ಹಾಸನ | ಎಲ್ಲರಿಂದ ಸಮ್ಮತಿ ಸಿಕ್ಕರೆ ಮಾತ್ರ ಸ್ಪರ್ಧೆ: ಕೆ ಎಂ ರಾಜೇಗೌಡ

Date:

  • ಹಾಸನ ಕ್ಷೇತ್ರದ ಜೆಡಿಎಸ್ ಟಿಕೆಟ್ ಗೊಂದಲ ಕುರಿತು ಸ್ಪಷ್ಟನೆ
  • ನಾನು ಯಾರ ಪರ, ವಿರುದ್ಧವೂ ಇಲ್ಲ ಎಂದ ರಾಜೇಗೌಡ

ನಾನು ಯಾರ ಪರವಾದ ಅಭ್ಯರ್ಥಿಯಲ್ಲ. ಜೆಡಿಎಸ್‌ನಲ್ಲಿ ಎಲ್ಲರಿಂದಲೂ ಸಮ್ಮತಿ ಸಿಕ್ಕರೆ ಮಾತ್ರ ಸ್ಪರ್ಧೆಗಿಳಿಯುವೆ ಎಂದು ಪಕ್ಷದ ಹಿರಿಯ ಮುಖಂಡ ಕೆ.ಎಂ ರಾಜೇಗೌಡ ಸ್ಪಷ್ಟಪಡಿಸಿದ್ದಾರೆ.

ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಾಕಾಂಕ್ಷಿಗಳಲ್ಲಿ ನನ್ನ ಹೆಸರು ಪ್ರಸ್ತಾಪವಾದ ನಂತರ ನನ್ನ ಬಗ್ಗೆ ವಿಭಿನ್ನ ಹೇಳಿಕೆಗಳು ಕೇಳಿ ಬರುತ್ತಿವೆ. ನಾನು ಯಾರ ಪರ, ವಿರುದ್ಧವೂ ಇಲ್ಲ. ಯಾರ ಬಿಂಬಿತ ಅಭ್ಯರ್ಥಿಯೂ ಅಲ್ಲ” ಎಂದು ಹೇಳಿದರು.

“ಭವಾನಿ ರೇವಣ್ಣ ಅವರೇ ಅಭ್ಯರ್ಥಿ ಎಂಬ ಮಾತುಗಳು ಈಗ ಕೇಳಿಬರುತ್ತಿವೆ. ಆದರೆ, ಪಕ್ಷದ ಎಲ್ಲ ಮುಖಂಡರೂ ಸಂಘಟಿತರಾಗಿ ಚುನಾವಣೆಯಲ್ಲಿ ಬೆಂಬಲ ನೀಡಿ ಹೋರಾಟ ಮಾಡುವ ನಿಖರ ಭರವಸೆ ನೀಡಿದರೆ ಮತ್ತು ನಾನು ಸರ್ವಸಮ್ಮತ ಅಭ್ಯರ್ಥಿಯಾದರೆ ಮಾತ್ರ ಸ್ಪರ್ಧಿಸುತ್ತೇನೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಪಕ್ಷದಲ್ಲಿ ಒಮ್ಮತ ಮೂಡಿ ಸ್ಪರ್ಧೆಗಿಳಿಯಿರಿ ಎಂದರೆ ಸ್ಪರ್ಧಿಸುವೆ. ಇಲ್ಲವೇ ಪಕ್ಷದ ಮುಖಂಡರು ಸೂಚಿಸುವ ಅಭ್ಯರ್ಥಿ ಪರ ಪ್ರಚಾರ ಮಾಡುವೆ” ಎಂದು ಹೇಳಿದರು.

“ಚುನಾವಣೆಯಲ್ಲಿ ಜೆಡಿಎಸ್‌ನ ಅಧಿಕೃತ ಅಭ್ಯರ್ಥಿ ಘೋಷಣೆ ಆಗುವವರೆಗೂ ನಾನು ಪ್ರಚಾರ ಮಾಡಲು ಹೋಗುವುದಿಲ್ಲ. ನಮ್ಮ ಪಕ್ಷದಲ್ಲಿ ಒಗ್ಗಟ್ಟಿರಬೇಕು. ಒಟ್ಟಾಗಿ ಎಂಬುದು ನನ್ನ ಅಪೇಕ್ಷೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಸಿಲ ಧಗೆಗೆ ಬೆಂದ ಜನರಿಗೆ ತಂಪೆರೆದ ಮಳೆ: ಶನಿವಾರ ಬೆಳಿಗ್ಗೆ ರಾಜ್ಯದ ಹಲವೆಡೆ ಮಳೆ

ತಾಪಮಾನ ಹೆಚ್ಚಳದಿಂದ ಬಸವಳಿದ್ದಿದ್ದ ರಾಜ್ಯದ ಜನತೆಗೆ ತಡವಾಗಿ ಆರಂಭವಾದ ಪೂರ್ವ ಮುಂಗಾರು...

ಬೆಂಗಳೂರಿಗೆ ಪ್ರಧಾನಿ ಮೋದಿ; ಸಂಚಾರ ಮಾರ್ಗ ಬದಲಾವಣೆ

ಲೋಕಸಭಾ ಚುನಾವಣೆ ಇನ್ನೇನು ಕೆಲವೇ ದಿನಗಳಲ್ಲಿ ನಡೆಯಲಿದ್ದು, ರಾಜಕೀಯ ಪಕ್ಷಗಳ ಪ್ರಚಾರ...

ಉಡುಪಿ | ಸಮವಸ್ತ್ರಕ್ಕೆ ಗೌರವ ತರುವ ಕೆಲಸ ಆಗಬೇಕು: ಎಸ್‌ಪಿ ಅರುಣ ಕೆ

ದೇಶದ ಕಾನೂನು ಹಾಗೂ ಸಾಮಾಜಿಕ ಭದ್ರತೆಗಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್, ಗೃಹ...

ಗದಗ | ಮುಂಡರಗಿ ತಾಲೂಕು ಪಂಚಾಯತ್ ವಿಶಿಷ್ಟ ನಡೆ; ಮದುವೆ ಮನೆಯಲ್ಲಿ ಮತದಾನ ಜಾಗೃತಿ

ಮುಂಡರಗಿ ಪಟ್ಟಣದ ಶಾದಿಮಹಲ್‌ನಲ್ಲಿ ಶುಕ್ರವಾರ ಏರ್ಪಡಿಸಿದ್ದ ನದಾಫ- ಹರ್ಲಾಪೂರ ಕುಟುಂಬದ ಮದುವೆ...