ಹಾಸನ | ಗುಡ್ಡ ಕುಸಿತ; ರೈಲು ಹಳಿ ಮೇಲೆ ಕುಸಿದ ಮಣ್ಣಿನಡಿ ಸಿಲುಕಿದ ಕಂಟೇನರ್

Date:

Advertisements

ರಾಷ್ಟ್ರೀಯ ಹೆದ್ದಾರಿ 75 ಬೆಂಗಳೂರು-ಮಂಗಳೂರು ಶಿರಾಡಿಘಾಟ್ ರಸ್ತೆಯಲ್ಲಿ ಗುಡ್ಡ ಕುಸಿದಿದ್ದು, ಸಕಲೇಶಪುರ ತಾಲೂಕಿನ ದೊಡ್ಡತಪ್ಲೆ ಬಳಿ ಹಲವು ವಾಹನಗಳು ಮಣ್ಣಿನಡಿ ಸಿಲುಕಿವೆ. ಗುಡ್ಡ ಕುಸಿತದ ರಭಸಕ್ಕೆ ಎರಡು ಕಂಟೇನರ್ ಹಾಗೂ ಒಂದು ಟ್ಯಾಂಕರ್‌ ಪಲ್ಟಿಯಾಗಿದ್ದು, ವಾಹನಗಳೊಟ್ಟಿಗೆ ಚಾಲಕರೂ ಕೂಡಾ ಗುಡ್ಡ ಕುಸಿತದ ರಭಸಕ್ಕೆ ಮಣ್ಣಿನಡಿ ಸಿಲುಕಿದ್ದರು.

ಪೊಲೀಸರು ಹಾಗೂ ಗುತ್ತಿಗೆ ಪಡೆದ ಕಂಪನಿ ‌ಸಿಬ್ಬಂದಿಗಳು ಮೂವರು ಚಾಲಕರನ್ನು ರಕ್ಷಿಸಿದ್ದಾರೆ. ಜತೆಗೆ ಕಂಟೇನರ್‌ ಪಲ್ಟಿಯಾದ ಸ್ಥಳಕ್ಕೆ ಕಂದಾಯ ಸಚಿವ ಕೃಷ್ಣಭೈರೇಗೌಡ ಭೇಟಿ ನೀಡಿದ್ದು, “ಮಳೆ ಹೆಚ್ಚಾದ ಹಿನ್ನೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿತಗೊಂಡಿದೆ. ಶಿರಾಡಿಘಾಟ್ ರಸ್ತೆಯಲ್ಲಿ ಮತ್ತೆ ಸಂಚಾರ ಬಂದ್ ಆಗಿದೆ” ಎಂದು ಮಾಹಿತಿ ನೀಡಿದ್ದಾರೆ.

“ಮಳೆ ಮುಂದುವರೆದಿದ್ದು, ಮತ್ತೆ ಗುಡ್ಡ ಕುಸಿಯುವ ಸಾಧ್ಯತೆ ಇದೆ. ರೈಲ್ವೆ ಹಳಿ‌ ಮೇಲೆ ಹಾದು ಹೋಗಿರುವ ರಸ್ತೆಯ ತುದಿಯಲ್ಲಿರುವ ಕಂಟೇನರ್ ರೈಲ್ವೆ ಹಳಿ‌ ಮೇಲೆ ಬೀಳುವ ಆತಂಕವಾಗಿದೆ. ರೈಲ್ವೆ ಹಳಿ ಮೇಲೂ ಗುಡ್ಡ ಕುಸಿದಿದ್ದು,
ಈಗಾಗಲೇ ಬಂದ್‌ ಆಗಿರುವ ಸಕಲೇಶಪುರ-ಮಂಗಳೂರು ರೈಲ್ವೆ ಮಾರ್ಗದಲಿ ತ್ವರಿತಗತಿಯ ದುರಸ್ತಿ ಕಾರ್ಯ ನಡೆಯುತ್ತಿದೆ” ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಕೊಡಗು | ನಾಪೋಕ್ಲು ಭಾಗದಲ್ಲಿ ವಿದ್ಯುತ್ ಕಣ್ಣ ಮುಚ್ಚಾಲೆ; ಗ್ರಾಮಸ್ಥರ ಆಕ್ರೋಶ

ಇದೀಗ ದೊಡ್ಡತಪ್ಲೆ ಬಳಿ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದಿರುವುದರಿಂದ ದುರಸ್ತಿ ಕಾರ್ಯಕ್ಕೆ ಸಂಕಷ್ಟ ಎದುರಾಗಿದೆ. ಕಡಗರವಳ್ಳಿ-ಯಡಕುಮಾರಿ ಬಳಿ ನಡೆಯುತ್ತಿದ್ದ ರೈಲ್ವೆ ಹಳಿ ದುರಸ್ತಿ ಕಾರ್ಯಕ್ಕೆ ಕಾರ್ಮಿಕರು, ತಿಂಡಿ, ಊಟ ಹಾಗೂ ಇತರೆ ಸಾಮಾಗ್ರಿಗಳನ್ನು ಸಾಗಿಸುತ್ತಿದ್ದ ಗೂಡ್ಸ್ ರೈಲುಗಳ ಸಂಪರ್ಕ ಕಡಿತಗೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X