ಹಾಸನ | ಬಿಜೆಪಿ-ಜೆಡಿಎಸ್‌ ಮೈತ್ರಿಯ ಸುಳಿವು ಕೊಟ್ಟ ಪ್ರೀತಂ ಗೌಡ

Date:

  • ʼಎಲ್ಲ ನದಿ ನೀರು ಹರಿಯೋದು ಸಮುದ್ರಕ್ಕೇನೆ, ಜೆಡಿಎಸ್‌ನವರು ಬರೋದು ನಮ್ಮತ್ರನೆʼ
  • ಬೇಜವಾಬ್ದಾರಿ ಹೇಳಿಕೆಗಳು ಖಂಡನೀಯ ಎಂದ ಅಶ್ವತ್ಥನಾರಾಯಣ

ಹಾಸನ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಪ್ರೀತಂ ಗೌಡ ಪ್ರಚಾರದ ವೇಳೆ ಹೊಸ ಬಾಂಬ್ ಸಿಡಿಸಿದ್ದು, ಜೆಡಿಎಸ್‌ಗೆ ಮತ ಹಾಕಿದ್ರೆ ನಮಗೇ ಮತ ಹಾಕಿದಂತೆ ಎಂದಿದ್ದಾರೆ.

“ಜನತಾದಳಕ್ಕೆ ಮತ ಹಾಕಿದರೂ ಬಿಜೆಪಿಗೆ ಮತ ಹಾಕಿದ ಲೆಕ್ಕಾನೆ. ದೇವೇಗೌಡರು, ಮೋದಿ ಸಾಹೇಬ್ರು ಮಾತನಾಡಿಕೊಂಡಿದ್ದಾರೆ. ಏಕೆಂದರೆ, ಜೆಡಿಎಸ್ 20 ಇಲ್ಲ 25 ಸೀಟು ಅಷ್ಟೇ ಪಡೆಯೋದು. ಎಲ್ಲ ನದಿ ನೀರು ಹರಿಯೋದು ಸಮುದ್ರಕ್ಕೇನೆ. ಹಾಗೆಯೇ ಜೆಡಿಎಸ್ ಅವರು ಬರೋದು ನಮ್ಮತ್ರಕ್ಕೆ. ನೀವು ಜೆಡಿಎಸ್‌ಗೆ ವೋಟು ಹಾಕಿದರೂ ನನ್ನ ಹತ್ರಕ್ಕೇ ಬರಬೇಕು” ಎನ್ನುವ ಮೂಲಕ ಬಿಜೆಪಿ-ಜೆಡಿಎಸ್‌ ನಡುವೆ ಮೈತ್ರಿ ಒಪ್ಪಂದ ನಡೆಯುತ್ತಿರುವ ಬಗ್ಗೆ ಸುಳಿವು ನೀಡಿದ್ದಾರೆ. ಶಾಸಕರ ಮಾತಿನ ವಿಡೀಯೊ ಎಲ್ಲಡೆ ಹರಿದಾಡುತ್ತಿದೆ.

ಈ ಸುದ್ದಿ ಓದಿದ್ದೀರಾ? ಹಾಸನ | ದೇವರ ಮುಂದೆ ಮಂಗಳಾರತಿ ಮಾಡಿ ನನಗೆ ಮತ ನೀಡುವುದಾಗಿ ಮಾತು ಕೊಡಿ; ಪ್ರೀತಂ ಗೌಡ ಒತ್ತಾಯ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪ್ರೀತಂ ಗೌಡರ ಮಾತುಗಳಿಗೆ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಪ್ರತಿಕ್ರಿಯಿಸಿದ್ದು, “ಬೇಜವಾಬ್ದಾರಿ ಹೇಳಿಕೆಗಳು ಖಂಡನೀಯ. ಇವೆಲ್ಲ ಸುಳ್ಳು ಹೇಳಿಕೆಗಳು, ಯಾರೂ ಕೂಡ ಯಾರೊಂದಿಗೂ ಮಾತನಾಡಿಲ್ಲ. ಜೆಡಿಎಸ್‌ ನಮ್ಮ ಪ್ರತಿಸ್ಪರ್ಧಿ, ಇದರಲ್ಲಿ ಯಾವುದೇ ಒಪ್ಪಂದ ಇಲ್ಲ” ಎಂದು ಹೇಳಿದ್ದಾರೆ.

“ಕಾಂಗ್ರೆಸ್‌ ಮತ್ತು ಜೆಡಿಎಸ್‌ ಬಿಜೆಪಿಯ ಪ್ರತಿಸ್ಪರ್ಧಿಗಳು. ಅವುಗಳನ್ನು ಸಂಪೂರ್ಣವಾಗಿ ವಿರೋಧಿಸುತ್ತೇವೆ. ಯಾವುದೇ ಪಕ್ಷಗಳೊಂದಿಗೂ ಅಡ್ಜಸ್ಟ್‌ಮೆಂಟ್‌ ಇಲ್ಲ. ಯಾವುದೇ ಒಪ್ಪಂದ ಇಲ್ಲ. ಎಲ್ಲ ಕ್ಷೇತ್ರದಲ್ಲಿಯೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದೇವೆ. ಈ ರೀತಿಯ ಬೇಜವಾಬ್ದಾರಿ ಹೇಳಿಕೆಗಳನ್ನು ಎಲ್ಲಿಯೂ ನೀಡಬಾರದು” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ; ಮತದಾನ ಮಾಡಲು ಬಂದ ವೈದ್ಯನಿಂದ ಜೀವ ರಕ್ಷಣೆ

ಬೆಂಗಳೂರಿನ ಜೆ ಪಿ ನಗರದಲ್ಲಿರುವ ಜಂಬೂ ಸವಾರಿ ದಿನ್ನೆ ಮತಗಟ್ಟೆಯಲ್ಲಿ ಮತದಾನ...

ಚಿತ್ರದುರ್ಗ | ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಸಾವು

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ...

ಶಿವಮೊಗ್ಗ | ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ; ತಿಮ್ಲಾಪುರದ ಮಹಿಳೆಯರು ಸಂತಸ

"ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ" ಯಾವ ಸರ್ಕಾರ ಏನೇ ಮಾಡಿದರೂ 32...

ಕೋಲಾರ | ಮೂಲಭೂತ ಸೌಕರ್ಯ ಕೊರತೆ : ಮತದಾನ ಬಹಿಷ್ಕರಿಸಿದ ಗ್ರಾಮಸ್ಥರು

ದೇಶದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದ್ದರೇ, ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ...