ಹಾಸನ l ಎಫ್ ಡಿಎ ವಿರುದ್ದ ಲಂಚ ಆರೋಪ, ಅಮಾನತು ಆಗಿದ್ದರೂ ಕರ್ತವ್ಯ ನಿರ್ವಹಣೆ 

Date:

Advertisements

ಲಂಚ ನೀಡಿದರೂ ದಲಿತ ಎಂಬ ಕಾರಣಕ್ಕೆ ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಖಾಸಗಿ ಶಾಲೆಗೆ ಪರವಾನಗಿ ನೀಡಲು ನಿರಾಕರಣೆ ಹಿನ್ನೆಲೆಯಲ್ಲಿ ಗುರುವಾರ ಡಿಡಿಪಿಐ ಕಚೇರಿಯಲ್ಲೇ ಎಫ್‌ಡಿಎ ಅಧಿಕಾರಿಯನ್ನು ಖಾಸಗಿ ಶಾಲೆಯ ಮಾಲೀಕ ತರಾಟೆ ತೆಗೆದುಕೊಂಡ ಘಟನೆ ನಡೆದಿದೆ.

ಡಿಡಿಪಿಐ ಕಚೇರಿ ಸಿಬ್ಬಂದಿ ಮಂಜುನಾಥ್ ಮೇಲೆ ಅರಕಲಗೂಡಿನ ನ್ಯಾಷನಲ್ ಹೆರೋಡೈಟ್ ಶಾಲೆಯ ಮಾಲೀಕ ತೀವ್ರ ವಾಗ್ದಾಳಿ ನಡೆಸಿದ್ದು, ಕಚೇರಿಯಲ್ಲಿ ಆಕ್ರೋಶವನ್ನು ಹೊರ ಹಾಕಿ ತಮ್ಮ ಬೇಸರ ವ್ಯಕ್ತಪಡಿಸಿದ್ದಾರೆ. ಕಚೇರಿಯಲ್ಲಿ ಮಂಜುನಾಥ್ ಅವರು ಕಳೆದ 22 ವರ್ಷದಿಂದ ಪ್ರಥಮ ದರ್ಜೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದಾರೆ ಇದೀಗ ಇವರ ವಿರುದ್ಧ 50 ಸಾವಿರ ಹಣ ಪಡೆದಿರುವ ಆರೋಪ ಕೇಳಿ ಬಂದಿದೆ. 2009ರಲ್ಲಿ ತನ್ನಿಂದ 50,000 ಹಣ ಪಡೆಯುವ ಜೊತೆಗೆ ಮತ್ತೆ ಇದೀಗ ಈಗಾಗಲೇ 50 ಸಾವಿರ ರೂಪಾಯಿ ಚೆಕ್‌ ನೀಡಿದ್ದೇನೆ. ಆದರೂ ಪರವಾನಗಿ ನೀಡಲು ಮೂಲಭೂತ ಸೌಕರ್ಯಗಳ ಕೊರತೆ ನೆಪ ಹೇಳಿ ವಿಳಂಬ ಮಾಡುತ್ತಿದ್ದಾರೆ ಎಂದು ಶಾಲೆಯ ಮಾಲೀಕ ರಂಗಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಿಂದೆ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಇದೇ ಮಂಜುನಾಥ್ ಅಮಾನತು ಗೊಂಡಿದ್ದರು. ಆದರೆ ಕೆಎಟಿ ಹಾಗೂ ಹೈಕೋರ್ಟ್‌ನಲ್ಲಿ ದಾಖಲಾದ ಪ್ರಕರಣಗಳಲ್ಲಿ ಅರ್ಜಿದಾರರ ಪರವಾಗಿ ಯಾವುದೇ ಆದೇಶ ಆಗಿಲ್ಲ. ನಂತರ ಎರಡೂ ಕಡೆ ಅರ್ಜಿ ವಜಾ ಆಗಿದೆ. ನಂತರ ಮುಂದಿನ ಕ್ರಮಕ್ಕೆ ಡಿಡಿಪಿಐ ಡಿಸಿ ಅವರು ಪತ್ರ ಬರೆದಿದ್ದರು. ಡಿಸಿ ಸಿ. ಸತ್ಯಭಾಮ ಅವರು ಕಳೆದ ಡಿ.19 ರಂದು ಮಂಜುನಾಥ್ ಅವರ ಅಮಾನತು ಆದೇಶ ಮುಂದುವರಿಯಲಿದೆ. ವಿಚಾರಣೆ ನಡೆಸಿ ಅಗತ್ಯ ಕ್ರಮ ಕೈಗೊಂಡು ವರದಿ ನೀಡುವಂತೆ ಸೂಚಿಸಿದ್ದರು. ಆದರೂ ಇಲಾಖೆ ಅಧಿಕಾರಿಗಳು ಮಂಜುನಾಥ್ ಅವರನ್ನು ಕರ್ತವ್ಯದಿಂದ ಬಿಡುಗಡೆ ಮಾಡದೆ ನಿರ್ಲಕ್ಷ್ಯ ತೋರಿದ್ದಾರೆ. ಮಂಜುನಾಥ್ ಈಗಲೂ ಸೇವೆ ಮುಂದುವರಿಸಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ.

Advertisements

ಇದನ್ನೂ ಓದಿದ್ದೀರಾ?ಹಾಸನ | ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು

ಮೂಲಭೂತ ಸೌಕರ್ಯಗಳ ಕೊರತೆ ಇದ್ದರೂ ಲಂಚ ಕೊಟ್ಟರೆ ಅಧಿಕಾರಿಯು ಪರವಾನಗಿ ನೀಡುತ್ತಿದ್ದಾರೆ. ನನ್ನನ್ನು ದಲಿತನೆಂಬ ಕಾರಣಕ್ಕೆ ಪರವಾನಗಿ ನೀಡಲು ವಿಳಂಬ ಮಾಡಿ ಸಂಸ್ಥೆಯನ್ನು ಮುಚ್ಚಿ ಹಾಕಲು ಯತ್ನಿಸುತ್ತಿದ್ದಾರೆ. ಈ ಬಗ್ಗೆ ಪ್ರಶ್ನಿಸಿದರೆ ತನ್ನ ಮೇಲೆ ದೌರ್ಜನ ಮಾಡುತ್ತಿರುವ ಮಂಜುನಾಥ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಶಾಲೆಯ ಮಾಲೀಕ ರಂಗಸ್ವಾಮಿ ಆಗ್ರಹಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X