ಕೂಲಿ ಕಾರ್ಮಿಕರೊಬ್ಬರು ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾದ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಕೆಸಗುಲಿ ಗ್ರಾಮದಲ್ಲಿ ನಡೆದಿದೆ.
ಕೆಸಗುಲಿ ಗ್ರಾಮದ ಅಡಿಕೆ ತೋಟವೊಂದರಲ್ಲಿ ಕೆಲಸ ಮಾಡುತ್ತಿದ್ದ ತಿಮ್ಮಯ್ಯ ಎಂಬ ಕೂಲಿಕಾರ್ಮಿಕ ಪ್ರಾಣಾಪಾಯದಿಂದ ಪಾರಾಗಿದ್ದು, ತಮ್ಮ ಜೊತೆಯಿದ್ದ ತಿರುಮಲ ಎಂಬ ಯುವಕನನ್ನೂ ಕೂಡ ಅಪಾಯದಿಂದ ಪಾರು ಮಾಡಿದ್ದಾರೆ.
ಭಾನುವಾರ ಸಂಜೆ ಎಂದಿನಂತೆ ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಕಾಡಾನೆ ದಾಳಿಯಿಂದ ಪಾರಾದ ಕಾರ್ಮಿಕ ತಿಮ್ಮಯ್ಯ, ಓಡಿಹೋಗಿ ಮಾಲೀಕನ ಮನೆಯ ಮುಂದೆ ನಿಂತಿದ್ದ ಕಾರಿನ ಕೆಳಗೆ ಕೆಲಕಾಲ ಅವಿತುಕೊಂಡು ಮಲಗಿದ್ದಾನೆ.
ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಪಿಲಿಚಾಮುಂಡಿ ದೇವಸ್ಥಾನದ ಭಂಡಾರ ಮನೆ ಧ್ವಂಸ; ಮೂವರ ಬಂಧನ
ಕರಡಿ ಎಂಬ ಹೆಸರಿನ ಆನೆ ಈ ಹಿಂದೆ ಬಿಕ್ಕೋಡಿನಲ್ಲಿ ಒಬ್ಬ ವ್ಯಕ್ತಿಯನ್ನು ಹತ್ಯೆ ಮಾಡಿದ್ದು, ಐವರನ್ನು ಗಾಯಗೊಳಿಸಿತ್ತು. ಒಂಟಿಯಾಗಿ ಸಂಚರಿಸುವ ಈ ಕಾಡಾನೆ ಮನುಷ್ಯರನ್ನು ಕಂಡರೆ ದಾಳಿ ಮಾಡಲು ಮುಂದಾಗುತ್ತದೆ. ಅರಣ್ಯ ಇಲಾಖೆ ಸಿಬ್ಬಂದಿ ಈ ಕಾಡಾನೆ ಮೇಲೆ ನಿಗಾ ವಹಿಸುತ್ತಿದ್ದು, ಸಾರ್ವಜನಿಕರಿಗೆ ಮಾಹಿತಿ ನೀಡುತ್ತಿದ್ದಾರೆ.