ಕರ್ನಾಟಕ ವಿಧಾನಸಭಾ ಚುನಾವಣೆಯ ಮತಎಣಿಕೆ ಆರಂಭವಾಗಿದೆ. ಜಿದ್ದಾಜಿದ್ದಿನ ಪೈಪೋಟಿಯಿಂದ ಕೂಡಿದ್ದ ರಾಜ್ಯ ವಿಧಾನಸಭೆ ಚುನಾವಣೆಯ ಮತಎಣಿಕೆ ಆರಂಭವಾಗಿದ್ದು, ಮೊದಲಿಗೆ ಅಂಚೆ ಮತಗಳ ಎಣಿಕೆ ಆರಂಭವಾಗಿದೆ.
ಅಂಚೆ ಮತ ಎಣಿಕೆಯಲ್ಲಿ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಪ್ರಕಾಶ್ ಮುನ್ನಡೆ ಸಾಧಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಮೈಸೂರಿನಲ್ಲಿ ಭರ್ಜರಿ ಆರಂಭ ಪಡೆದ ಕಾಂಗ್ರೆಸ್: ಮಾಜಿ ಸಿಎಂ ಸಿದ್ದರಾಮಯ್ಯ ಮುನ್ನಡೆ
ಆರಂಭಿಕ ಮುನ್ನಡೆ ಕಾಯ್ದುಕೊಂಡಿದ್ದ ಸ್ವರೂಪ್ ಹಿನ್ನಡೆ ಸಾಧಿಸಿದ್ದು, ಬಿಜೆಪಿ ಅಭ್ಯರ್ಥಿ ಪ್ರೀತಂ ಗೌಡ ಮುನ್ನಡೆ ಸಾಧಿಸಿದ್ದಾರೆ. ಅರಕಲಗೂಡಿನಲ್ಲಿ ಜೆಡಿಎಸ್ ಅಭ್ಯರ್ಥಿ ಎ ಮಂಜು ಮುನ್ನಡೆ ಸಾಧಿಸಿದ್ದಾರೆ. ಹಾಸನದಲ್ಲಿ ಪ್ರೀತಂ ಗೌಡ ಮತ್ತೆ ಹಿನ್ನಡೆ ಸಾಧಿಸಿದ್ದಾರೆ. ಹೊಳೆನರಸೀಪುರದಲ್ಲಿ ಜೆಡಿಎಸ್ ಅಭ್ಯರ್ಥಿ ರೇವಣ್ಣಗೆ ಹಿನ್ನಡೆ ಉಂಟಾಗಿದೆ.