ಹಾಸನ | ಯುವ ಸಬಲೀಕರಣ ಸಂವಾದದಲ್ಲಿ ಶ್ರೇಯಸ್ ಭಾಗಿ

Date:

Advertisements

ನವದೆಹಲಿಯ ಸುಷ್ಮಾ ಸ್ವರಾಜ್ ಭವನದ ಭಾಸ್ಕರ್ ಹಾಲ್‌ನಲ್ಲಿ ಕೇಂದ್ರ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಮನ್ಸುಖ್ ಮಾಂಡವೀಯ ಅವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಂಡಿದ್ದ ನೇಪಾಳ ಸರ್ಕಾರದ ಯುವ ಸಂಸದರ ಜೊತೆಗಿನ ಯುವ ಸಬಲೀಕರಣ ಸಂವಾದದಲ್ಲಿ ಹಾಸನ ಸಂಸದ ಶ್ರೇಯಸ್ ಎಂ.ಪಟೇಲ್ ಭಾಗಿಯಾಗಿದ್ದರು.

ಮುಖ್ಯವಾಗಿ ಭಾರತ ಹಾಗೂ ನೇಪಾಳದ ಯುವ ಶಕ್ತಿಯು ರಾಷ್ಟ್ರ ಅಭಿವೃದ್ಧಿಯಲ್ಲಿ ಯಾವ ರೀತಿ ಪಾತ್ರ ವಹಿಸುತ್ತದೆ. ರಾಜಕಾರಣ, ಶಿಕ್ಷಣ, ತಂತ್ರಜ್ಞಾನ, ಉದ್ಯೋಗ, ಕೃಷಿ ಸೇರಿದಂತೆ ಮತ್ತಿತರ ಕ್ಷೇತ್ರಗಳಲ್ಲಿ ಹೇಗೆ ತೊಡಗಿಸಿಕೊಂಡಿದೆ ಎಂಬುದರ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ಇದೇ ವೇಳೆ ವಾಣಿಜ್ಯ ಮತ್ತು ಉದ್ಯಮ ಸಚಿವ ಪಿಯೂಶ್ ಗೊಯಲ್ ಅವರನ್ನು ಭೇಟಿಯಾದ ಸಂಸದರು, ಕಾಫಿ ಬೆಳೆಯನ್ನು ಸರ್‌ಫೇಸಿ ಕಾಯ್ದೆಯಿಂದ ಹೊರಗಿಡುವಂತೆ ಮನವಿ ಸಲ್ಲಿಸಿದರು.

ಹಾಸನ ಲೋಕಸಭಾ ಕ್ಷೇತ್ರದಲ್ಲಿ ಸಾವಿರಾರು ಕಾಫಿ ಬೆಳೆಗಾರರಿಗೆ ಕಾಯ್ದೆಯಿಂದ ಅನನುಕೂಲವಾಗುತ್ತಿದೆ. ಬೆಳೆಗಾರರು ಕಿಸಾನ್ ಕ್ರೆಡಿಟ್ ಕಾರ್ಡ್ ಹಾಗೂ ಇತರ ಕೃಷಿ ಸಾಲ ಯೋಜನೆಗಳ ಅಡಿಯಲ್ಲಿ ಸಾಲ ಪಡೆಯುತ್ತಿದ್ದಾರೆ. ಇಂತಹ ಸಾಲಗಳನ್ನು ಸದಾ ಅಗ್ರಿಕಲ್ಚರ್ ಪ್ರಯಾರಿಟಿ ಸೆಕ್ಟರ್ ಲೆಂಡಿಂಗ್ ಅಡಿಯಲ್ಲಿ ವಿಂಗಡಿಸಲಾಗಿದೆ. ಇತ್ತೀಚಿನ ಕೆಲ ವರ್ಷಗಳಿಂದ ಕೆಲ ಬ್ಯಾಂಕುಗಳು ಈ ಸಾಲಗಳನ್ನು ಸರ್‌ಫೇಸಿ ಕಾಯ್ದೆ ೨೦೦೨ರ ಅಡಿಯಲ್ಲಿ ವಸೂಲಾತಿಗೆ ತೆಗೆದುಕೊಳ್ಳುತ್ತಿವೆ. ಬ್ಯಾಂಕುಗಳು ಹಾಗೂ ಹಣಕಾಸು ಸಂಸ್ಥೆಗಳಿಗೆ ಕಾಫಿ ಸಾಲಗಳನ್ನು ಕೃಷಿ ಸಾಲಗಳೆಂದು ಪರಿಗಣಿಸಿ ಸರ್‌ಫೇಸಿ ಕಾಯ್ದೆಯ ಕಾನೂನು ಕ್ರಮದಿಂದ ದೂರವಿಟ್ಟು ಬೆಳೆಗಾರರಿಗೆ ನೆರವಾಗಬೇಕೆಂದು ಕೋರಿದರು.

Advertisements

ಇದನ್ನೂ ಓದಿ: ಹಾಸನ | ಮಹಿಳಾ ಮತ್ತು ಮಕ್ಕಳ ಹಕ್ಕುಗಳಿಗಾಗಿ ಹೋರಾಟ; ಬೃಹತ್ ಸಮಾವೇಶಕ್ಕೆ ಜಾಗೃತಿ ಜಾಥಾ

ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ ಹಾಸನ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿರುವ ರೈಲ್ವೆ ನಿಲ್ದಾಣ ಹಾಗೂ ಹಳಿ ನಿರ್ಮಾಣ ಕಾಮಗಾರಿಗೆ ವೇಗ ನೀಡಬೇಕೆಂದು ಮನವಿ ಮಾಡಿದ ಶ್ರೇಯಸ್, ಜಿಲ್ಲೆಯ ಪ್ರಮುಖ ರೈಲ್ವೆ ನಿಲ್ದಾಣಗಳಲ್ಲಿ ರೈಲು ನಿಲುಗಡೆಗೆ ಅವಕಾಶ ಮಾಡಿಕೊಡಬೇಕು. ಹೆಚ್ಚುವರಿ ಪ್ಯಾಸೆಂಜರ್ ರೈಲುಗಳ ಓಡಾಟ ವ್ಯವಸ್ಥೆ ಕಲ್ಪಿಸಬೇಕೆಂದು ಎಂದು ವಿನಂತಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ದೇಶದಲ್ಲೇ ಮೊದಲ ಬಾರಿಗೆ AI ತಂತ್ರಜ್ಞಾನದಿಂದ ಸೇವೆ ನೀಡಲು ಮುಂದಾದ ಜಿಲ್ಲಾ ಪೊಲೀಸ್

ಸಾಮಾಜಿಕ ಜಾಲತಾಣಗಳನ್ನು ಸಮರ್ಥವಾಗಿ ಬಳಸಿಕೊಂಡು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ...

ಬಾಗೇಪಲ್ಲಿ | ಡಿ.ದೇವರಾಜ ಅರಸುರವರ ಆಶಯ, ಚಿಂತನೆಗಳು ಇಂದಿಗೂ ಮಾದರಿ: ತಹಶೀಲ್ದಾರ್ ಮನೀಷ್ ಎನ್ ಪತ್ರಿ

ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಆಶಯಗಳು, ಚಿಂತನೆಗಳು ಇಂದಿಗೂ ಮಾದರಿಯಾಗಿವೆ....

ಮಂಡ್ಯ | ಹಿಂದುಳಿದ ಸಮುದಾಯದವರ ಬದುಕು ಕಟ್ಟಿಕೊಡಲು ಶ್ರಮಿಸಿದ ಮಹಾನ್ ನಾಯಕ ಡಿ.ದೇವರಾಜ ಅರಸು: ಜಿಲ್ಲಾಧಿಕಾರಿ ಡಾ.ಕುಮಾರ

ಸಾಮಾಜಿಕವಾಗಿ ಹಿಂದುಳಿದ ಎಲ್ಲ ಸಮುದಾಯದ ಜನರಿಗೆ ಬದುಕು ಕಟ್ಟಿಕೊಡಲು ಶ್ರಮಿಸಿದ ಮಹಾನ್...

ಚಿಂತಾಮಣಿ | ವಿಶೇಷಚೇತನರಿಗೆ ಶೇ.5ರಷ್ಟೂ ಮೀಸಲಾಗದ ಅನುದಾನ; ಎಲ್ಲಿಯೂ ಕಾಣದ ರ್‍ಯಾಂಪ್‌ ವ್ಯವಸ್ಥೆ

ವಿಶೇಷಚೇತನರಿಗೆ ಅನುಕಂಪ ಬೇಡ. ಅವರಿಗೆ ಅವಕಾಶಗಳನ್ನು ರೂಪಿಸಿ ಎನ್ನುವುದು ಕೇವಲ ಬಾಯಿ...

Download Eedina App Android / iOS

X