ಹಾಸನ | ಅಕ್ರಮ ಒತ್ತುವರಿ ನೆಪದಲ್ಲಿ ತೆರವು; ಬೆಳಂ ಬೆಳಿಗ್ಗೆ ಕಾರ್ಯಾಚರಣೆ ಆರಂಭಿಸಿದ ನಗರಸಭೆ

Date:

Advertisements

ಹಾಸನ ನಗರದ ತಣ್ಣೀರುಹಳ್ಳ ವೃತ್ತದಿಂದ ಸಕಲೇಶಪುರದ ಕಡೆಗೆ ಹಾದುಹೋಗುವ ಹೆದ್ದಾರಿ ಪಕ್ಕದಲ್ಲಿ ಅಕ್ರಮ ಒತ್ತುವರಿ ಮಾಡಿಕೊಂಡಿದ್ದಾರೆಂದು ನಗರಸಭೆ ತೆರೆವು ಕಾರ್ಯಾಚರಣೆ ಆರಂಭಿಸಿದ್ದು, ವಾಣಿಜ್ಯ ಕಟ್ಟಡಗಳ ಎದುರು ಹಾಕಲಾಗಿದ್ದ ಶೆಡ್‌ಗಳು, ಬೃಹತ್ ಜಾಹೀರಾತು ಫಲಕಗಳು, ದೊಡ್ಡ ಫ್ಲೆಕ್ಸ್, ಸೆಕ್ಯೂರಿಟಿ ಬೂತ್ ಸೇರಿದಂತೆ ಅನೇಕ ಅಕ್ರಮ ಒತ್ತುವರಿಯನ್ನು ತೆರೆವುಗೊಳಿಸಿದ್ದಾರೆ.

ನಗರದ ತಣ್ಣೀರು ಹಳ್ಳದಿಂದ ಸಕಲೇಶಪುರ ಮಾರ್ಗದ ರಸ್ತೆಗಳ ಅಕ್ಕಪಕ್ಕದಲ್ಲಿ ಇದ್ದಂತಹ ಅಕ್ರಮ ಶೆಡ್, ಬ್ಯಾನರ್, ಫ್ಲೆಕ್ಸ್ ಹಾಗೂ ಕಟ್ಟಡವನ್ನು ನಗರಸಭೆ ಆಯುಕ್ತ ನರಸಿಂಹಮೂರ್ತಿ ಅವರ ನೇತೃತ್ವದಲ್ಲಿ ಜೆಸಿಬಿ ಮೂಲಕ ತೆರವು ಕಾರ್ಯಾಚರಣೆ ನಡೆಸಲಾಯಿತು.‌

ಅಕ್ರಮ ಒತ್ತುವರಿ ತೆರವು 1

ಈ ಹಿಂದೆ ನಗರದ ಬಿಎಮ್ ರಸ್ತೆಯುದ್ದಕ್ಕೂ ಅಕ್ರಮವಾಗಿ ಹಾಕಲಾಗಿದ್ದ ಫ್ಲೆಕ್ಸ್, ಬ್ಯಾನರ್, ಪೆಟ್ಟಿಗೆ ಅಂಗಡಿಗಳನ್ನು ತೆರವು ಮಾಡಲಾಗಿತ್ತು. ಇಂದು ಮುಂಜಾನೆಯೂ ಏಕಾಏಕಿ ತೆರವು ಕಾರ್ಯಚರಣೆ ಕೈಗೊಂಡಾಗ ಇಲ್ಲಿನ ಅಂಗಡಿ ಮಾಲೀಕರು ತೀವ್ರ ವಿರೋಧ ವ್ಯಕ್ತಪಡಿಸಿ ಆಯುಕ್ತರೊಂದಿಗೆ ವಾಗ್ವಾದ ನಡೆಸಿದ್ದಾರೆ.

Advertisements
ಅಕ್ರಮ ಒತ್ತುವರಿ ತೆರವು 2

ಸ್ಥಳೀಯರು, “ನಗರಸಭೆಯವರು ಯಾರಿಗೂ ನೋಟಿಸ್ ಜಾರಿ ಮಾಡದೆ ಏಕಾಏಕಿ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಬಡವರ ಅನೇಕ ಗೂಡಂಗಡಿ ಒಡೆದು ಹಾಕಿದ್ದು, ಕೆಲ ನಿರ್ದಿಷ್ಟ ವ್ಯಕ್ತಿಗಳಿಗೆ ಸೇರಿದ ಒತ್ತುವರಿಯನ್ನೇಕೆ ತೆರವು ಮಾಡಿಲ್ಲ. ಯಾವುದೇ ತೆರವು ಕಾರ್ಯಾಚರಣೆಗೆ ನೋಟಿಸ್ ಜಾರಿ ಮಾಡಬೇಕು. ಆದರೆ ನಗರಸಭೆಯಿಂದ ವಿಷಯ ತಿಳಿಸದೆ ಕಾರ್ಯಾಚರಣೆ ಕೈಗೊಂಡಿರುವುದು ಸರಿಯಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಕರ್ನಾಟಕ ಒನ್ ಸೇವಾ ಕೇಂದ್ರ ಜನಸಾಮಾನ್ಯರಿಗೆ ಅನುಕೂಲ: ಶಾಸಕ ಕೆ ಎಸ್ ಆನಂದ್

“ಈ ಬಗ್ಗೆ ಪ್ರಶ್ನಿಸಿದರೆ ಜಿಲ್ಲಾಧಿಕಾರಿಗಳು ನಮಗೆ ಆದೇಶ ನೀಡಿದ್ದಾರೆಂದು ಆಯುಕ್ತರು ಹೇಳುತ್ತಾರೆ. ಬಡ ಮಧ್ಯಮ ವರ್ಗದ ವ್ಯಾಪರಸ್ಥರಿಗೆ ತೀವ್ರ ತೊಂದರೆಯಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಗರಸಭೆ ಮುಖ್ಯ ಎಂಜಿನಿಯರ್ ವೆಂಕಟೇಶ್, ದೀಪಕ್, ಆರೋಗ್ಯ ನಿರೀಕ್ಷಕ ಪ್ರಸಾದ್, ಚನ್ನೇಗೌಡ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X