ಹಾಸನ | ಮಲೆನಾಡಿನ ಅರಣ್ಯ ಕಾಯ್ದೆ, ಭೂಮಿ-ವಸತಿ ಸಮಸ್ಯೆ ಕುರಿತು ಸಂಸತ್ತಿನಲ್ಲಿ ಧ್ವನಿ ಎತ್ತುವೆ: ಸಂಸದ ಶ್ರೇಯಸ್ ಪಟೇಲ್

Date:

Advertisements

ಮಲೆನಾಡಿನ ಅರಣ್ಯ ಕಾಯ್ದೆಗಳು ಮತ್ತು ಭೂಮಿ-ವಸತಿ ಸಮಸ್ಯೆಗಳ ಕುರಿತು ಸಂಸತ್ತಿನಲ್ಲಿ ಧವನಿ ಎತ್ತಲು ನಾನು ಸಿದ್ಧನಿದ್ದೇನೆ. ಕೇಂದ್ರವನ್ನು ಆಳುತ್ತಿರುವ ಬಿಜೆಪಿ ಸರ್ಕಾರಕ್ಕೆ ಬಡವರ ಬದುಕು ಹಾಗೂ ರೈತರ ಸಂಕಷ್ಟ ಅರ್ಥವಾಗುತ್ತಿಲ್ಲ. ಅವರು ಫ್ಯಾಷನ್ ರಾಜಕಾರಣಕ್ಕೆ ಇಳಿದಿದ್ದಾರೆ. ಖಂಡಿತವಾಗಿ ಪಶ್ಚಿಮ ಘಟ್ಟದ ಜನರ ಪರವಾಗಿ ಮಾತನಾಡಲು ನಾನು ಸಿದ್ದವಿದ್ದೇನೆ ಎಂದು ಹಾಸನ ಸಂಸದ ಶ್ರೇಯಸ್ ಪಟೇಲ್ ಭರವಸೆ ನೀಡಿದರು.

ಹಾಸನ ನಗರದ ಚಿಕ್ಕಮಗಳೂರು ಮಲ್ಟಿಪರ್ಪಸ್‌ ಸೋಷಿಯಲ್‌ ಸರ್ವೀಸ್‌ ಸೊಸೈಟಿಯಲ್ಲಿ ಎದ್ದೇಳು ಕರ್ನಾಟಕ ಹಮ್ಮಿಕೊಂಡಿದ್ದ ಎರಡು ದಿನಗಳ ವಲಯ ಮಟ್ಟದ ಕಾರ್ಯಗಾರದಲ್ಲಿ ಮಾತನಾಡಿದರು.

ಮಲೆನಾಡಿನ ಅರಣ್ಯ ಕಾಯ್ದೆಗಳು ಮತ್ತು ಭೂಮಿ-ವಸತಿ ಸಮಸ್ಯೆಗಳ ಕುರಿತು ಸಂಸತ್ತಿನಲ್ಲಿ ಧ್ವನಿ ಎತ್ತಬೇಕು. ಅರಣ್ಯ ಕಾಯ್ದೆಗೆ ತಿದ್ದುಪಡಿ ಮಾಡಿ ಸಾಗುವಳಿದಾರರಿಗೆ ಹಕ್ಕುಪತ್ರ ನೀಡುವಂತೆ ಕರ್ನಾಟಕ ಜನಶಕ್ತಿ ರಾಜ್ಯ ಕಾರ್ಯದರ್ಶಿ ಕೆ ಎಲ್ ಅಶೋಕ್ ಹಾಗೂ ರಾಜ್ಯ ಸಮಿತಿ ವೆಂಕಟೇಶ್ ಹಾಗಲಗಂಚಿಯವರು ಸಂಸದರಿಗೆ ಒತ್ತಾಯಿಸಿದರು.

Advertisements

ಈ ಹಿನ್ನೆಲೆಯಲ್ಲಿ ಸಂಸದ ಶ್ರೇಯಸ್‌ ಪಟೇಲ್‌ ಅವರು ಮಲೆನಾಡಿನ ಅರಣ್ಯ ಕಾಯ್ದೆಗಳು ಮತ್ತು ಭೂಮಿ-ವಸತಿ ಸಮಸ್ಯೆಗಳ ಕುರಿತು ಸಂಸತ್ತಿನಲ್ಲಿ ಮಾತನಾಡುವ ಭರವಸೆ ನೀಡಿದ್ದಾರೆ.

ಇದನ್ನೂ ಓದಿದ್ದೀರಾ?ಸಿಡಿ ಬಿಡುಗಡೆಯೇ ಹಾಸನ ಜಿಲ್ಲೆಗೆ ಕಾಂಗ್ರೆಸ್‌ನವರ ಕೊಡುಗೆ: ಹೆಚ್‌ ಡಿ ಕುಮಾರಸ್ವಾಮಿ ಲೇವಡಿ

ಈ ಸಂದರ್ಭದಲ್ಲಿ ಮಲೆನಾಡಿನಲ್ಲಿ ನಿರಂತರ ಹೋರಾಟದಲ್ಲಿ ತೊಡಗಿಸಿಕೊಂಡಿರುವ ಕೆ ಎಲ್ ಅಶೋಕ್, ವೆಂಕಟೇಶ್ ಹಾಗಲಗಂಚಿ, ಗಿರಿಜಾ ಎಸ್‌ ಜಿ, ವಿಜೇಂದ್ರ, ಎದ್ದೇಳು ಕರ್ನಾಟಕದ ಮುಖಂಡರಾದ ತಾರರಾವ್ ಇರ್ಷಾದ್ ಅಹಮ್ಮದ್ ದೇಸಾಯಿ, ಮುನ್ನ ಸೇರಿದಂತೆ ಇತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X