ಹಾಸನ | ಸಚಿವ ಸ್ಥಾನಕ್ಕೆ ಪರೋಕ್ಷವಾಗಿ ಬೇಡಿಕೆ ಇಟ್ಟ ಕೆ ಎಂ ಶಿವಲಿಂಗೇಗೌಡ

Date:

Advertisements
  • ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರ್ಪಡೆ
  • ಯಾವ ಹಳ್ಳಿಗೆ ಹೋದ್ರೂ ನೀವು ಸಚಿವರಾಗ್ತಿರಾ ಅಂತ ಕೇಳ್ತಾರೆ

ಹಾಸನ ಜಿಲ್ಲೆ ಅರಸೀಕೆರೆ ಕ್ಷೇತ್ರದ ಮಾಜಿ ಶಾಸಕ ಕೆ ಎಂ ಶಿವಲಿಂಗೇಗೌಡ ಅವರು ಜೆಡಿಎಸ್‌ ತೊರೆದು ಕಾಂಗ್ರೆಸ್‌ ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಯಾದರು. ಈ ವೇಳೆ ಮುಂದೆ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ತಮಗೆ ಸಚಿವ ಸ್ಥಾನ ನೀಡುವಂತೆ ವೇದಿಕೆ ಮೇಲೆಯೇ ಪರೋಕ್ಷವಾಗಿ ಬೇಡಿಕೆ ಇಟ್ಟಿದ್ದಾರೆ.

ಅರಸೀಕೆರೆಯಲ್ಲಿ ಭಾನುವಾರ ರಾತ್ರಿ ಆಯೋಜಿಸಿದ್ದ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಕೆ ಎಂ ಶಿವಲಿಂಗೇಗೌಡ, “ನಾನು ಕಾಂಗ್ರೆಸ್ ನಾಯಕರಾದ ಡಿ ಕೆ ಶಿವಕುಮಾರ್, ಸಿದ್ದರಾಮಯ್ಯ ಹಾಗೂ ಡಿ ಕೆ ಸುರೇಶ್ ಅವರನ್ನು ನಂಬಿ ಕಾಂಗ್ರೆಸ್‌ ಸೇರ್ಪಡೆಯಾಗುತ್ತಿದ್ದೇನೆ, ನೀವು ನೀರಲ್ಲಾದರೂ ಹಾಕಿ ಹಾಲಲ್ಲಾದರೂ ಹಾಕಿ” ಎಂದರು.

ಕಾಂಗ್ರೆಸ್‌ ಸೇರಿರುವುದಕ್ಕೆ ರಾಥೋಡ್ ಒಬ್ಬರು ವೇದಿಕೆಯಲ್ಲಿ ಇದ್ದಾರೆ ಅವರೇ ಸಾಕ್ಷಿ, ನಾನು ಅರಸೀಕೆರೆಯ ಯಾವ ಹಳ್ಳಿಗೆ ಹೋದರೂ ಅಲ್ಲಿ ನೀವು ಸಚಿವರಾಗ್ತಿರಾ ಅಂತ ಕೇಳ್ತಾರೆ. ನೀವು ಅದೇನ್ ಮಾಡ್ತಿರೋ ಮಾಡಿ” ಎಂದು ಪರೋಕ್ಷವಾಗಿ ಮನವಿ ಮಾಡಿದರು.

Advertisements

ಈ ಸುದ್ದಿ ಓದಿದ್ದೀರಾ? ಮೈಸೂರು | ಹುಲಿ ಸಂರಕ್ಷಣಾ ಸಂಭ್ರಮ ದಿನ ವಿರೋಧಿಸಿ ಆದಿವಾಸಿಗಳಿಂದ ಶೋಕ ದಿನ ಆಚರಣೆ

ಬಳಿಕ ಮಾತನಾಡಿದ ಸಿದ್ದರಾಮಯ್ಯ, “ಶಿವಲಿಂಗೇಗೌಡ ಜನಪರ ಕಾಳಜಿಯ ಶಾಸಕ, ಇವರನ್ನು ಹಾಲಿಗೆ ಹಾಕುತ್ತೇವೆ. ನಂಬಿಕೆ ಇರಲಿ ಪಕ್ಷದಲ್ಲಿ ಅವರಿಗೆ ಯಾವುದೇ ತಾರತಮ್ಯ ಮಾಡುವುದಿಲ್ಲ” ಎಂದು ಭರವಸೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X