ಹಾಸನ | ಕುರಿ ಮೇಯಿಸುತ್ತಿದ್ದ ವೃದ್ಧೆಯ ಕಗ್ಗೊಲೆ; ಆರೋಪಿಗಳ ಪತ್ತೆಗೆ ಶೋಧ

Date:

Advertisements

ಕುರಿ ಮೇಯಿಸಲು ಹೋದಾ ವೃದ್ಧೆಯನ್ನು ಹಿಂಬಾಲಿಸಿದ ದುಷ್ಕರ್ಮಿಗಳು ಹತ್ಯೆಗೈದು ಪರಾರಿಯಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಅಡಗೂರು ಗ್ರಾಮದಲ್ಲಿ ಸೋಮವಾರ ನಡೆದಿದೆ.

ಕುರಿ ಮೇಯಿಸಲು ಜಮೀನಿನ ಬಳಿ ಹೋಗಿದ್ದ ಒಂಟಿ ವೃದ್ಧೆ ಸುಶೀಲಮ್ಮ(60) ಅವರ ಪ್ರಾಣ ತೆಗೆದು ಹೊಂಡದಲ್ಲಿ ಮುಳುಗಿಸಿ ಚಿನ್ನಾಭರಣ ದೋಚಿರುವ ಪಾತಕಿಗಳು ಪರಾರಿಯಾಗಿದ್ದಾರೆ. ಹಾಡಹಗಲಿನಲ್ಲೇ ನಡೆದ ಅಮಾನುಷ ಹತ್ಯೆಗೆ ಊರಿಗೆ ಊರೇ ಬೆಚ್ಚಿಬಿದ್ದಿದೆ. ಕೊಲೆಗಡುಕರ ಬಂಧನಕ್ಕೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ವೃದ್ಧೆಯ ಮೈಮೇಲಿದ್ದ 80 ಗ್ರಾಂ ಚಿನ್ನಕ್ಕಾಗಿ ಆಕೆಯನ್ನು ಕೊಂದಿರುವ ದುಷ್ಕರ್ಮಿಗಳು ಅಲ್ಲೇ ಇದ್ದ ನೀರಿನ ತೊರೆಗೆ ಮೃತದೇಹ ಬಿಸಾಕಿದ್ದಾರೆ. ಮೃತದೇಹದ ಮೇಲೆ ದೊಡ್ಡ ಮರದ ದಿಮ್ಮಿಯನ್ನು ಹೇರಿ ಹೋಗಿದ್ದಾರೆ.

Advertisements

ಸೋಮವಾರ ಮಧ್ಯಾಹ್ನ ತನ್ನ ಕುರಿಗಳನ್ನ ಮೇಯಿಸಲೆಂದು ಮನೆಯಿಂದ ಹೊರ ಹೋಗಿದ್ದ ಗ್ರಾಮದ ಸುಶೀಲಮ್ಮ ಸಂಜೆಯಾದರೂ ಮನೆಗೆ ಹಿಂದಿರುಗಲಿಲ್ಲ. ಕುರಿಗಳು ಮನೆಗೆ ಬಂದರೂ ವೃದ್ಧೆಯ ಸುಳಿವು ಇಲ್ಲದನ್ನು ಕಂಡ ಮನೆಯವರು ಸುತ್ತಮುತ್ತಲೆಲ್ಲಾ ಹುಡುಕಾಡಿದ್ದಾರೆ. ಆಕೆಯ ಫೋನ್‌ಗೆ ಕರೆ ಮಾಡಿದರೂ ಫೋನ್ ಸ್ವಿಚ್ ಆಫ್ ಆಗಿದೆ. ಎಲ್ಲಿ ಹುಡುಕಾಡಿದ್ರು ಆಕೆಯ ಸುಳಿವು ಸಿಕ್ಕಿಲ್ಲ. ಕೂಡಲೇ ಚನ್ನರಾಯಪಟ್ಟಣ ನಗರ ಠಾಣೆ ಪೊಲೀಸರಿಗೆ ವಿಚಾರ ಮುಟ್ಟಿಸಿದ್ದು, ಎಲ್ಲಿಯಾದರೂ ಹೋಗಿರಬಹುದೆಂಬ ಅನುಮಾನದಿಂದ ಬೆಳಿಗ್ಗೆಯವರೆಗೂ ಸುಮ್ಮನಿದ್ದಾರೆ.

ಮರು ದಿನ ಬೆಳಿಗ್ಗೆ ಮತ್ತೆ ಸುಶೀಲಮ್ಮಳನ್ನು ಹುಡುಕಿ ಹೊರಟ ಕುಟುಂಬ ಸದಸ್ಯರಿಗೆ ಘನ ಘೋರ ದೃಶ್ಯ ಕಂಡಿದ್ದು, ಆಕೆ ಕುರಿ ಮೇಯಿಸಲು ಹೋಗಿದ್ದ ಪ್ರದೇಶದಲ್ಲಿರೋ ತೊರೆಯ ನೀರಿನಲ್ಲಿ ಮರದ ದಿಮ್ಮಿಯ ಕೆಳಗೆ ಸುಶೀಲಮ್ಮನ ಮೃತದೇಹ ಕಾಣಿಸಿದೆ. ಆಕೆಯ ಮೈಮೇಲಿದ್ದ ಚಿನ್ನದ ಸರ, ಚಿನ್ನದ ಬಳೆ, ಓಲೆ ಎಲ್ಲವೂ ಮಾಯವಾಗಿವೆ. ಚಿನ್ನಾಭರಣಕ್ಕಾಗಿಯೇ ಸುಶೀಲಮ್ಮರನ್ನು ಹಿಂಬಾಲಿಸಿರುವ ಪಾತಕಿಗಳು ಆಕೆಯನ್ನು ಕೊಂದು ಚಿನ್ನಾಭರಣ ದೋಚಿದ್ದಾರೆಂದು ಮೃತರ ಸಂಬಂಧಿ ಮೋಹನ್ ಅವಲತ್ತುಕೊಂಡಿದ್ದಾರೆ.

ವೃದ್ಧೆಯ ಮೈಮೇಲೆ ಚಿನ್ನಾಭರಣ ಗಮನಿಸಿದ ಪಾತಕಿಗಳು ಆಕೆಯನ್ನು ಹಿಂಬಾಲಿಸಿ ಹತ್ಯೆ ಮಾಡಿರಬಹುದು ಎನ್ನೊ ಶಂಕೆ ವ್ಯಕ್ತವಾಗಿದ್ದು, ಯಾರೋ ಗುರುತು ಪರಿಚಯ ಇರುವವರೇ ಈಕೆಯನ್ನು ಟಾರ್ಗೆಟ್ ಮಾಡಿರಬಹುದೆಂಬ ಅನುಮಾನ ಮೂಡಿದೆ.

ವೃದ್ಧೆ ಕೊಲೆ ನಡೆದಿರುವ ವಿಚಾರ ತಿಳಿಯುತ್ತಲೇ ಘಟನಾ ಸ್ಥಳಕ್ಕೆ ಬಂದ ಚನ್ನರಾಯಪಟ್ಟಣ ನಗರ ಠಾಣೆ ಪೊಲೀಸರು, ಶ್ವಾನ ದಳ, ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರ ಮೂಲಕ ಪರಿಶೀಲನೆ ನಡೆಸಿದ್ದಾರೆ. ಹಾಸನದ ವೈದ್ಯಕೀಯ ಕಾಲೇಜಿನಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ. ವೃದ್ಧೆಯ ಸಾವು ಊರಿಗೆ ಊರನ್ನೆ ಬೆಚ್ಚಿಬೀಳಿಸಿದ್ದು, ಕಿಡಿಗೇಡಿಗಳ ಬಂಧನಕ್ಕೆ ಕುಟುಂಬ ಸದಸ್ಯರು ಆಗ್ರಹಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದು, ಆರೋಪಿಗಳ ಬಂಧನದ ಬಳಿಕ ಕೊಲೆ ಹಿಂದಿನ ಸತ್ಯಾಸತ್ಯತೆಗಳು ಬಯಲಾಗಲಿವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X