ನಿರಂತರವಾಗಿ ಸುರಿಯುತ್ತರುವ ಮಳೆಯಿಂದ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಎಲ್ಲ ಹಳ್ಳ ಕೊಳ್ಳಗಳೂ ತುಂಬಿದ್ದು, ಐಗೂರು ಹೊಳೆಯೂ ಭರ್ತಿಯಾಗಿದ್ದು, ಸೇತುವೆ ಮೇಲೆ ನೀರು ಉಕ್ಕಿ ಹರಿಯುತ್ತಿದೆ. ಪರಿಣಾಮ ಸೇತುವೆ ದಾಟಲು ವಾಹನ ಸವಾರರು ಹರಸಾಹಸ ಪಟ್ಟಿದ್ದಾರೆ.
ಈ ಸುದ್ದಿ ಓದಿದ್ದೀರಾ? ಧಾರವಾಡ | ಮಳೆ ರಜೆ; ಶನಿವಾರ ಪೂರ್ಣ ತರಗತಿ ನಡೆಸಲು ಸೂಚನೆ
ಭಾರೀ ಮಳೆ ಹಿನ್ನೆಲೆಯಲ್ಲಿ ಕುಂಬಾರಹಳ್ಳಿ-ಐಗೂರು-ಹೆತ್ತೂರು ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಸಕಲೇಶಪುರ-ಹೆತ್ತೂರು ಕಡೆ ಹಾದುಹೋಗುವ ಬದಲು ಯಸಳೂರು-ಶುಕ್ರವಾರಸಂತೆ ಮಾರ್ಗದಿಂದ ಪ್ರಯಾಣ ಬೆಳೆಸಬಹುದಾಗಿದೆ.
ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.