ಹಾಸನ | ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಶ್ರಮಿಸಲು ನ್ಯಾಯಾಧೀಶ ಇನವಳ್ಳಿ ಸೂಚನೆ

Date:

ಅಪ್ರಾಪ್ತ ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ತಡೆಗೆ ಎಲ್ಲ ಇಲಾಖೆಗಳು ಶ್ರಮಿಸಬೇಕು ಎಂದು ಹಾಸನ ಜಿಲ್ಲಾ ಪ್ರಧಾನ ಹಾಗೂ ಸೆಷನ್ಸ್‌ ನ್ಯಾಯಾಧೀಶ ಟಿ ಎನ್ ಇನವಳ್ಳಿ ಸೂಚಿಸಿದ್ದಾರೆ.

- Advertisement -

ಪೋಕ್ಸೊ ಕಾಯಿದೆ ಅನುಷ್ಠಾನ, ಮಕ್ಕಳ ಮೇಲಿನ ಲೈಂಗಿಕ ಹಾಗೂ ಇತರ ಶೋಷಣೆಗಳನ್ನು ತಡೆದು ರಕ್ಷಣೆ ನೀಡುವ ಕುರಿತು ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಇಲಾಖೆಗಳು ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಬೇಕು. ಸಂಘ ಸಂಸ್ಥೆಗಳ ಸಹಕಾರ ಪಡೆದು ಶಾಲೆ, ಕಾಲೇಜು ಸೇರಿದಂತೆ ಸಮುದಾಯಗಳಲ್ಲಿ ವ್ಯಾಪಕ ಜಾಗೃತಿ ಮೂಡಿಸಬೇಕು. ಶಾಲಾ ಕಾಲೇಜುಗಳಲ್ಲಿ ಮಕ್ಕಳ ಸಹಾಯವಾಣಿ ಬಗ್ಗೆ ಮಾಹಿತಿ ನೀಡುವುದರ ಜೊತೆಗೆ ಉತ್ತಮ ಹಾಗೂ ಕೆಟ್ಟ ಸ್ಪರ್ಶದ ಬಗ್ಗೆ ತಿಳಿಸಿಕೊಡಬೇಕು” ಎಂದು ತಿಳಿಸಿದರು.

“ಶಿಕ್ಷಕರು ಗುರುವಿನ ಸಮಾನ. ಅವರು ನೈತಿಕ ಹೊಣೆಗಾರಿಕೆಯಿಂದ ನಡೆದುಕೊಳ್ಳಬೆಕು. ಶಾಲೆ, ವಸತಿ ಶಿಕ್ಷಣ ವ್ಯವಸ್ಥೆಯಲ್ಲೇ ಶೋಷಣೆ ಎದುರಿಸುವಂತಾಗಬಾರದು. ಶೋಷಣೆಗೆ ಒಳಗಾದ ಸಂದರ್ಭದಲ್ಲಿ ದೂರು ನೀಡಲು ಮಕ್ಕಳು, ಪೋಷಕರು ಹಿಂಜರಿಯುತ್ತಿದ್ದಾರೆ. ಆದರೆ ಇದರಿಂದ ತಪ್ಪಿತಸ್ಥರಿಗೆ ರಕ್ಷಣೆ, ಪ್ರೋತ್ಸಾಹ ಸಿಗಲಿದೆ. ಹಾಗಾಗಿ ಸಾಮಾಜಿಕವಾಗಿ ಅರಿವು ಮೂಡಿಸಬೇಕು. ಸಮಾಜ ಘಾತುಕ ಶಕ್ತಿಗಳನ್ನು ಹತ್ತಿಕ್ಕಬೇಕು” ಎಂದರು.

“ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಮಕ್ಕಳ ಸಹಾಯವಾಣಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಇತರ ಇಲಾಖೆಗಳು ಹೆಚ್ಚಿನ ಜವಾಬ್ಧಾರಿ ವಹಿಸಬೇಕು. ನಾವು ಪುಸ್ತಕದಲ್ಲಿರುವದನ್ನು ಮಾತ್ರ ಕಲಿಸುತ್ತಿದ್ದೇವೆಯೇ ಹೊರತು, ಜೀವನದ ಪಾಠ ಹೇಳಿಕೊಡುವುದನ್ನು ಮರೆಯುತ್ತಿದ್ದೇವೆ. ಈಗಲಾದರು ಬದುಕಿನ ಮೌಲ್ಯ, ನೈತಿಕ ಶಿಕ್ಷಣ ಕಲಿಸಬೇಕು. ಪೋಷಕರ ಮನೋಭಾವ, ಮಕ್ಕಳನ್ನು ಬೆಳೆಸುವ ರೀತಿ ಬದಲಾವಣೆ ಆಗಬೇಕು” ಎಂದು ಸಲಹೆ ನೀಡಿದರು.

“ನಗರದ ಅಂಬೇಡ್ಕರ್ ಭವನದಲ್ಲಿ ಜುಲೈ 22ರಂದು ಮಾನವ ಕಳ್ಳ ಸಾಗಾಣಿಕೆ ತಡೆ ಕುರಿತು ಹಾಗೂ 26 ರಂದು ಮಹಿಳಾ ದೌರ್ಜನ್ಯ ತಡೆ ಕುರಿತು ಕಾರ್ಯಾಗಾರ ಏರ್ಪಡಸಿಲಾಗಿದ್ದು, ಎಲ್ಲ ಇಲಾಖೆಗಳು ಇದರಲ್ಲಿ ಪಾಲ್ಗೊಳ್ಳಬೇಕು” ಎಂದು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಧೀಶ ಟಿ ಎನ್ ಇನವಳ್ಳಿ ತಿಳಿಸಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ರವಿಕಾಂತ್ ಮಾತನಾಡಿ,
“ವಸತಿ ಶಾಲೆಗಳಲ್ಲಿ ಹೆಚ್ಚಿನ ಅರಿವು ಕಾರ್ಯಕ್ರಮ ನಡೆಸಿ, ಜಿಲ್ಲೆಯ ಎಲ್ಲ ಶಿಕ್ಷಕರಿಗೂ ವಿಶೇಷ ಕಾರ್ಯಾಗಾರ ಏರ್ಪಡಿಸಬೇಕು. ಬಾಲ್ಯ ವಿವಾಹ ತಡೆಗೆ ಪರಿಣಾಮಕಾರಿ ಕ್ರಮಗಳಾಗಬೇಕು. ಮುಗ್ಧ ಮಕ್ಕಳಿಗೆ ರಕ್ಷಣೆ ದೊರೆಯಬೇಕು” ಎಂದರು.

“ಸಖಿ ಕೇಂದ್ರದ ಬಗ್ಗೆ ಹಾಗೂ ವಿವಿಧ ಕಾಯಿದೆ ಬಗ್ಗೆ ಅರಿವು ಮೂಡಿಸಲು ಹೆಚ್ಚಿನ ಜಾಗೃತಿ ಮೂಡಿಸಬೇಕಿದೆ. ಮಕ್ಕಳ ಹಕ್ಕುಗಳ ಉಲ್ಲಂಘನೆ ಬಗ್ಗೆ ಗರಿಷ್ಠ ನಿಗಾ ವಹಿಸಬೇಕಿದೆ” ಎಂದರು.

ಜಿಲ್ಲಾಧಿಕಾರಿ ಸತ್ಯಭಾಮ ಮಾತನಾಡಿ, “ನಮ್ಮಲ್ಲಿ ನೈತಿಕತೆ ಕುಸಿಯುತ್ತಿದೆ. ನಾವು ಮಕ್ಕಳಿಗೆ ಸಂಸ್ಕಾರ ಕಲಿಸಬೇಕಿದೆ. ಜೊತೆಗೆ ಎಲ್ಲ ಇಲಾಖೆಗಳೂ ನಮ್ಮ ದೇಶದ ಮುಂದಿನ‌ ಭವಿಷ್ಯವಾಗಿರುವ ಮಕ್ಕಳ ಹಕ್ಕುಗಳನ್ನು ರಕ್ಷಿಸಿ ಎಲ್ಲೂ ದೌರ್ಜನ್ಯ ನಡೆಯದಂತೆ ನೋಡಿಕೊಳ್ಳಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಅರ್ಹ ಫಲಾನುಭವಿಗಳಿಗೆ ಸೂರು ಕಲ್ಪಿಸಿ: ಸಂಸದ ಸಿದ್ದೇಶ್ವರ್

“ಮಕ್ಕಳಿಗೆ ಹೆಚ್ಚಾಗಿ ನೈತಿಕ ಶಿಕ್ಷಣ ಕಲಿಸಬೇಕು. ಮಾನವ ಧರ್ಮ, ವಿವೇಕಗಳನ್ನು ಕಲಿಸಬೇಕಿದೆ. ಸಂಬಂಧಗಳ ಮೌಲ್ಯ ಕಲಿಸಬೇಕು. ಸಮಾಜ ಸರಿಯಾದ ಹಾದಿಯಲ್ಲಿ ಸಾಗಬೇಕು” ಎಂದು ಅಭಿಪ್ರಾಯಪಟ್ಟರು.

ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಮ್ಮಯ್ಯ, ಹೆಚ್ಚುವರಿ ಜಿಲ್ಲಾಧಿಕಾರಿ ಕೆ ಟಿ ಶಾಂತಲಾ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಚಂದ್ರಶೇಖರ್, ಜಿಲ್ಲಾ ಸ್ಕೌಟ್ ಮತ್ತು ಗೈಡ್ಸ್ ಆಯುಕ್ತ ಡಾ. ವೀರಭದ್ರಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಸುರೇಶ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರುಗಳಾದ ಪ್ರಕಾಶ್ ಮತ್ತು ಮಹಾಲಿಂಗಯ್ಯ, ಜಿಲ್ಲಾ ವಾರ್ತಾಧಿಕಾರಿ ವಿನೋದ್ ಚಂದ್ರ, ಕಾರ್ಮಿಕ‌ ಅಧಿಕಾರಿ ಜುಮುನ ಭಾರತೀಯ ಸೇವಾ ದಳದ ರಾಣಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...