇಳೆ ಸ್ಥಳಕ್ಕೆ ಬಂದ ಜಿಲ್ಲಾಧಿಕಾರಿಯನ್ನು ಸ್ವರೂಪ್‌ ಪ್ರಕಾಶ್ ಹಾಗೂ ಸ್ಥಳೀಯ ಜೆಡಿಎಸ್ ಮುಖಂಡರು ತರಾಟೆಗೆ ತೆಗೆದುಕೊಂಡಿದ್ದು, “ಬರಗಾಲದಂತಹ ಸಂದರ್ಭದಲ್ಲಿ ಕಚೇರಿಯಲ್ಲಿ ಇದ್ದು, ಜನರ ಸಮಸ್ಯೆ ಆಲಿಸಬೇಕಾದ ನೀವು ಕುಟುಂಬದ ಸದಸ್ಯರೊಂದಿಗೆ ಹೋಮ–ಹವನ ಕಾರ್ಯಕ್ರಮ ಮಾಡಿರುವುದು ಖಂಡನಾರ್ಹ” ಎಂದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X