ಹಾಸನ | ಕೆರೆ ನೀರು ತರಲು ವಿದ್ಯಾರ್ಥಿಗಳನ್ನು ಕಳಿಸಿದ್ದ ಶಾಲೆ ಸಿಬ್ಬಂದಿ; ಕ್ರಮಕ್ಕೆ ಆಗ್ರಹ

Date:

Advertisements

ವಸತಿ ಶಾಲೆಯಲ್ಲಿ ನೀರಿನ ಸಮಸ್ಯೆಯಿದೆ ಎಂದು ಸಮೀಪದ ಕೆರೆಯಿಂದ ನೀರು ತರಲು ವಿದ್ಯಾರ್ಥಿಗಳನ್ನು ಶಾಲೆಯ ಪ್ರಾಂಶುಪಾಲರು ಕಳುಹಿಸಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಆಂದೂರು ಗ್ರಾಮದಲ್ಲಿರುವ ಡಾ. ಬಿ.ಆರ್‌ ಅಂಬೇಡ್ಕರ್ ವಸತಿ ಶಾಲೆಯ 20 ವಿದ್ಯಾರ್ಥಿಗಳನ್ನು ಕೆರೆಯಿಂದ ನೀರು ತರಲು ಕಳುಹಿಸಲಾಗಿದೆ. ವಿದ್ಯಾರ್ಥಿಗಳನ್ನು ಕೆರೆಗೆ ಕಳುಹಿಸಿದ್ದ ಪ್ರಾಂಶುಪಾಲರು, ಕಚೇರಿ ಸಹಾಯಕ, ಸೆಕ್ಯುರಿಟಿ ಹಾಗೂ ವಾರ್ಡನ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಾಮಾಜಿಕ ಕಾರ್ಯಕರ್ತರ ಶಶಿಧರ್ ಮೌರ್ಯ ಆಗ್ರಹಿಸಿದ್ದಾರೆ.

“ಭಾರೀ ಮಳೆಯಿಂದಾಗಿ ಸೋಮವಾರ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ಈ ವೇಳೆ, ವಸತಿ ಶಾಲೆಯಲ್ಲಿ ಉಳಿದುಕೊಂಡಿದ್ದ ವಿದ್ಯಾರ್ಥಿಗಳನ್ನು ಶಾಲೆಯಿಂದ 0.5 ಕಿಮೀ ದೂರದಲ್ಲಿರುವ ಕೆರೆಗೆ ನೀರು ತರಲು ಕಳುಹಿಸಿದ್ದಾರೆ. ಕೆರೆ ಸಂಪೂರ್ಣ ತುಂಬಿದೆ. ಮಾತ್ರವಲ್ಲದೆ, “ನೀರು ತರಲು ವಿದ್ಯಾರ್ಥಿಗಳನ್ನು ಕರೆದೊಯ್ದಿದ್ದ ವಾರ್ಡನ್, ವಿದ್ಯಾರ್ಥಿಗಳನ್ನು ದನಗಳನ್ನು ಓಡಿಸುವ ಹಾಗೆ, ಬೆತ್ತ ಹಿಡಿದು ಓಡಿಸುತ್ತಿದ್ದರು” ಎಂದು ಶಶಿಧರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisements

“ಮಳೆಯಿಂದಾಗಿ ಕೆರೆಯ ದಡ ಕೂಡ ಪಸಿಯಾಗಿದೆ. ಮಕ್ಕಳು ಕೆರೆ ಬಳಿ ಹೋದಾಗ, ಕಾಲು ಜಾರಿ ಬಿದ್ದು, ಏನಾದರೂ ಅನಾಹುತ ಸಂಭವಿಸಿದರೆ, ಯಾರು ಹೊಣೆ. ವಿದ್ಯಾರ್ಥಿಗಳ ಜೀವಕ್ಕೆ ಅಪಾಯವಾಗುವ ಸಂಭವವನ್ನೂ ಯೋಚಿಸದೆ, ವಿದ್ಯಾರ್ಥಿಗಳನ್ನು ನೀರು ತರಳು ಕಳುಹಿಸಿದ್ದ ಪ್ರಾಂಶುಪಾಲರು, ವಾರ್ಡನ್, ಸೆಕ್ಯುರಿಟಿ, ಶಾಲಾ ಅಟೆಂಡರ್‌ಅನ್ನು ಸೇವೆಯಿಂದ ಅಮಾನತು ಮಾಡಬೇಕು. ತನಿಖೆ ನಡೆಸಿ, ಕ್ರಮ ಕೈಗೊಳ್ಳಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X