ಹಾಸನ | ಹಾಡಹಗಲೇ ಮನೆಗೆ ನುಗ್ಗಿ, ನಗದು-ಚಿನ್ನಾಭರಣ ಕಳ್ಳತನ; ಸಿಸಿಟಿವಿಯಲ್ಲಿ ಸೆರೆ

Date:

Advertisements

ಹಾಡಹಗಲೇ ಮನೆಗೆ ನುಗ್ಗಿ ₹15 ಲಕ್ಷ ನಗದು ಹಾಗೂ ಸುಮಾರು ₹7 ಲಕ್ಷ ಬೆಲೆ ಬಾಳುವ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಹಾಸನ ನಗರದ ಹೊಸ ಬಸ್ ನಿಲ್ದಾಣದ ಎದುರು ಕೆಎಚ್‌ಬಿ ಬಡಾವಣೆಯಲ್ಲಿ ಸಂಭವಿಸಿದೆ.

ಕೆಎಚ್‌ಬಿ ಕಾಲೋನಿ ನಿವಾಸಿ ಸಚಿನ್ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಡಿಸೆಂಬರ್ 5ರಂದು ಬೆಳಿಗ್ಗೆ ಪತ್ನಿ ಮನೆಗೆ ಬೀಗ ಹಾಕಿಕೊಂಡು ಹೊರಗೆ ಹೋಗಿದ್ದಾರೆ. ಸಂಜೆ ಮನೆಗೆ ವಾಪಸ್ ಬಂದಾಗ ಮುಂದಿನ ಬಾಗಿಲು ತೆರೆದಿತ್ತು. ಗಾಬರಿಯಲ್ಲಿಯೇ ಮನೆಯೊಳಗೆ ಪ್ರವೇಶ ಮಾಡಿದಾಗ ಎರಡು ರೂಂಗಳ ಬೀರುವಿನ ಬಾಗಿಲು ತೆರೆದುಕೊಂಡಿತ್ತು. ಒಂದು ರೂಂನಲ್ಲಿ ಇಡಲಾಗಿದ್ದ ₹15 ಲಕ್ಷ ಮತ್ತು ಇನ್ನೊಂದು ರೂಂನಲ್ಲಿ ಇಡಲಾಗಿದ್ದ 105ಗ್ರಾಂ ಇದ್ದ ವಿವಿಧ ರೀತಿಯ ಒಡವೆಗಳನ್ನು ಖದೀಮರು ಕಳ್ಳತನ ಮಾಡಿದ್ದಾರೆ.

ಖದೀಮರು ಮನೆ ಪ್ರವೇಶ ಮಾಡಲು ಕಬ್ಬಿಣದ ಆಯುಧದಿಂದ ಮುಂಬಾಗಿಲು ಮೀಟಿ ಕಳ್ಳತನ ಮಾಡಿರುವುದು ಕೇವಲ ನಾಲ್ಕೈದು ಗಂಟೆಗಳಲ್ಲಿ ಮಾತ್ರ ಈ ಘಟನೆ ನಡೆದಿದ್ದು, ಮನೆಯಲ್ಲಿದ್ದ ₹15 ಲಕ್ಷ ನಗದು ಹಾಗೂ 120 ಗ್ರಾಂ ತೂಕದ ಚಿನ್ನ ಮತ್ತು ಬೆಳ್ಳಿಯ ಆಭರಣ ಸೇರಿ ಒಟ್ಟು ₹22 ಲಕ್ಷ ಮೌಲ್ಯಗಳೆಂದು ತಿಳಿದುಬಂದಿದೆ. ಈ ಕಳ್ಳತನ ಮಾಡಿರುವ ಚೋರರ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಕಂದಗೂಳ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಅಂಬೇಡ್ಕರ ಯುವಕ ಸಂಘ ಪ್ರತಿಭಟನೆ

₹15 ಲಕ್ಷ ನಗದು ಹಾಗೂ ₹7 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಒಟ್ಟು ₹22 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಲಾಗಿದೆ ಎಂದು ಕುಟುಂಬಸ್ಥರು ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ಹಾಸನ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X