ಹಾಸನ | ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನವೂ ಯಶಸ್ವಿ

Date:

Advertisements

ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹಳ್ಳಿಯೂರು ಗ್ರಾಮದಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಆರಂಭಿಸಿದ್ದು, ಎರಡನೇ ದಿನದ ಕಾರ್ಯಾಚರಣೆಯೂ ಯಶಸ್ವಿಯಾಗಿದೆ.

ಇಟಿಎಫ್ ಸಿಬ್ಭಂದಿಗಳು ಹಳ್ಳಿಯೂರು ಗ್ರಾಮದಲ್ಲಿ ಪುಂಡಾನೆ ಇರುವ ಸ್ಥಳವನ್ನು ಇಂದು ಬೆಳಿಗ್ಗೆ ಪತ್ತೆ ಹಚ್ಚಿದ್ದು, ಪಾರ್ವತಮ್ಮ ಬೆಟ್ಟದ ಬಳಿ ನಿಂತಿದ್ದ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಸಂಪೂರ್ಣವಾಗಿ ಯಶಸ್ವಿಯಾಗಿದ್ದಾರೆ.

ಈ ಅಡಕ-ಬಡಕ ಹೆಸರಿನ ಕಾಡಾನೆಗೆ, ವೈದ್ಯರು ಅರವಳಿಕೆ ಚುಚ್ಚುಮದ್ದು ‌ನೀಡಿದ್ದರು. ಹಾಗಾಗಿ ಆ ಕಾಡಾನೆಯೂ ಸ್ವಲ್ಪ ದೂರ ಓಡಿ ಪ್ರಜ್ಞೆ ತಪ್ಪಿ ಬಿದ್ದಿತ್ತು. ಈ ದೈತ್ಯಾಕಾರದ ಕಾಡಾನೆಗೆ ನೀರು ಹಾಕಿ ಆರೈಕೆ ಮಾಡಿದ ಬಳಿಕ ಅರಣ್ಯ ಇಲಾಖೆ ಸಿಬ್ಬಂದಿಗಳು, ಕಾಲಿಗೆ ಹಗ್ಗಕಟ್ಟಿದ್ದಾರೆ. ಅಲ್ಲದೇ ವೈದ್ಯರು ರಿವರ್ಸಲ್ ಇಂಜೆಕ್ಷನ್ ನೀಡಿದ್ದಾರೆ.

Advertisements

ಅಡಕ-ಬಡಕ ಎಂಬ ಕಾಡಾನೆ ಎಚ್ಚರಗೊಂಡ ಕೂಡಲೇ ಘೀಳಿಟ್ಟು ಅಬ್ಬರಿಸಿದ್ದು, ಸಾಕಾನೆಗಳನ್ನು ಹೈರಾಣಗಿಸಿದೆ. ಇನ್ನೂ ಕಾಡಾನೆಯನ್ನು ಎಳೆದು ತರಲು ಸಾಕಾನೆಗಳು ಹರಸಾಹಸಪಡುತ್ತಿವೆ.

ಈ ಸುದ್ದಿ ಓದಿದ್ದೀರಾ? ಮತ್ತೆ ಕೆಪಿಎಸ್‌ಸಿ ಎಡವಟ್ಟು : ಮೇ 3ರ ಕೆಎಎಸ್ ಮುಖ್ಯ ಪರೀಕ್ಷೆಗೆ ಮಧ್ಯರಾತ್ರಿ 12ಕ್ಕೆ ಹಾಲ್ ಟಿಕೆಟ್ ವಿತರಣೆ!

ಈ ಕಾರ್ಯಾಚರಣೆಯೂ ಡಿಎಫ್‌ಒ ಸೌರಭ್‌ಕುಮಾರ್, ಆರ್‌ಎಫ್‌ಒ ಹೇಮಂತ್ ನೇತೃತ್ವದಲ್ಲಿ ನಡೆದಿದ್ದು, ಸಾಕಾನೆಗಳಾದ ಕಂಜನ್, ಕರ್ನಾಟಕ ಭೀಮ, ಮಹೇಂದ್ರ, ಧನಂಜಯ, ಏಕಲವ್ಯ, ಸುಗ್ರೀವ ಎಂಬ ಆನೆಗಳು ಇದ್ದವು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X