ಹಾಸನ l 22.3 ಎಕರೆ ಅರಣ್ಯ ಒತ್ತುವರಿ ತೆರವುಗೊಳಿಸಿದ ಅಧಿಕಾರಿಗಳು 

Date:

Advertisements

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಕಾಡುಮನೆ ಗ್ರಾಮದಲ್ಲಿ ಸರ್ವೆ ನಂಬರ್ 76 ರ ವ್ಯಾಪ್ತಿಯಲ್ಲಿದ್ದ, 22.3 ಎಕರೆ ಕಾಫಿ ತೋಟವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಶನಿವಾರ ತೆರವುಗೊಳಿಸಿದರು. 

Screenshot 2025 03 23 09 26 31 17 7352322957d4404136654ef4adb64504
ಅರಣ್ಯಇಲಾಖೆ ಅಧಿಕಾರಿಗಳಿಂದ ಕಾಫಿ ಗಿಡ ತೆರವು

ಬೆಂಗಳೂರು ಮೂಲದ ಮನೋಹರ್ ಅಯ್ಯರ್ ಎಂಬ ವ್ಯಕ್ತಿ ಅನಧಿಕೃತವಾಗಿ ಸಾಗುವಳಿ ಮಾಡಿದ್ದ, ಸರ್ವೆ ನಂಬರ್ 76 ರ ವ್ಯಾಪ್ತಿಯಲ್ಲಿದ್ದ, 22.3 ಎಕರೆ ಕಾಫಿತೋಟವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ತೆರವುಗೊಳಿದ್ದಾರೆ.

Screenshot 2025 03 23 09 27 05 69 7352322957d4404136654ef4adb64504
ಅರಣ್ಯ ಸಿಬ್ಬಂದಿಯವರಿಂದ ತೆರವು ಕಾರ್ಯಾಚರಣೆ

ಮೂರ್ಖಣ್ಣಗುಡ್ಡ ವ್ಯಾಪ್ತಿಯ ಸೇಕ್ಷನ್ 4 ರಕ್ಷಿತಾರಣ್ಯಕ್ಕೆ ಈ ಕಾಫಿ ತೋಟ ಸೇರ್ಪಡೆಯಾಗಿದೆ ಎಂದು ವಲಯ ಅರಣ್ಯಾಧಿಕಾರಿ ಹೇಮಂತ್ ಅವರು ಭೂಮಿಗೆ ಸಂಬಂಧಿಸಿದಂತೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು. 

Advertisements
Screenshot 2025 03 23 09 26 39 74 7352322957d4404136654ef4adb64504 1
ಅರಣ್ಯ ಇಲಾಖೆಯಿಂದ ನಾಮ ಫಲಕ ಅಳವಡಿಸಲಾಗಿದೆ

ತೋಟದ ಮಾಲೀಕರು ನ್ಯಾಯಾಲಯಕ್ಕೆ ಭೂಮಿ ದಾಖಲೆ ಸಲ್ಲಿಸಲು ವಿಫಲರಾದ ಹಿನ್ನಲೆಯಲ್ಲಿ, ಫ್ರೆಬ್ರವರಿ 27ರಂದು 64ಎ ಅಡಿಯಲ್ಲಿ ಭೂಮಿ ವಶಕ್ಕೆ ನ್ಯಾಯಾಲಯ ಆದೇಶಿಸಿತ್ತು. ಈ ಕುರಿತು ವಲಯ ಅರಣ್ಯಾಧಿಕಾರಿ ಹೇಮಂತ್ ನೇತೃತ್ವದಲ್ಲಿ ಶನಿವಾರ ಸುಮಾರು 50ಕ್ಕೂ ಅಧಿಕ ಅರಣ್ಯ ಇಲಾಖೆ ಅಧಿಕಾರಿಗಳು ಸುಮಾರು 10ಕ್ಕೂ ಅಧಿಕ ಯಂತ್ರಗಳನ್ನು ಬಳಸಿ ತೋಟದಲ್ಲಿದ್ದ, ಕಾಫಿಗಿಡಗಳನ್ನು ತೆರವುಗೊಳಿಸಿ ತೋಟವನ್ನು ಅರಣ್ಯ ಇಲಾಖೆಗೆ ವಶಪಡಿಸಿಕೊಂಡು ನಾಮ ಫಲಕ ಆಳವಡಿಸಿದ್ದಾರೆ. 

ಇದನ್ನೂ ಓದಿದ್ದೀರಾ?ಹಾಸನ l ಆನೆ ದಾಳಿ; ಪ್ರಾಣಾಪಾಯದಿಂದ ಕಾರ್ಮಿಕ ಪಾರು

ಈ ಜಾಗಕ್ಕೆ ಹಲವು ಬಗೆಯ ಅರಣ್ಯ ಗಿಡಗಳನ್ನು ನೆಡಲಾಗುವುದು ಎಂದು ವಲಯ ಅರಣ್ಯಾಧಿಕಾರಿ ತಿಳಿಸಿದರು.  ಈ ವೇಳೆ ಕಾರ್ಯಚರಣೆಯಲ್ಲಿ ಉಪ ವಲಯಾಧಿಕಾರಿಗಳಾದ ಮಹದೇವಪ್ಪ, ದರ್ಶನ್, ಮಂಜುನಾಥ್ ಹಾಗೂ ಅರಣ್ಯ ಸಿಬ್ಬಂದಿಯವರು ಹಾಗೂ  ಇನ್ನಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X