ಹಾಸನ | ಬೇಲೂರು ಚನ್ನಕೇಶವ ದೇಗುಲ: ಅಡ್ಡೆಗಾರರು – ಆಡಳಿತ ಮಂಡಳಿ ನಡುವೆ ತಿಕ್ಕಾಟ

Date:

Advertisements

ಬೇಲೂರಿನ ಐತಿಹಾಸಿಕ ಚನ್ನಕೇಶವಸ್ವಾಮಿ ದೇವಾಲಯದಲ್ಲಿ ಅಡ್ಡೆಹೊರುವವರು ಮತ್ತು ಆಡಳಿತ ಮಂಡಳಿ ಮುಖಂಡರ ನಡುವಿನ ಜಗಳ ಬೀದಿಗೆ ಬಂದಿದೆ. ಗುರುವಾರ ನಡೆದ ಚನ್ನಕೇಶವಸ್ವಾಮಿ ಅನಂತ ಪದ್ಮನಾಭ ಉತ್ಸವದಲ್ಲಿ ಅಡ್ಡಗಾರರು ಗೈರಾಗಿದ್ದು, ಪ್ರತಿಭಟನೆ ನಡೆಸಿದ್ದಾರೆ. ಬೇಲೂರು ದೇವಾಲಯವು ವಿಶ್ವ ಪರಂಪರೆ ಪಟ್ಟಿಗೆ ಸೇರಿದ ಕೆಲವೇ ವಾರಗಳಲ್ಲಿ ಈ ಗಲಾಟೆ ನಡೆದಿದ್ದು, ಸ್ಥಳೀಯರಲ್ಲಿ ಅಸಮಾಧಾನ ಮೂಡಿಸಿದೆ.

ಉತ್ಸವದಲ್ಲಿ ಅಡ್ಡೆ ಹೊರುವ ಅಡ್ಡಗಾರರಿಗೆ ದೇವಾಲಯ ಅಡಳಿತ ಮಂಡಳಿಯು ಅಗೌರವ ತೋರುತ್ತಿದೆ ಎಂದು ಆರೋಪಿ ಅಡ್ಡೆಗಾರರು ಆಡ್ಡೆ ಹೊರಲು ನಿರಾಕರಿಸಿದ್ದರು. ಅವರು ಗೈರಾಗಿದ್ದರಿಂದ ಅಧಿಕಾರಗಳೇ ಅಡ್ಡೆ ಹೊತ್ತು ಉತ್ಸವ ನಡೆಸಿದ್ದಾರೆ.

ಅಲ್ಲದೆ, ಅಡ್ಡೆಗಾರರು ಬಾರದ ಹಿನ್ನೆಲೆಯಲ್ಲಿ ಅಡ್ಡೆಯನ್ನು ಟ್ರ್ಯಾಕ್ಟರ್‌ನಲ್ಲಿ ಮೆರವಣಿಗೆ ಮಾಡಲು ತಹಶೀಲ್ದಾರ್ ಮುಂದಾಗಿದ್ದರು. ಅದಕ್ಕಾಗಿ, ಟ್ರ್ಯಾಕ್ಟರ್‌ಅನ್ನು ದೇವಾಲಯದ ಆವರಣಕ್ಕೆ ಕರೆಸಿದ್ದರು. ಅವರ ನಡೆಯನ್ನು ದೇವಾಲಯದ ಅರ್ಚಕರು ಮತ್ತು ಭಕ್ತರು ಖಂಡಿಸಿದ್ದಾರೆ. ಬಳಿಕ, ಕಂದಾಯ ಇಲಾಖೆಯ ಅಧಿಕಾರಿಗಳೇ ಅಡ್ಡೆ ಹೊತ್ತು ಉತ್ಸವ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Advertisements

ಅಧಿಕಾರಿಗಳು ಅಡ್ಡೆ ಹೊತ್ತಿದ್ದನ್ನು ಖಂಡಿಸಿ ಅಡ್ಡೆಗಾರರು ಪ್ರತಿಭಟನೆ ನಡೆಸಿದ್ದಾರೆ. ಅಡ್ಡೆಗಾರರೇ ಅಡ್ಡೆ ಹೊರುವ ಸಂಪ್ರದಾಯ ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿದೆ. ಆದರೆ, ತಹಶೀಲ್ದಾರ್ ಮಮತಾ ಅವರು ಸಂಪ್ರದಾಯವನ್ನು ಮುರಿದಿದ್ದಾರೆ ಎಂದು ಆರೋಪಿಸಿದ್ದಾರೆ.

ಪ್ರತಿವರ್ಷ ಬೇಲೂರಿನ ಪ್ರಮುಖ ನಾಲ್ಕು ಬೀದಿಗಳಲ್ಲಿ ಉತ್ಸವ ಸಾಗುತ್ತಿತ್ತು. ಆದರೆ, ಈ ವರ್ಷ ಅಡ್ಡೆಗಾರರ ಬಾರದ ಹಿನ್ನೆಲೆಯಲ್ಲಿ ದೇವಾಲಯದ ಅರವಣದಲ್ಲಿಯೇ ಉತ್ಸವ ನಡೆದಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X