ಹಾಸನ | ಕಾಡಾನೆಗಳ ಬಗ್ಗೆ ಎಚ್ಚರಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಹಲ್ಲೆ

Date:

Advertisements

ಕಾಡಾನೆಗಳಿವೆ ಎಂದು ಎಚ್ಚರಿಕೆ ನೀಡಿದ ಇಟಿಎಫ್ ಸಿಬ್ಬಂದಿ ಮೇಲೆ ಗ್ರಾಮಸ್ಥರು ಹಲ್ಲೆ ನಡೆಸಿರುವ ಘಟನೆ ಬೇಲೂರು ತಾಲೂಕಿನ ಬಿಕ್ಕೋಡು-ಕೆಸಗೋಡು ರಸ್ತೆಯಲ್ಲಿ ನಡೆದಿದೆ.

ಜಿಲ್ಲೆಯಲ್ಲಿ ಡಿಸೆಂಬರ್ 15ರವರೆಗೆ ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಕೆ ಮತ್ತು ಕಾಡಾನೆಗಳ ಸ್ಥಳಾಂತರ ಕಾರ್ಯಾಚರಣೆ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಕಾಡಾನೆಗಳಿವೆ ರಸ್ತೆಯಲ್ಲಿ ಓಡಾಡಬೇಡಿ ಎಂದು ಸ್ಥಳೀಯರನ್ನು ಅರಣ್ಯ ಇಲಾಖೆ ಸಿಬ್ಬಂದಿ ತಡೆದಿದ್ದಾರೆ. ಇದಕ್ಕೆ ಕೋಪಗೊಂಡ ಗ್ರಾಮಸ್ಥರು ಅರಣ್ಯ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಆರ್‌ಆರ್‌ಟಿ ಹಾಗೂ ಇಟಿಎಫ್ ಸಿಬ್ಬಂದಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಗ್ರಾಮಸ್ಥರು ಹಲ್ಲೆ ಮಾಡಿದ್ದಾರೆ. ಅಷ್ಟೇ ಅಲ್ಲದೆ, ಅರಣ್ಯ ಇಲಾಖೆಯ ಜೀಪಿನ ಚಕ್ರದ ಗಾಳಿ ತೆಗೆಯಲೂ ಜನರು ಮುಂದಾಗಿದ್ದು ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Advertisements

ಇನ್ನೊಂದೆಡೆ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಹಿಂಡಾನೆಗಳು ಪರೇಡ್ ನಡೆಸಿದ ಘಟನೆ ನಡೆಯಿತು. ಗುಂಪು ಗುಂಪಾಗಿ ಕಾಫಿ ತೋಟದಿಂದ ತೋಟಕ್ಕೆ 35ಕ್ಕೂ ಹೆಚ್ಚು ಆನೆಗಳು ಅಲೆದಾಡುತ್ತಿರುವುದು ಕಂಡುಬಂದಿದೆ. ಇದರಲ್ಲಿ ಮರಿಯಾನೆಗಳೇ ಹೆಚ್ಚಾಗಿರುವುದು ಕಂಡುಬಂದಿದೆ. ಆದ್ದರಿಂದ ಈ ಪ್ರದೇಶದ ಸುತ್ತ-ಮುತ್ತ ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X