ಹಾಸನ | ಬಿಜೆಪಿ ತೊರೆದ ನಾರ್ವೆ ಸೋಮಶೇಖರ್‌; ಜೆಡಿಎಸ್‌ ಅಭ್ಯರ್ಥಿಗೆ ಬೆಂಬಲ

Date:

ಸಕಲೇಶಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ ವಂಚಿತ ನಾರ್ವೆ ಸೋಮಶೇಖರ್‌ ಅವರು ಕೇಸರಿ ಪಕ್ಷ ತೊರೆದಿದ್ದು, ಜೆಡಿಎಸ್‌ಅನ್ನು ಬೆಂಬಲಿಸಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

- Advertisement -

ಹಾಸನದ ಅಶೋಕ ಹೋಟೆಲ್‌ನಲ್ಲಿ ಜೆಡಿಎಸ್‌ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದ ಅವರು ಸಂಜೆ ಹೊಳೆನರಸೀಪುರ ವಿಧಾನಸಭಾ ವ್ಯಾಪ್ತಿಯ ಗನ್ನಿಕಡದ ನಿವಾಸದಲ್ಲಿ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರನ್ನು ಭೇಟಿಯಾಗಿ ಪಕ್ಷಕ್ಕೆ ಸೇರಲು ನಿರ್ಧರಿಸಿದ್ದರು. ಆದರೆ, ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಬೆಂಗಳೂರಿನಲ್ಲಿ ವಿದ್ಯುಕ್ತವಾಗಿ ಪಕ್ಷಕ್ಕೆ ಸೇರ್ಪಡೆಯಾಗಬೇಕೆಂದು ಬೆಂಬಲಿಗರು ಒತ್ತಾಯಿಸಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಹಾಸನ, ಸಕಲೇಶಪುರ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿಗಳಿಗೆ ಬೆಂಬಲ ಸೂಚಿಸಲು ನಾರ್ವೆ ಸೋಮಶೇಖರ್‌ ನಿರ್ಧರಿಸಿದ್ದಾರೆ. ಹಾಸನ ಶಾಸಕ ಪ್ರೀತಂ ಗೌಡ ಅವರನ್ನು ಈ ಬಾರಿ ಸೋಲಿಸಲೇಬೇಕು ಎಂದು ಹಠಕ್ಕೆ ಬಿದ್ದಿರುವ ಎಚ್‌.ಡಿ ರೇವಣ್ಣ ಹಾಗೂ ಅವರ ಕುಟುಂಬಕ್ಕೆ ಬಲ ಬಂದಂತಾಗಿದ್ದು, ಸ್ವರೂಪ್‌ ಪ್ರಕಾಶ್‌ ಅವರಿಗೆ ವಿಶ್ವಾಸ ಬಂದಂತಾಗಿದೆ.

ಈ ಸುದ್ದಿ ಓದಿದ್ದೀರಾ? ಶ್ರವಣಬೆಳಗೊಳ | ಹುಟ್ಟೂರಿನ ಋಣ ತೀರಿಸಲು ಎಂದೂ ಸಾಧ್ಯವಿಲ್ಲ: ಶಾಸಕ ಬಾಲಕೃಷ್ಣ

ಕಳೆದ ಚುನಾವಣೆಯಲ್ಲಿ ಸಕಲೇಶಪುರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಾರ್ವೆ ಸೋಮಶೇಖರ್‌ ಅವರು ಕೆಲವೇ ಮತಗಳ ಅಂತರದಿಂದ ಪರಾಭವಗೊಂಡಿದ್ದರು.

ಈ ಬಾರಿ ಬಿಜೆಪಿಯಿಂದ ಟಿಕೆಟ್‌ ಲಭಿಸುತ್ತದೆ ಎಂಬ ವಿಶ್ವಾಸದಿಂದ ಇದ್ದ ನಾರ್ವೆ ಸೋಮಶೇಖರ್ ಅವರನ್ನು ಬಿಜೆಪಿ ವರಿಷ್ಠರು ಒಪ್ಪಲಿಲ್ಲ. ತಮ್ಮದೇ ರಾಜಕೀಯ ಲೆಕ್ಕಾಚಾರದಲ್ಲಿದ್ದ ಪ್ರೀತಂ ಗೌಡ ಅವರು ಸಿಮೆಂಟ್‌ ಮಂಜು ಅವರಿಗೆ ಟಿಕೆಟ್‌ ಕೊಡಿಸಿದ್ದಾರೆ ಎನ್ನಲಾಗಿದೆ. ಹಾಗಾಗಿ ಈ ಬಾರಿ ಇಬ್ಬರನ್ನು ಸೋಲಿಸಬೇಕು ಎಂಬ ಕಾರಣದಿಂದ ನಾರ್ವೆ ಸೋಮಶೇಖರ್‌ ಜೆಡಿಎಸ್‌ ಅಭ್ಯರ್ಥಿಗಳನ್ನು ಬೆಂಬಲಿಸಲು ನಿರ್ಧರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಆಲೂರು ಕೊರಗರ ಭೂಮಿ ಸಮಸ್ಯೆ ಬಗೆಹರಿಸಲು ಕ್ರಮ: ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ

ಕುಂದಾಪುರ ತಾಲೂಕಿನ ಆಲೂರು ಮತ್ತು ಹರ್ಕೂರು ಗ್ರಾಮದ ಕೊರಗ ಕುಟುಂಬಗಳ ಭೂಮಿ...

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ: ಲೆಕ್ಕಾಚಾರವೇನು?

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು...

ಮಂಗಳೂರು | ಯುಪಿಐಗೆ ಶುಲ್ಕ? ‘ಡಿಜಿಟಲ್ ಇಂಡಿಯಾ’ ಆಶಯಕ್ಕೆ ವಿರುದ್ಧ: ಪದ್ಮರಾಜ್ ಪೂಜಾರಿ

ಯುಪಿಐ ವಹಿವಾಟಿನ ಮೇಲೆ ಶುಲ್ಕ ವಿಧಿಸಲು ಮುಂದಾಗಿರುವ ಕೇಂದ್ರ ಸರ್ಕಾರದ ನಿಲುವು...

ವಿಜಯಪುರ | ಸಮಾಜದ ಅಭಿವೃದ್ಧಿಯಲ್ಲಿ ಎಂಜಿನಿಯರ್‌ ಪಾತ್ರ ಮಹತ್ವದ್ದು: ರಾಕೇಶ್ ಗೋಪಾಲ್ ಜೋಶಿ

ಸಮಾಜದ ಅಭಿವೃದ್ಧಿ, ದೇಶದ ಪ್ರಗತಿಯಲ್ಲಿ ಎಂಜಿನಿಯರ್‌ಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು...