ಹಾಸನ | ಎಲ್ಲರಿಂದ ಸಮ್ಮತಿ ಸಿಕ್ಕರೆ ಮಾತ್ರ ಸ್ಪರ್ಧೆ: ಕೆ ಎಂ ರಾಜೇಗೌಡ

Date:

  • ಹಾಸನ ಕ್ಷೇತ್ರದ ಜೆಡಿಎಸ್ ಟಿಕೆಟ್ ಗೊಂದಲ ಕುರಿತು ಸ್ಪಷ್ಟನೆ
  • ನಾನು ಯಾರ ಪರ, ವಿರುದ್ಧವೂ ಇಲ್ಲ ಎಂದ ರಾಜೇಗೌಡ

ನಾನು ಯಾರ ಪರವಾದ ಅಭ್ಯರ್ಥಿಯಲ್ಲ. ಜೆಡಿಎಸ್‌ನಲ್ಲಿ ಎಲ್ಲರಿಂದಲೂ ಸಮ್ಮತಿ ಸಿಕ್ಕರೆ ಮಾತ್ರ ಸ್ಪರ್ಧೆಗಿಳಿಯುವೆ ಎಂದು ಪಕ್ಷದ ಹಿರಿಯ ಮುಖಂಡ ಕೆ.ಎಂ ರಾಜೇಗೌಡ ಸ್ಪಷ್ಟಪಡಿಸಿದ್ದಾರೆ.

ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಾಕಾಂಕ್ಷಿಗಳಲ್ಲಿ ನನ್ನ ಹೆಸರು ಪ್ರಸ್ತಾಪವಾದ ನಂತರ ನನ್ನ ಬಗ್ಗೆ ವಿಭಿನ್ನ ಹೇಳಿಕೆಗಳು ಕೇಳಿ ಬರುತ್ತಿವೆ. ನಾನು ಯಾರ ಪರ, ವಿರುದ್ಧವೂ ಇಲ್ಲ. ಯಾರ ಬಿಂಬಿತ ಅಭ್ಯರ್ಥಿಯೂ ಅಲ್ಲ” ಎಂದು ಹೇಳಿದರು.

“ಭವಾನಿ ರೇವಣ್ಣ ಅವರೇ ಅಭ್ಯರ್ಥಿ ಎಂಬ ಮಾತುಗಳು ಈಗ ಕೇಳಿಬರುತ್ತಿವೆ. ಆದರೆ, ಪಕ್ಷದ ಎಲ್ಲ ಮುಖಂಡರೂ ಸಂಘಟಿತರಾಗಿ ಚುನಾವಣೆಯಲ್ಲಿ ಬೆಂಬಲ ನೀಡಿ ಹೋರಾಟ ಮಾಡುವ ನಿಖರ ಭರವಸೆ ನೀಡಿದರೆ ಮತ್ತು ನಾನು ಸರ್ವಸಮ್ಮತ ಅಭ್ಯರ್ಥಿಯಾದರೆ ಮಾತ್ರ ಸ್ಪರ್ಧಿಸುತ್ತೇನೆ” ಎಂದರು.

“ಪಕ್ಷದಲ್ಲಿ ಒಮ್ಮತ ಮೂಡಿ ಸ್ಪರ್ಧೆಗಿಳಿಯಿರಿ ಎಂದರೆ ಸ್ಪರ್ಧಿಸುವೆ. ಇಲ್ಲವೇ ಪಕ್ಷದ ಮುಖಂಡರು ಸೂಚಿಸುವ ಅಭ್ಯರ್ಥಿ ಪರ ಪ್ರಚಾರ ಮಾಡುವೆ” ಎಂದು ಹೇಳಿದರು.

“ಚುನಾವಣೆಯಲ್ಲಿ ಜೆಡಿಎಸ್‌ನ ಅಧಿಕೃತ ಅಭ್ಯರ್ಥಿ ಘೋಷಣೆ ಆಗುವವರೆಗೂ ನಾನು ಪ್ರಚಾರ ಮಾಡಲು ಹೋಗುವುದಿಲ್ಲ. ನಮ್ಮ ಪಕ್ಷದಲ್ಲಿ ಒಗ್ಗಟ್ಟಿರಬೇಕು. ಒಟ್ಟಾಗಿ ಎಂಬುದು ನನ್ನ ಅಪೇಕ್ಷೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ನ್ಯಾಯಾಂಗ ಬಡಾವಣೆಯಲ್ಲಿ ಬೀದಿ ಬದಿ ವ್ಯಾಪಾರಿಯ ಎಳನೀರು ಕಳ್ಳತನ

ಬಡ ವ್ಯಾಪಾರಿಯೊಬ್ಬರು ಮಾರಾಟ ಮಾಡಲು ತಂದಿರಿಸಿದ್ದ ಸುಮಾರು 800 ಎಳನೀರು ರಾತ್ರೋರಾತ್ರಿ...

ಈಗಲಾದರೂ ಚರ್ಚೆಗೆ ಬರುತ್ತದೆಯೇ ಪ್ರಾದೇಶಿಕ ಅಸಮಾನತೆ ಕೂಗು

ಕರ್ನಾಟಕ ಏಕೀಕರಣವಾಗಿ ಅರ್ಧ ಶತಮಾನ ಕಳೆದರೂ ಇಡೀ ಕರ್ನಾಟಕವನ್ನು ಸಮಗ್ರವಾಗಿ ಅಭಿವೃದ್ಧಿಯ...

ಉತ್ತರ ಕನ್ನಡ | ಬೇಸಿಗೆಗೂ ಮುನ್ನವೇ ನೀರಿನ ಬವಣೆ; ಸಂಕಷ್ಟದಲ್ಲಿ ಗ್ರಾಮಗಳು

ಶಿರಸಿ ಮಲೆನಾಡು ಆದರೆ, ಪ್ರತಿ ವರ್ಷ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಎದುರಾಗುತ್ತದೆ....

ಚಾಮರಾಜನಗರ | ಸರ್ವರ್‌ ಸಮಸ್ಯೆಯಿಂದ ವಸತಿ ಯೋಜನೆ ದಾಖಲೆ ಸಲ್ಲಿಕೆ ವಿಳಂಬ; ಕಾಲಾವಧಿ ಮುಂದೂಡುವಂತೆ ಒತ್ತಾಯ

ವಸತಿ ಯೋಜನೆಗಳ ಅಡಿಯಲ್ಲಿ ಆಯ್ಕೆಯಾಗಿರುವ ಫಲಾನುಭವಿಗಳಿಗೆ ದಾಖಲೆಗಳನ್ನು ಸಲ್ಲಿಸಲು ನವೆಂಬರ್‌ 30...