ಹಾಸನ | ಯುನೆಸ್ಕೋ ವಿಶ್ವ ಪರಂಪರೆ ಪಟ್ಟಿಗೆ ಶ್ರವಣಬೆಳಗೊಳ

Date:

Advertisements

ಹಾಸನ ಜಿಲ್ಲೆಯ ಶ್ರವಣಬೆಳಗೊಳ ಮತ್ತು ಗದಗ ಜಿಲ್ಲೆಯ ಲಕ್ಕುಂಡಿಯ ಸ್ಮಾರಕಗಳನ್ನು ಯುನೆಸ್ಕೋ ವಿಶ್ವ ಪರಂಪರೆಯ ತಾತ್ಕಾಲಿಕ ಪಟ್ಟಿಗೆ ಸೇರಿಸಲು ರಾಜ್ಯ ಪುರಾತತ್ವ ವಸ್ತುಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಪ್ರಸ್ತಾವನೆ ಸಿದ್ದಪಿಡಿಸುತ್ತಿದೆ. ಅದಕ್ಕಾಗಿ, ದಸ್ತಾವೇಜನ್ನು ತಯಾರಿಸಲು, ಸ್ಥಳದ ಅಧ್ಯಯನ ನಡೆಸಲು ಹಾಗೂ ವರದಿಯನ್ನು ಸಿದ್ದಪಡಿಸಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ಸಲ್ಲಿಸಲು ಸಿದ್ದತೆ ನಡೆಯುತ್ತಿದೆ ಎಂದು ರಾಜ್ಯ ಪುರಾತತ್ವ ಇಲಾಖೆಯ ಕಮಿಷನರ್ ಎ. ದೇವರಾಜ್ ಮಾಹಿತಿ ನೀಡಿದ್ದಾರೆ.

ಯುನೆಸ್ಕೋ ವಿಶ್ವ ಪರಂಪರೆಯ ತಾಣಗಳ ಪಟ್ಟಿಗೆ ಯಾವುದೇ ಸ್ಮಾರಕವನ್ನು ಸೇರಿಬೇಕೆಂದರೆ, ಅದಕ್ಕೂ ಮುಂಚೆ ಆ ಸ್ಮಾರಕಗಳನ್ನು ತಾತ್ಕಾಲಿಕ ಪಟ್ಟಿಗೆ ಸೇರಿಸಲು ನಾಮನಿರ್ದೇಶನ ಮಾಡಬೇಕು. ಹಾಗಾಗಿ, ಶ್ರವಣಬೆಳಗೊಳ ಮತ್ತು ಲಕ್ಕುಂಡಿ ಸ್ಮಾರಕಗಳನ್ನು ಶಿಫಾರಸ್ಸು ಮಾಡಲು ಸಿದ್ದತೆ ನಡೆಯುತ್ತಿದೆ ಎಂದು ದೇವರಾಜ್ ಹೇಳಿರುವುದಾಗಿ ‘ದಿ ಹಿಂದು’ ವರದಿ ಮಾಡಿದೆ.

“ಯುನೆಸ್ಕೋ ತಾತ್ಕಾಲಿಕ ಪಟ್ಟಿಗೆ ಸೇರಿಸುವುದು ಮೊದಲ ಹಂತವಾಗಿದೆ. ಯಾವುದೇ ಸ್ಮಾರಕವನ್ನು ಅಂತಿಮ ಶಾಸನಕ್ಕಾಗಿ ಪರಿಗಣಿಸುವ ಮೊದಲು ಕನಿಷ್ಠ ಒಂದು ವರ್ಷದ ಕಾಯುವ ಅವಧಿ ಇರುತ್ತದೆ. ಈಗ ಮೊದಲ ಹೆಜ್ಜೆ ಇಡಲಾಗುತ್ತಿದೆ” ಎಂದು ಅವರು ಹೇಳಿದ್ದಾರೆ.

Advertisements

“ತಾತ್ಕಾಲಿಕ ಪಟ್ಟಿಯಲ್ಲಿ ಒಂದು ವರ್ಷದ ಅವಧಿಯನ್ನು ಪೂರ್ಣಗೊಳಿಸಿದರೂ, ಅಂತಿಮ ಶಾಸನಕ್ಕೆ ನಾಮನಿರ್ದೇಶನಗೊಳ್ಳುವುದು ವಿಳಂಬವಾಗಬಹುದು. ಏಕೆಂದರೆ, ಒಂದು ರಾಷ್ಟ್ರವು ಒಂದು ವರ್ಷದಲ್ಲಿ ಒಂದು ಸ್ಮಾರಕವನ್ನು ಮಾತ್ರ ಅಂತಿಮ ಶಾಸನಕ್ಕೆ ನಾಮನಿರ್ದೇಶನ ಮಾಡಬಹುದು ಎಂಬ ನಿಯಮವಿದೆ” ಎಂದು ಅವರು ವಿವರಿಸಿದ್ದಾರೆ.

ಈ ಹಿಂದೆ, 2014ರಲ್ಲಿ ಬೇಲೂರು ಮತ್ತು ಹಳೇಬೀಡು ದೇವಾಲಯಗಳನ್ನು ಯುನೆಸ್ಕೋ ವಿಶ್ವ ಪರಂಪರೆ ತಾಣಗಳ ತಾತ್ಕಾಲಿಕ ಪಟ್ಟಿಗೆ ನಾಮನಿರ್ದೇಶನ ಗೊಂಡಿದ್ದವು. ಈ ವರ್ಷ ಸೆಪ್ಟಂಬರ್‌ನಲ್ಲಿ ಅವುಗಳನ್ನು ಯುನೆಸ್ಕೋ ವಿಶ್ವ ಪರಂಪರೆ ತಾಣಗಳ ಖಾಯಂ ಪಟ್ಟಿಗೆ ಸೇರಿಸಲಾಗಿದೆ.

ಈ ಸುದ್ದಿ ಓದಿದ್ದೀರಾ?: ಯಾದಗಿರಿ | ಪಾಳು ಬಿದ್ದಿರುವ ಸುರಪುರ ಸಂಸ್ಥಾನದ ವನದುರ್ಗ ಕೋಟೆ

ಜೈನರ ಪುಣ್ಯ ಕ್ಷೇತ್ರ ಎಂದು ಹೇಳಲಾಗಿರುವ ಶ್ರವಣಬೆಳಗೊಳ, ಗಂಗರ ಕಾಲದ ಇತಿಹಾಸ ಹೊಂದಿದೆ. ಗಂಗರ ಅವಧಿಯಲ್ಲಿ ಕ್ರಿ.ಶ 981ರಲ್ಲಿ ಶ್ರವಣಬೆಳಗೊಳದಲ್ಲಿ ಗೊಮ್ಮಟೇಶ್ವರ ಮೂರ್ತಿಯನ್ನು ಚಾವುಂಡರಾಯ ಕೆತ್ತಿಸಿದ್ದರು. ಮೌರ್ಯ ಚಕ್ರವರ್ತಿ ಚಂದ್ರಗುಪ್ತ ಮೌರ್ಯ ಕೂಡ ಶ್ರವಣಬೆಳಗೊಳದಲ್ಲಿ ಸಲ್ಲೇಖನ ವ್ರತ ಸ್ವೀಕರಿಸಿದ್ದರು. ಇಲ್ಲಿ 800ಕ್ಕೂ ಹೆಚ್ಚು ಶಾಸನಗಳಿವೆ.

ಲಕ್ಕುಂಡಿಯಲ್ಲಿ ಸೋಮೇಶ್ವರ, ಕುಂಬರೇಶ್ವರ, ಮಾಣಿಕೇಶ್ವರ, ನಾಗನಾಥ, ನಾಗೇಶ್ವರ, ಕಾಶಿವಿಶ್ವೇಶ್ವರ, ಶಂಕರಲಿಂಗ, ಲಕ್ಷ್ಮೀನಾರಾಯಣ, ಗಣಪತಿ, ಚಂದ್ರಮೌಳೇಶ್ವರ, ಜೈನ ಬಸದಿ, ಬ್ರಹ್ಮ ಜಿನಾಲಯ ಮುಂತಾದ ಹಲವಾರು ಪುರಾತನ ದೇವಾಲಯಗಳಿವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X