ಹಾಸನ | ‘ಸೀಗೆ’ ಹೆಸರಿನ ಒಂಟಿಸಲಗ ಸೆರೆ

Date:

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆತ್ತೂರು ಹೋಬಳಿಯ ನಿಡಿಗೆರೆ ಅರಣ್ಯದಲ್ಲಿ ‘ಸೀಗೆ’ ಹೆಸರಿನ ಒಂಟಿಸಲಗವನ್ನು ಅರಣ್ಯ ಇಲಾಖೆ ತಂಡ ಸೆರೆ ಹಿಡಿದಿದೆ.

- Advertisement -

ಶನಿವಾರ ಏಳು ಸಾಕಾನೆಗಳೊಂದಿಗೆ ಸಮೀಪದ ಹಳ್ಳಿಬಯಲು ಗ್ರಾಮದಲ್ಲಿ ಅರಣ್ಯ ಇಲಾಖೆ ‘ಆಪರೇಷನ್‌ ಎಲಿಫೆಂಟ್’ ಆನೆ ಸೆರೆ ಹಿಡಿಯುವ ಕಾರ್ಯಾಚರಣೆ  ಆರಂಭಿಸಿತ್ತು. ಆದರೆ ‘ಸೀಗೆ’ ದಟ್ಟ ಕಾಡಿನೊಳಗೆ ಸೇರಿಕೊಂಡಿದ್ದರಿಂದ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದ ಅರಣ್ಯ ಇಲಾಖೆ ಅಧಿಕಾರಿಗಳು, ‘ಸೀಗೆ’ಯನ್ನು ಪತ್ತೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು...

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ ಸಂಕೇತವಾಗಿದ್ದಾರೆ. ತಮ್ಮ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎಂಬ ದೃಢ ನಂಬಿಕೆಯೊಂದಿಗೆ, ಅವರು ರೈತರಿಗೆ ಮಾರ್ಗದರ್ಶನ ನೀಡುತ್ತಾ, ಪರಿಸರವನ್ನು ರಕ್ಷಿಸುತ್ತಾ, ಮುಂದಿನ...

ನಿಡಿಗೆರೆ ಅರಣ್ಯ ಪ್ರದೇಶದಲ್ಲಿ ‘ಸೀಗೆ’ ಇರುವುದನ್ನು ಖಚಿತಪಡಿಸಿಕೊಂಡ ಅರಣ್ಯ ಇಲಾಖೆ ತಂಡ, ಬಿಕ್ಕೋಡು ಬಳಿಯಿರುವ ತಾತ್ಕಾಲಿಕ ಶಿಬಿರದಿಂದ ಲಾರಿಗಳ ಮೂಲಕ ನಿಡಿಗೆರೆ ಅರಣ್ಯ ಪ್ರದೇಶಕ್ಕೆ ಸಾಕಾನೆಗಳನ್ನು ಸ್ಥಳಾಂತರ ಮಾಡಿ, ಕಾರ್ಯಾಚರಣೆ ಆರಂಭಿಸಿತು. ಭಾನುವಾರ ಮಧ್ಯಾಹ್ನ ವೈದ್ಯರು ‘ಸೀಗೆ’ಗೆ ಅರಿವಳಿಕೆ ಚುಚ್ಚುಮದ್ದು ನೀಡಿದರು. ಡಾಟ್ ಚುಚ್ಚಿಕೊಂಡ ನಂತರವೂ ಕಿ.ಮೀ.ಗಟ್ಟಲೆ ಓಡಿದ ‘ಸೀಗೆ’, ಕೊನೆಗೆ ಪ್ರಜ್ಞೆತಪ್ಪಿ ಬಿತ್ತು. ಅದನ್ನು ಆರೈಕೆ ಮಾಡಿದ ಅರಣ್ಯ ಇಲಾಖೆ ಸಿಬ್ಬಂದಿ, ಹಗ್ಗದಿಂದ ಬಂಧಿಸಿದರು. ಪ್ರಜ್ಞೆ ಮರಳಿದ ನಂತರ ಸ್ಥಳಾಂತರಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟದಿಂದ ವಿದ್ಯಾರ್ಥಿ ಯುವಜನರ ಪ್ರಣಾಳಿಕೆ ಬಿಡುಗಡೆ 

‘ಅಭಿಮನ್ಯು’ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ‘ಹರ್ಷ’, ‘ಪ್ರಶಾಂತ’, ‘ಕರ್ನಾಟಕ ಭೀಮ’, ‘ಮಹೇಂದ್ರ’, ‘ಧನಂಜಯ’, ‘ಅಶ್ವತ್ಥಾಮ’ ಸಾಕಾನೆಗಳು ಭಾಗವಹಿಸಿದ್ದವು.

ಸೆರೆಯಾದ ‘ಸೀಗೆ’ ಈ ಮೊದಲು ಇಬ್ಬರನ್ನು ಬಲಿ ಪಡೆದಿದ್ದು, ಹಲವರ ಮೇಲೆ ದಾಳಿ ಮಾಡಿ ಗಾಯಗೊಳಿಸಿತ್ತು ಎನ್ನಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಕರ್ತವ್ಯಲೋಪ ಆರೋಪದಡಿ ಡಿಎಚ್‌ಒ ಡಾ. ರಾಜಕುಮಾರ್ ಯರಗಲ್ ಅಮಾನತು

ಕರ್ತವ್ಯಲೋಪ, ಆಡಳಿತಾತ್ಮಕ ನಿರ್ಲಕ್ಷ್ಯ ಹಾಗೂ ಇಲಾಖೆಯ ಸೂಚನೆಗಳನ್ನು ಪಾಲಿಸದೆ ಕಾರ್ಯನಿರ್ವಹಿಸಿದ ಆರೋಪದ...

ಅ.15ರಿಂದ ಬಾಗಲಕೋಟೆ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ತರಗತಿ ಆರಂಭ

ಬಾಗಲಕೋಟೆ ಜಿಲ್ಲೆಯ ಬಹು ವರ್ಷಗಳ ಬೇಡಿಕೆಯ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ...

ರಾಯಚೂರು | ಅನಧಿಕೃತ ವಿದ್ಯುತ್ ಬಳಕೆ; ಜೆಸ್ಕಾಂನಿಂದ ₹18.95 ಲಕ್ಷ ದಂಡ

ಜೆಸ್ಕಾಂ ಇಲಾಖೆಯಿಂದ ಜಿಲ್ಲೆಯಲ್ಲಿ ಆಗಸ್ಟ್‌ನಲ್ಲಿ ಜೆಸ್ಕಾಂ ಅಧಿಕಾರಿಗಳು, ಜಾಗೃತದಳದವರು ದಾಳಿ ಮಾಡಿ...