ಹಾಸನ | ಸೀತಾರಾಂ ಯೆಚೂರಿಗೆ ಸಿಗರನಹಳ್ಳಿ ಜನರಿಂದ ಶ್ರದ್ಧಾಂಜಲಿ

Date:

Advertisements

ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರು ಸೆಪ್ಟೆಂಬರ್‌ 12ರಂದು ನಿಧನರಾಗಿದ್ದು, ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಸಿಗರನಹಳ್ಳಿ ನಿವಾಸಿಗಳು ಶ್ರದ್ಧಾಂಜಲಿ ಸಲ್ಲಿಸಿದರು.

ಸಿಗರನಹಳ್ಳಿ ಪರಿಶಿಷ್ಟ ಜಾತಿ ಕೇರಿಯಲ್ಲಿ ನಡೆದ ಸಭೆಯಲ್ಲಿ ಯೆಚೂರಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ್ದು, ಯೆಚೂರಿಯವರು ಗ್ರಾಮಕ್ಕೆ ಭೇಟಿ ನೀಡಿದ್ದ ಕ್ಷಣಗಳನ್ನು ನಿವಾಸಿಗಳು ಸ್ಮರಿಸಿಕೊಂಡರು.

“ರಾಷ್ಟ್ರ ಮತ್ತು ರಾಜ್ಯ ನಾಯಕರು ಸಮೀಪದ ಊರುಗಳಲ್ಲೇ ಇದ್ದರೂ, ಈ ಕೇರಿಗೆ ಭೇಟಿ ನೀಡಿದ ಉದಾಹರಣೆ ಇಲ್ಲ. ದೇವಸ್ಥಾನಕ್ಕೆ ಪ್ರವೇಶ ಮಾಡಿದ್ದಕ್ಕೆ ಮಹಿಳೆಯರಿಗೆ ದಂಡ ಹಾಕಲಾಗಿತ್ತು. ಅದರ ವಿರುದ್ಧ ನಡೆಸಿದ ಹೋರಾಟಕ್ಕೆ ಬೆಂಬಲ ಸೂಚಿಸಲು ದೂರದ ದೆಹಲಿಯಿಂದ ಯೆಚೂರಿಯವರು ಬಂದಿದ್ದ” ಎಂದು ನೆರೆದಿದ್ದ ಸಭಿಕರು ಕಣ್ತುಂಬಿಕೊಂಡರು.

Advertisements
ಯೆಚೂರಿಯವರಿಗೆ ಶ್ರದ್ಧಾಂಜಲಿ

ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಧರ್ಮೇಶ್ ಮಾತನಾಡಿ, “ಯೆಚೂರಿಯವರು ರಾಷ್ಟ್ರ ಕಂಡ ಧೀಮಂತ ರಾಜಕಾರಣಿ. ತೃತೀಯ ರಂಗದ ಮುಂಚೂಣಿ ನಾಯಕ. ಅವರ ನಿಧನ ನೋವಿನ ಸಂಗತಿ. ನಮ್ಮ ಪಕ್ಷ ಕೈಗೊಂಡ ತೀರ್ಮಾನದಂತೆ ಅವರು ಸಿಗರನಹಳ್ಳಿಗೆ ಭೇಟಿ ನೀಡಲು ನಿರ್ಧರಿಸಿದರು. ಅವರ ಭೇಟಿ ಸಿಗರನಹಳ್ಳಿಯಲ್ಲಿ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಜನರ ನೈತಿಕತೆ ಹೆಚ್ಚಿಸಿತ್ತು” ಎಂದು ಸ್ಮರಿಸಿದರು.

ಈ ಸುದ್ದಿ ಓದಿದ್ದೀರಾ? ಹಾಸನ | ಮಹಿಳೆಯರಿಗೆ ಸಮಾನ ಅವಕಾಶ ನೀಡಿದಾಗ ಮಾತ್ರ ನೈಜ ಅಭಿವೃದ್ಧಿ ಸಾಧ್ಯ: ಸಾಹಿತಿ ರೂಪ ಹಾಸನ್

“ಯೆಚೂರಿಯವರು ಸಿಗರನಹಳ್ಳಿಗೆ ಭೇಟಿ ನೀಡುವುದನ್ನು ತಡೆಯಲು ಹಲವು ಪ್ರಯತ್ನಗಳು ನಡೆದವು. ಜಿಲ್ಲೆಯ ಹಿರಿಯ ರಾಜಕಾರಣಿಯೊಬ್ಬರು ಯೆಚೂರಿಯವರಿಗೆ ಕರೆ ಮಾಡಿ ಭೇಟಿ ನೀಡದಂತೆ ಮನವೊಲಿಸುವ ಪ್ರಯತ್ನ ನಡೆಸಿದ್ದರು. ಆದರೆ, ನಮ್ಮ ನಾಯಕರು ತಮ್ಮ ನಿರ್ಧಾರಕ್ಕೆ ಬದ್ಧರಾಗಿದ್ದರು. ಅದು ನಮ್ಮ ನಾಯಕ ಯೆಚೂರಿ ಮತ್ತು ಕಮ್ಯೂನಿಸ್ಟ್ ಪಕ್ಷಕ್ಕೆ ಇರುವ ಬದ್ಧತೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X