ಹಾಸನ | ಪ್ರಜ್ವಲ್‌ ಪರ ಪ್ರಚಾರ; ಬಿಜೆಪಿಗರ ಮೇಲೆ ಬಿಜೆಪಿಗರಿಂದಲೇ ಹಲ್ಲೆ?

Date:

Advertisements

ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ 14 ದಿನಗಳಷ್ಟೇ ಬಾಕಿ ಇವೆ. ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಯಲ್ಲಿ ಕಣಕ್ಕಿಳಿದಿವೆ. ಆದರೆ, ಹಲವೆಡೆ, ಸ್ಥಳೀಯ ಬಿಜೆಪಿ-ಜೆಡಿಎಸ್‌ ನಾಯಕರು, ಕಾರ್ಯಕರ್ತರಲ್ಲಿ ಒಂದಾಣಿಕೆ ಕಾಣಿಸುತ್ತಿಲ್ಲ. ಪರಿಣಾಮ, ಹಲವೆಡೆ ಗಲಾಟೆಗಳು ವರದಿಯಾಗುತ್ತಿವೆ.

ಇತ್ತೀಚೆಗೆ, ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್‌ ಮಂಜುನಾಥ್ ಪರ ಪ್ರಚಾರ ಮಾಡಿದ್ದಕ್ಕೆ ಕುಣಿಗಲ್‌ನಲ್ಲಿ ಜೆಡಿಎಸ್‌ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿತ್ತು. ಇದೀಗ, ಹಾಸನದಲ್ಲಿಯೂ ಅಂತದ್ದೇ ಪ್ರಕರಣ ನಡೆದಿದೆ. ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರವಾಗಿ ಪ್ರಚಾರಕ್ಕೆ ಹೋಗಿದ್ದಕ್ಕೆ ಬಿಜೆಪಿ ಮುಖಂಡನ ಮೇಲೆ ನಡೆದಿದೆ. ಹಲ್ಲೆ ನಡೆಸಿದವರೂ ಬಿಜೆಪಿ ಕಾರ್ಯಕರ್ತರೇ ಆಗಿದ್ದಾರೆ ಎಂದು ಹೇಳಲಾಗುತ್ತಿದೆ.

ಶುಕ್ರವಾರ, ಹಾಸನ ನಗರದ ಎಂ.ಜಿ ರಸ್ತೆಯಲ್ಲಿರುವ ಬಿಜೆಪಿ ಮುಖಂಡನ ಅಂಗಡಿ ಮೇಲೆ 30ಕ್ಕೂ ಹೆಚ್ಚು ಮಂದಿಯ ಗುಂಪು ದಾಳಿ ನಡೆಸಿದೆ. ಬಿಜೆಪಿ ಮುಖಂಡ ಐನೆಟ್ ವಿಜಯ್ ಕುಮಾರ್ ಹಾಗೂ ಅವರ ಜೊತೆಗಿದ್ದ ಪ್ರಮೋದ್ ಮತ್ತು ಸಂದೇಶ ಎಂಬವರ ಮೇಲೆ ಹಲ್ಲೆ ನಡೆಸಿದೆ. ಮೂವರು ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆ ನಡೆಸಿದ ಆರೋಪಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂಗೌಡ ಬೆಂಬಲಿಗರು ಎಂದು ಆರೋಪಿಸಲಾಗಿದೆ.

Advertisements

ವಿಜಯ್ ಅವರು ಕಳೆದ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಪ್ರೀತಂಗೌಡ ಅವರಿಂದ ದೂರ ಉಳಿದಿದ್ದರು. ಇದೀಗ, ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ಪರ ಪ್ರಚಾರದಲ್ಲಿ ವಿಜಯ್ ಭಾಗಿಯಾಗಿದ್ದರು. ಹೀಗಾಗಿಯೇ ಹಲ್ಲೆ ನಡೆದಿದೆ ಎಂದು ಹೇಳಲಾಗುತ್ತಿದೆ.

ಆಸ್ಪತ್ರೆಗೆ ಹಾಸನ ಜೆಡಿಎಸ್ ಶಾಸಕ ಸ್ವರೂಪ್ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X