ಹಾಸನ | ಬಿಜೆಪಿ ಸಂಸದನ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Date:

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಕುಸ್ತಿ ಫೆಡರೇಷನ್ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಬಂಧನಕ್ಕೆ ಆಗ್ರಹಿಸಿ ಹಾಸನದಲ್ಲಿ ಸಿಐಟಿಯು, ಎಸ್‌ಎಫ್‌ಐ, ಡಿವೈಎಫ್‌ಐ, ಕೆಪಿಆರ್‌ಎಸ್‌, ಡಿಎಚ್‌ಒ ಹಾಗೂ ದಲಿತ, ಜನಪರ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ.

- Advertisement -

ಒಲಂಪಿಕ್ ಪದಕ ವಿಜೇತರು, ವಿಶ್ವ ಚಾಂಪಿಯನ್‌ಗಳು ಸೇರಿದಂತೆ ದೇಶದ ಹೆಮ್ಮೆಯ ಕುಸ್ತಿಪಟುಗಳು 2023 ಏಪ್ರಿಲ್ 24 ರಿಂದ ನವದೆಹಲಿಯ ಜಂತರ್ ಮಂಥರ್ ನಲ್ಲಿ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೂ, ಅವರ ಅಳಲನ್ನು ಕೇಳದ ಪ್ರಧಾನಿ ಮೋದಿ ಮತ್ತು ಕೇಂದ್ರ ಸರ್ಕಾರ ಆರೋಪಿ ಸಂಸದನ ರಕ್ಷಣೆಗೆ ನಿಂತಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಪ್ರತಿಭಟನೆಯಲ್ಲಿ ಮಾತನಾಡಿದ ಸಾಹಿತಿ ರೂಪ ಹಾಸನ, “ಅಪ್ರಾಪ್ತ ಹೆಣ್ಣು ಮಕ್ಕಳು ಸೇರಿದಂತೆ ಪ್ರಖ್ಯಾತ ಮಹಿಳಾ ಕುಸ್ತಿಪಟುಗಳಿಗೆ ಕುಸ್ತಿ ಫೆಡರೇಶನ್ ಮುಖ್ಯಸ್ಥ ಹಾಗೂ ಇನ್ನಿತರ ಸಿಬ್ಬಂದಿಗಳು ಲೈಂಗಿಕ ಕಿರುಕುಳ ಹಾಗೂ ಹಿಂಸೆ ನೀಡಿರುವುದು ಅತ್ಯಂತ ಅಘಾತಕಾರಿ ಮತ್ತು ದೇಶವೇ ತಲೆತಗ್ಗಿಸುವಂತಹ ಕೃತ್ಯ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಭೇಟಿ ಬಚಾವೋ, ಭೇಟಿ ಪಡಾವೋ’ ಎಂದು ಪ್ರಚಾರ ಮಾಡುವ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಆರೋಪಿ ಬಿಜೆಪಿ ಸಂಸದನನ್ನು ರಕ್ಷಿಸುತ್ತಿರುವುದು ನಾಚೀಕೆಗೇಡಿನ ಸಂಗತಿ. ದೂರಿನ ಆಧಾರದಲ್ಲಿ ಕಾನೂನು ಕ್ರಮ ಜರುಗಿಸಿ ನೊಂದ ಮಹಿಳಾ ಕ್ರೀಡಾಪಟುಗಳಿಗೆ ರಕ್ಷಣೆ ಒದಗಿಸಬೇಕಾಗಿದ್ದ ಸರ್ಕಾರ, ತನ್ನ ಪೊಲೀಸ್ ಪಡೆಗಳನ್ನು ಬಳಸಿ, ನ್ಯಾಯಕ್ಕಾಗಿ ಪ್ರತಿಭಟಿಸುತ್ತಿರುವ ಕ್ರೀಡಾಪಟುಗಳ ಮೇಲೆ ದಮನಕಾರಿ ಕ್ರಮಗಳನ್ನು ಅನುಸರಿಸುತ್ತಿದೆ. ಕಳೆದ ವಾರ ಪ್ರತಿಭಟನಾನಿರತರ ಮೇಲೆ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂದು ಕಿಡಿಕಾರಿದ್ದಾರೆ.

“ನೂತನ ಸಂಸತ್ ಕಟ್ಟಡದ ಒಳಗಡೆ ಆರೋಪಿ ಬಿಜೆಪಿ ಸಂಸದ ಆತಿಥ್ಯ ಪಡೆಯುತ್ತಿರುವಾಗಲೇ, ಪ್ರತಿಭಟನಾ ನಿರತ ಕುಸ್ತಿಪಟುಗಳ ಮೇಲೆ ಹೀನಾಯ ದೌರ್ಜನ್ಯ ನಡೆಸಲಾಗಿದೆ. ಪ್ರಜಾಪ್ರಭುತ್ವದ ಹೆಮ್ಮೆಯ ಸಂಸ್ಥೆಯಾದ ಸಂಸತ್ತಿನಲ್ಲಿ ಸಂವಿಧಾನದ ನೀತಿ-ನಡಾವಳಿಗೆ ವಿರುದ್ದವಾಗಿ, ಪುರುಷ ಅಹಂಕಾರವನ್ನು ಸಮರ್ಥಿಸುವ ಪುರೋಹಿತಶಾಹಿ ಯಜಮಾನಿಕೆಯನ್ನು ಸಂಕೇತಿಸುವ ಧಾರ್ಮಿಕ ಆಚರಣೆಗಳನ್ನು ನಡೆಸಲಾಗಿದೆ. ಇದು ನಮ್ಮ ಸಂವಿಧಾನ ಪರಂಪರೆಗೆ ಆಗಿರುವ ಗಂಭೀರ ಧಕ್ಕೆ” ಎಂದು ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಗ್ಯಾರಂಟಿ ಯೋಜನೆ ಹೇಗೆ ವಿರೋಧಿಸಬೇಕು ಎಂಬ ಗೊಂದಲದಲ್ಲಿ ಬಿಜೆಪಿ‌ ಇದೆ : ಕಾಂಗ್ರೆಸ್ ಟೀಕೆ

ಲೈಂಗಿಕ ಕಿರುಕುಳ ಹಾಗೂ ಹಿಂಸೆ ಕೊನೆಗಾಣಬೇಕು ಇದಕ್ಕಾಗಿ ದೇಶದ ಎಲ್ಲ ನಾಗರಿಕರು ಕುಸ್ತಿಪಟುಗಳ ಪ್ರತಿಭಟನೆಯನ್ನು ಬೆಂಬಲಿಸಬೇಕು. ಅಂತರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ಗೆದ್ದು ನಮ್ಮ ದೇಶಕ್ಕೆ ಕೀರ್ತಿ ತಂದವರಿಗೆ ಇಷ್ಟು ಕಿರುಕುಳ ನೀಡಲಾಗಿದೆ. ಇನ್ನು ಸಾಮಾನ್ಯ ಮಹಿಳೆಯರ ಹಾಗೂ ಹೆಣ್ಣು ಮಕ್ಕಳ ಸುರಕ್ಷತೆ ಕೇಳುವುದು ಹೇಗೆ? ದೇಶಕ್ಕೆ ಕೀರ್ತಿ ತಂದ ಕ್ರೀಡಾಪಟುಗಳ ಆತ್ಮಸ್ಥೈರ್ಯ ಕುಂದಿಸುವ ಕೆಲಸವನ್ನು ಬಿಜೆಪಿ ಸರ್ಕಾರ ನಿಲ್ಲಿಸಬೇಕು. ಆರೋಪಿಯನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ಪ್ರಧಾನ ಕಾರ್ಯದರ್ಶಿ ಪುಷ್ಪ, ಕೆಪಿಆರ್‌ಎಸ್‌ ಜಿಲ್ಲಾಧ್ಯಕ್ಷ ಎಚ್.ಆರ್ ನವೀನ್ ಕುಮಾರ್, ಹಿರಿಯ ದಲಿತ ಮುಖಂಡರಾದ ರಾಜಶೇಖರ, ಡಿವೈಎಫ್‌ಐ ಜಿಲ್ಲಾ ಕಾರ್ಯದರ್ಶಿ ಪೃಥ್ವಿ ಹಾಗೂ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...