ಹಾಸನ l ಪಿಡಿಒ ರಘುನಾಥ್‌ ವಿರುದ್ಧ ಗೋಣಿಸೋಮನಹಳ್ಳಿ ಗ್ರಾಮಸ್ಥರ ಪ್ರತಿಭಟನೆ

Date:

Advertisements

ಪಿಡಿಒ ರಘುನಾಥ್‌ ಅವರನ್ನು ಕೂಡಲೇ ಸೇವೆಯಿಂದ ವಜಾಮಾಡುವಂತೆ ಬೇಲೂರು ತಾಲೂಕಿನ ಗೋಣಿಸೋಮನಹಳ್ಳಿಯ ಸಂತ್ರಸ್ತ ಕುಟುಂಬಸ್ಥರು ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಗೋಣಿಸೋಮನಹಳ್ಳಿ ಗ್ರಾಮಸ್ಥರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಮಾತನಾಡಿ, “‌ಗ್ರಾಮಠಾಣಾ ಜಾಗಕ್ಕೆ ಸೇರಿದ ಸುಮಾರು 12 ಅಡಿ ಜಾಗದಲ್ಲಿ ರಸ್ತೆಗೆ ಜಾಗ ಬಿಡಿಸಿಕೊಡುವಂತೆ ಬೇಲೂರು ತಾಲೂಕು ಕಾರ್ಯ ನಿರ್ವಹಣಾಧಿಕಾರಿ ಸ್ಥಳ ಪರಿಶೀಲನೆ ಮಾಡಿ ಮೌಖಿಕವಾಗಿ ಸ್ಥಳದಲ್ಲಿ ಪಿಡಿಒ ರಘುನಾಥ್ ಅವರಿಗೆ ಆದೇಶ ನೀಡಿದರೂ ರಸ್ತೆ ಬಿಡಿಸಿಕೊಡುವಲ್ಲಿ ವಿಫಲರಾಗಿದ್ದಾರೆ” ಎಂದು ಪ್ರತಿಭಟನಾಕಾರರು ಆರೋಪಿಸಿದರು.

“ಅನಾಧಿಕಾಲದಿಂದಲೂ ಮನೆಕಟ್ಟಿಕೊಂಡು 12 ಅಡಿ ಖಾಲಿ ನಿವೇಶನದಲ್ಲಿ ತಿರುಗಾಡಿಕೊಂಡು ಬಂದಿದ್ದೇವೆ. ಆದರೆ ನಮ್ಮ ಗ್ರಾಮದ ಮೊಗಣ್ಣೆಗೌಡ ಮತ್ತು ಇತರರು ಈ ಜಾಗದಲ್ಲಿ ನಮ್ಮ ಕುಟುಂಬಕ್ಕೆ ತಿರುಗಾಡದಂತೆ ತೊಂದರೆ ಕೊಡುತ್ತಿದ್ದಾರೆ. ಅನೇಕ ಬಾರಿ ಪಿಡಿಒ ಅವರಿಗೆ ದೂರು ನೀಡಿದರೂ ಪ್ರಯೋಜನವಾಗುತ್ತಿಲ್ಲ” ಎಂದು ಗ್ರಾಮದ ಜಯಕುಮಾರ್ ಆಕ್ರೋಶಾ ವ್ಯಕ್ತಪಡಿಸಿದರು.

Advertisements

“ನಮ್ಮ ಮನೆಯ ಹೆಣ್ಣುಮಕ್ಕಳು, ವೃದ್ಧರು, ದವಸ ಧಾನ್ಯ, ನೀರು ತರಲು ತುಂಬಾ ತೊಂದರೆಯಾಗುತ್ತಿದೆ. ಪಿಡಿಒ ರಘುನಾಥ್ ಅವರನ್ನು ಕೂಡಲೇ ಸೇವೆಯಿಂದ ವಜಾ ಮಾಡಬೇಕು” ಎಂದು ಆಗ್ರಹಿಸಿದರು.

ಇದನ್ನೂ ಓದಿದ್ದೀರಾ?ಹಾಸನ l ಸಚಿವ ರಾಜಣ್ಣ ವಿರುದ್ಧ ಅವಹೇಳನ; ವಕೀಲ ದೇವರಾಜೇಗೌಡ ಮಾತಿಗೆ ಕಾಂಗ್ರೆಸ್ ಮುಖಂಡರ ಖಂಡನೆ

“ನಮ್ಮ ಕಷ್ಟವನ್ನು ಮನಗಂಡು ಜಿಲ್ಲಾಧಿಕಾರಿಗಳು ನ್ಯಾಯ ಕೊಡಿಸಬೇಕು” ಎಂದಿ ಮನವಿ ಮಾಡಿದರು.

ಈ ವೇಳೆ ನೊಂದ ಕುಟುಂಬಸ್ಥರು, ಗ್ರಾಮ ಮುಖಂಡರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X