ಹಾಸನ l ಜೂನ್ 9ರಂದು ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತರಿಗೆ ಹಾಸನ ಜಿಲ್ಲಾ ನಾಗರಿಕ ಸನ್ಮಾನ

Date:

Advertisements

ಹೆಮ್ಮೆಯ ಸಾಹಿತಿ ಶ್ರೀಮತಿ ಬಾನು ಮುಷ್ತಾಕ್ ಅವರಿಗೆ ಬೂಕರ್‌ ಅಂತರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಈ ಸಂಭ್ರಮಾಚಾರಣೆಯನ್ನು ಕನ್ನಡ ಸಾಹಿತ್ಯ ಪರಿಷತ್, ಜನಪರ ಚಳುವಳಿಗಳು, ಕನ್ನಡಪರ ಸಂಘಟನೆಗಳು, ಸಂಘಸಂಸ್ಥೆಗಳು ಹಾಗೂ ನಾಗರಿಕ ಸಮಿತಿ ವತಿಯಿಂದ ಹಾಸನ ಜಿಲ್ಲೆಯ ಹಾಸನಾಂಬ ಕಲಾಕ್ಷೇತ್ರದಲ್ಲಿ
9ರಂದು ಕಾರ್ಯಕ್ರಮ ಆಯೋಜಿಸಲಾಗಿದೆ.

ಕನ್ನಡ, ಕರ್ನಾಟಕ ಮತ್ತು‌ ಇಡೀ ಭಾರತಕ್ಕೇ ಹೆಮ್ಮೆ ತರುವ ಸಂಗತಿಯಾಗಿದೆ. ಕನ್ನಡ ಸಾಹಿತ್ಯಕ್ಕೆ ಜಾಗತಿಕ ಮಟ್ಟದಲ್ಲಿ ಮನ್ನಣೆ ದೊರಕಿದೆ. ಸಮೃದ್ಧ ಹಾಗೂ ಶಾಸ್ತ್ರೀಯ ಭಾಷೆಯಾದ ನಮ್ಮ ಕನ್ನಡ ಭಾಷೆ ಇಂದು ಹಲವು ಸಮಸ್ಯೆಗಳು ಮತ್ತು ದಾಳಿಗಳನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಕನ್ನಡ ಸತ್ವ ಜಾಗತಿಕ ಮಟ್ಟದಲ್ಲಿ ಗುರುತಿಸಲ್ಪಟ್ಟಿರುವುದು ಬಹಳ ಸಂತಸದ ವಿಷಯ ಎಂದು ಜನಪರ ಸಂಘಟನೆ ಮುಖಂಡರು ತಿಳಿಸಿದರು.

ಇದನ್ನೂ ಓದಿದ್ದೀರಾ?ಹಾಸನ l ಅಕ್ರಮ ಸಂಬಂಧ: ಕುಟುಂಬಸ್ಥರನ್ನು ಕೊಲೆ ಮಾಡಲು ಯತ್ನಿಸಿದ ಪತ್ನಿ

Advertisements

ಹಿರಿಯ ಸಾಹಿತಿ, ನ್ಯಾಯವಾದಿ ಹಾಗೂ ಜನಪರ ಚಳುವಳಿಗಳ ಒಡನಾಡಿ ಶ್ರೀಮತಿ ಬಾನು ಮುಷ್ತಾಕ್ ಮತ್ತು ಕನ್ನಡ ಕೃತಿಯನ್ನು ಅತ್ಯಂತ ಸಮರ್ಥವಾಗಿ ಅನುವಾದಿಸಿ ಕನ್ನಡಕ್ಕೆ ಜಾಗತಿಕ ಮನ್ನಡೆಗಳಿಸಲು ಕಾರಣರಾದ ನಮ್ಮ ಪಕ್ಕದ ಜಿಲ್ಲೆಯವರಾದ ಶ್ರೀಮತಿ ದೀಪಾ ಭಾಸ್ತಿ ಅವರನ್ನು ಹೃದಯ ಪೂರ್ವಕವಾಗಿ ಅಭಿನಂಧಿಸಬೇಕಾಗಿರುವುದು ಎಲ್ಲ ಕನ್ನಡಿಗರ ಕರ್ತವ್ಯವಾಗಿದೆ. ಕನ್ನಡ, ಕರ್ನಾಟಕ ನಮ್ಮ ಹಾಸನ, ಜಿಲ್ಲೆ, ರಾಜ್ಯ ಮತ್ತು ಇಡೀ ದೇಶಕ್ಕೇ ಹೆಸರು ತಂದ ಶ್ರೀಮತಿ ಭಾನು ಮುಷ್ತಾಕ್ ಮತ್ತು ಶ್ರೀಮತಿ ದೀಪಾ ಭಾಸ್ತಿ ಅವರಿಗೆ ‘ಒಂದು ನಾಗರಿಕ ಸನ್ಮಾನ’ ಮಾಡಿ ಗೌರವಿಸುವುದು ನಮ್ಮೆಲ್ಲರ ಆಧ್ಯತೆಯ ಕೆಲಸವಾಗಿದೆ. ಆದ್ದರಿಂದ ಎಲ್ಲರೂ ಕಾರ್ಯಕ್ರಮಕ್ಕೆ ತಪ್ಪದೆ ಭಾಗವಹಿಸಬೇಕೆಂದು ಜನಪರ ಸಂಘಟನೆಯ ಒಕ್ಕೂಟದಿಂದ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X