ಹಾಸನ l ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಯಶಸ್ವಿ 

Date:

Advertisements

ಡಾ. ಬಿ.ಆರ್. ಅಂಬೇಡ್ಕರ್ ಅವರ 134 ನೇ ಹಾಗೂ ಡಾ.ಬಾಬು ಜಗಜೀವನ್ ರಾಮ್ ಅವರ 118 ನೇ ಜನ್ಮ ದಿನಾಚರಣೆಯನ್ನು ಹಾಸನ ನಗರದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಜಿಲ್ಲಾ ಬಾಬು ಜಗಜೀವನ್ ರಾಮ್ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಗುರುವಾರ ಯಶಸ್ವಿಯಾಗಿ ನಡೆಸಲಾಯಿತು.

ಜಯಂತಿಗಳು ಮಹಾನ್ ನಾಯಕರ ಆಶಯ ಹಾಗೂ ವಿಚಾರಗಳನ್ನು ಮುಂದಿನ ಪೀಳಿಗೆಗೆ ತಿಳಿಸಲು ಇರುವಂತವು. ಅಂಬೇಡ್ಕರ್ ಅವರು ಇರದೇ ಇದ್ದಿದ್ದರೆ ಇಂದು ನಾವು ಈ ಕಾರ್ಯಕ್ರಮ ಮಾಡಲು ಸಾಧ್ಯವೇ ಆಗುತ್ತಿರಲಿಲ್ಲ 3 ಅಂಬೇಡ್ಕರ್ ಅವರು ದೇವರಾದರೆ ಸಮಾಜಕ್ಕೆ ಅಪಾಯ, ಮಹಾನ್ ನಾಯಕರು ದೇವರಾಗುವ ಬದಲು, ವಿಮೋಚಕರಾಗಿಯೇ ಇರಬೇಕು. ಇಲ್ಲದಿದ್ದರೆ ಸಮುದಾಯ ಮತ್ತೆ ಪತನದತ್ತ ಸಾಗುತ್ತದೆ ಎಂಬುದನ್ನು ಮರೆಯ ಬಾರದು ಎಂದು ಅರಕಲವಾಡಿ ನಾಗೇಂದ್ರ ಮಾತಾಡಿದರು.

ದಲಿತರು ಹಾಗೂ ಹಿಂದುಳಿದ ವರ್ಗಗಳಿಗೆ ಶೇ.49.5ರಷ್ಟು ಮೀಸಲಾತಿ ಸರ್ಕಾರಿ ಕ್ಷೇತ್ರದಲ್ಲಿ ಮಾತ್ರ ಇದೆ. ದೇಶದಲ್ಲಿ ಸರ್ಕಾರಿ ಕ್ಷೇತ್ರ ಇರುವುದು ಕೇವಲ ಶೇ.2ರಷ್ಟು ಮಾತ್ರ ಎಂಬುದನ್ನು ಎಲ್ಲರೂ ಅರ್ಥೈಸಿಕೊಳ್ಳಬೇಕು. ಖಾಸಗಿ ಕ್ಷೇತ್ರದಲ್ಲಿ ಹೆಚ್ಚಿನ ರೀತಿಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಸದೃಢರಾಗಬೇಕು. ಭೂಮಿ, ಕೈಗಾರಿಕೆ ಸೇರಿದಂತೆ ಇತರೆ ರೂಪದಲ್ಲಿದ್ದು, ಹೆಚ್ಚಿನ ಪ್ರಮಾಣ ಉಳ್ಳವರ ಕೈವಶದಲ್ಲಿಯೇ ಇದೆ. ಶೇ. 2 ರಷ್ಟು ಮೀಸಲಾತಿಯಲ್ಲಿ ಶೇ. 1ರಷ್ಟು ಮೀಸಲಾತಿ ಉಳ್ಳವರಿಗೆ ಸೇರಿದೆ. ಇದೆಲ್ಲವನ್ನೂ ಅರಿತು ಜೀವನ ಶೈಲಿ ರೂಪಿಸಿಕೊಳ್ಳಬೇಕು. ಆರ್ಥಿಕವಾಗಿ ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಸದೃಢರಗಬೇಕು ಎಂದು ನಾಗೇಂದ್ರ ಮಾತಾಡಿದರು.

Advertisements

ಇದನ್ನೂ ಓದಿದ್ದೀರಾ?ಹಾಸನ l ಪಹಲ್ಗಾಮ್‌ ಉಗ್ರರ ದಾಳಿ: ವಕೀಲರ ಪ್ರತಿಭಟನೆ

ಈ ವೇಳೆ ಜಿಲ್ಲಾ ಬಾಬೂಜಿ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಬಸವರಾಜು, ಗೌರವಾಧ್ಯಕ್ಷ ಶಿವಣ್ಣ, ಕಾರ್ಯದರ್ಶಿ ಸೋಮಶೇಖರ್, ದಾಸಪ್ಪ, ಹಿರಿಯ ದಲಿತ ಮುಖಂಡ ಹೆಚ್.ಪಿ.ಶಂಕರ್ ರಾಜು, ಸಮಾಜ ಸೇವಕ ಧರ್ಮಪ್ಪ ನಾಯಕ, ದಂಡೋರ ಮಂಜುನಾಥ್, ಜಾಂಬವ ಸೇನೆಯ ಅರಕಲಗೂಡು ನಿಂಗರಾಜು, ಕೆ.ಡಿ.ಎಸ್. ಎಸ್ ತಾಲೂಕು ಸಂಚಾಲಕ ಬಾಣಾವರ ಮಹೇಶ್, ಆಲೂರು ವೆಂಕಟಯ್ಯ, ಅರಸಪ್ಪ ಹೊಳೆನರಸೀಪುರ ನಾಗರಾಜ್ ಇನ್ನಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X