ಹಾಸನ | ಮನೆಗೆ ಹೋಗುವ ಖಾತರಿಯಿಂದ ಕಾಂಗ್ರೆಸ್‌ ಗ್ಯಾರಂಟಿ ಘೋಷಣೆ: ರೇವಣ್ಣ

Date:

  • ʼಬೆಂಗಳೂರಿಗೆ ಕುಡಿಯುವ ನೀರು ಕೊಟ್ಟಿದ್ದು ದೇವೇಗೌಡರುʼ
  • ʼಕಾವೇರಿ ಅಚ್ಚುಕಟ್ಟು ರೈತರಿಗೆ ಅನ್ಯಾಯ ಮಾಡಿದ್ದು ಕಾಂಗ್ರೆಸ್ʼ

ದೇಶದ ಬಹುತೇಕ ರಾಜ್ಯಗಳಲ್ಲಿ ಡಿಎಂಕೆ, ಟಿಆರ್‌ಎಸ್, ಎಎಪಿ, ಟಿಎಂಸಿ ಸೇರಿದಂತೆ ಹಲವು ಪ್ರಾದೇಶಿಕ ಪಕ್ಷಗಳು ರಾಷ್ಟ್ರೀಯ ಪಕ್ಷಗಳಿಗೆ ಸೆಡ್ಡು ಹೊಡೆದು ಅಭಿವೃದ್ಧಿ ಮಾಡುತ್ತಿವೆ. ಹಾಸನ ಜಿಲ್ಲೆ ಹಾಗೂ ರಾಜ್ಯದಲ್ಲಿಯೂ ಅದೇ ರೀತಿಯ ಪ್ರಗತಿ ಕಾಣಲು ಜೆಡಿಎಸ್‌ ಬೆಂಬಲಿಸಿ ಎಂದು ಮತದಾರರಲ್ಲಿ ಮಾಜಿ ಸಚಿವ ಎಚ್‌.ಡಿ ರೇವಣ್ಣ ಮನವಿ ಮಾಡಿದರು.

- Advertisement -

ಹಾಸನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, “ಗುರುವಾರ ಜೆಡಿಎಸ್‌ನ ಪ್ರಣಾಳಿಕೆ ಬಿಡುಗಡೆ ಆಗಿದೆ. ಅದರಲ್ಲಿ ನಾವು ಏನು ಮಾಡುತ್ತೇವೆಂದು ಹೇಳಿದ್ದೇವೆ. ಪ್ರಾದೇಶಿಕ ಪಕ್ಷ ಅಧಿಕಾರದಲ್ಲಿರೋ ರಾಜ್ಯಗಳಲ್ಲಿ ರಾಷ್ಟ್ರೀಯ ಪಕ್ಷಗಳಿಗೆ ಸೆಡ್ಡು ಹೊಡೆದು ಅಭಿವೃದ್ಧಿ ನಡೆಯುತ್ತಿದೆ. ಇಲ್ಲೂ ಹಾಗೆಯೇ ಆಗಬೇಕು ಎಂಬುದು ನಮ್ಮ ಕಾಳಜಿ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

“ಚುನಾವಣೆ ಸಮೀಪಿಸಿದಾಗ ಎರಡೂ ಪಕ್ಷಗಳ ರಾಷ್ಟ್ರೀಯ ನಾಯಕರು ರಾಜ್ಯದತ್ತ ಬರುತ್ತಾರೆ. ಚುನಾವಣೆ ಮುಗಿದ ಬಳಿಕ ತಿರುಗಿಯೂ ನೋಡಲ್ಲ. ಕೇಂದ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಅಧಿಕಾರದಲ್ಲಿದ್ದಾಗ ರಾಜ್ಯಕ್ಕೆ ಕೊಡುಗೆ ಏನು? ಇದನ್ನು ನಮ್ಮ ಜನ ಅರ್ಥ ಮಾಡಿಕೊಳ್ಳಬೇಕು” ಎಂದರು.

“ಈಗ ಗ್ಯಾರಂಟಿ ಕಾರ್ಡ್‌ ಕೊಡುವ ಕಾಂಗ್ರೆಸ್ 5 ವರ್ಷ ಅಧಿಕಾರದಲ್ಲಿ ಇದ್ದಾಗ ಏಕೆ ಕೊಡಲಿಲ್ಲ? ಈಗ ಮನೆಗೆ ಹೋಗೋದು ಗ್ಯಾರಂಟಿ ಎಂದು ಕಾರ್ಡ್ ಕೊಡುತ್ತಿದ್ದಾರೆ” ಎಂದು ವ್ಯಂಗ್ಯವಾಡಿದರು.

ಈ ಸುದ್ದಿ ಓದಿದ್ದೀರಾ? ಹೊಳೆನರಸೀಪುರ ಕ್ಷೇತ್ರ | ರೇವಣ್ಣರ  ಗೆಲುವಿಗೆ ಅವರ `ಬಾಯಿ’ ತೊಡಕಾಗಲಿದೆಯೇ?

“ಬೆಂಗಳೂರಿಗೆ ಕುಡಿಯುವ ನೀರು ಕೊಟ್ಟಿದ್ದು ದೇವೇಗೌಡರು. ಇವರು ಕೃಷ್ಣ ಬಿಟ್ಟು ಕಾವೇರಿ ಹಿಡಿದು ಕೊಂಡಿದ್ದಾರೆ. ಈಗ ಆ ಬಗ್ಗೆ ಚಕಾರ ಎತ್ತುತ್ತಿಲ್ಲ. ಕಾವೇರಿ ಅಚ್ಚುಕಟ್ಟು ರೈತರಿಗೆ ಅನ್ಯಾಯ ಮಾಡಿದ್ದು ಕಾಂಗ್ರೆಸ್. ಬಿಜೆಪಿ-ಕಾಂಗ್ರೆಸ್ ಒಗ್ಗೂಡಿ ಅಡೆಸ್ಟ್ ಮೆಂಟ್ ರಾಜಕೀಯ ಮಾಡುತ್ತಿವೆ. ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ತೆಗೆಯಲು ಕಾಂಗ್ರೆಸ್-ಬಿಜೆಪಿ ಒಂದಾಗಿವೆ” ಎಂದು ದೂರಿದರು.

“ನಾವು ಯಾರೊಂದಿಗೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ರಾಜ್ಯಾದ್ಯಂತ 123 ಸ್ಥಾನ ಗೆದ್ದು ಅಧಿಕಾರ ಹಿಡಿಯಬೇಕು. ಜೆಡಿಎಸ್ ಅಧಿಕಾರಕ್ಕೆ ಬರುವುದು ನಿಶ್ಚಿತ. ಆ ನಂತರ 2(ಬಿ) ಮೀಸಲಾತಿ ಮರು ಜಾರಿ ಮಾಡಲಾಗುವುದು” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಗ್ರಾಮಸ್ಥರೊಂದಿಗೆ ಸಿಎಂ ಡಿಕೆಶಿ ಸಂವಾದ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ...

ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ...

ಉಡುಪಿ | ಆಲೂರು ಕೊರಗರ ಭೂಮಿ ಸಮಸ್ಯೆ ಬಗೆಹರಿಸಲು ಕ್ರಮ: ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ

ಕುಂದಾಪುರ ತಾಲೂಕಿನ ಆಲೂರು ಮತ್ತು ಹರ್ಕೂರು ಗ್ರಾಮದ ಕೊರಗ ಕುಟುಂಬಗಳ ಭೂಮಿ...

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ: ಲೆಕ್ಕಾಚಾರವೇನು?

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು...