ಹಾಸನ | ಹಾಡಹಗಲೇ ರೌಡಿಶೀಟರ್ ಬರ್ಬರ ಹತ್ಯೆ

Date:

Advertisements

ರೌಡಿಶೀಟರ್‌ನನ್ನು ದುಷ್ಕರ್ಮಿಗಳು ಹಾಡಹಗಲೇ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ, ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಧನಲಕ್ಷ್ಮೀ ಚಿತ್ರಮಂದಿರದ ಬಳಿ ನಡೆದಿದೆ.

ದುಷ್ಕರ್ಮಿಗಳು ರೌಡಿಶೀಟರ್‌ನನ್ನು ನಡುರಸ್ತೆಯಲ್ಲಿ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ. ಮಾಸ್ತಿಗೌಡ (30) ಕೊಲೆಯಾದ ರೌಡಿಶೀಟರ್. ಇನ್ನೋವಾ ಕಾರಿನಲ್ಲಿ ಬಂದ ನಾಲ್ಕೈದು ದುಷ್ಕರ್ಮಿಗಳು ಕೃತ್ಯ ಎಸಗಿದ್ದಾರೆಂಬ ಆರೋಪವಿದೆ.

ಮಾಸ್ತಿಗೌಡ ಚನ್ನರಾಯಪಟ್ಟಣ ತಾಲೂಕಿನ ಹೊನ್ನಮಾರನಹಳ್ಳಿ ಗ್ರಾಮದವನು ಎಂದು ತಿಳಿದುಬಂದಿದೆ. ಆತ ಚನ್ನರಾಯಪಟ್ಟಣ ಭಾಗದಲ್ಲಿ ರೌಡಿಯಾಗಿ ಕುಖ್ಯಾತಿ ಪಡೆದಿದ್ದ. ಹಲವಾರು ಕ್ರಿಮಿನಲ್‌ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಆತನ ವಿರುದ್ಧ ಪೊಲೀಸರು ರೌಡಿಶೀಟ್‌ ತೆರೆದಿದ್ದರು. ಕಾಲಕಾಲಕ್ಕೆ ಠಾಣೆಗೆ ಬಂದು ಸಹಿ ಹಾಕುವಂತೆ ಸೂಚಿಸಿದ್ದರು.

Advertisements

ಪೊಲೀಸರು ಆತನನ್ನು ನಿಯಂತ್ರಿಸಲು ಯತ್ನಿಸಿದರೂ ಆತ ಹಿಂದೆ ಕಟ್ಟಿಕೊಂಡಿದ್ದ ದ್ವೇಷಗಳಿಂದ ಈ ಕೊಲೆ ನಡೆದಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸರು ನಡುರಸ್ತೆಯಲ್ಲಿ ನಡೆದ ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸಿಸಿ ಟಿವಿ ಫೂಟೇಜ್‌ಗಳನ್ನು ಪರಿಶೀಲಿಸುತ್ತಿದ್ದಾರೆ. ಮಾಸ್ತಿ ಗೌಡನಿಗೆ ಇರಬಹುದಾದ ವೈರಿಗಳನ್ನು ಗುರುತಿಸುವ ಕೆಲಸವೂ ನಡೆದಿದೆ. ಈಗಾಗಲೇ ಪೊಲೀಸರಿಗೆ ಕೆಲವರ ಮೇಲೆ ಸಂಶಯ ಬಂದಿದ್ದು, ಅವರನ್ನು ಕರೆದು ತಂದು ವಿಚಾರಣೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಗದಗ | ವನ ಮಹೋತ್ಸವಕ್ಕೆ ಗ್ರಾ.ಪಂ ಅಧ್ಯಕ್ಷ ಲಕ್ಷ್ಮಣ ಕಂಬಳಿ ಚಾಲನೆ

ಮಾಸ್ತಿ ಗೌಡನನ್ನು ದುಷ್ಕರ್ಮಿಗಳು ನೂರಾರು ಜನರ ನಡುವೆಯೇ ಅಟ್ಟಾಡಿಸಿಕೊಂಡು ಹೋಗಿದ್ದರಿಂದ ಸ್ಥಳದಲ್ಲಿ ಭಾರೀ ಆತಂಕ ಸೃಷ್ಟಿಯಾಗಿತ್ತು. ಕೊಲೆಯಾದ ಸ್ಥಳದಲ್ಲಿ ಸಾವಿರಾರು ಜನರು ಸೇರಿದ್ದರು. ಪೊಲೀಸರು ರಸ್ತೆ ಬಂದ್‌ ನಡೆಸಿ ಮಹಜರು ನಡೆಸಿದರು. ಈ ಘಟನೆಯ ಬಳಿಕ ನಗರದಾದ್ಯಂತ ನಾಕಾಬಂದಿ ಮಾಡಿ ದುಷ್ಕರ್ಮಿಗಳು ಪಟ್ಟಣ ಬಿಟ್ಟು ಹೊರಗೆ ಹೋಗುವುದನ್ನು ತಡೆಯಲು ಪ್ರಯತ್ನಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X