ಹಾಸನ | ಹಾಸನಾಂಬ ದೇವಾಲಯ; 9 ದಿನದಲ್ಲಿ 5.5 ಕೋಟಿ ರೂ. ಸಂಗ್ರಹ

Date:

ವರ್ಷದಲ್ಲಿ ಒಮ್ಮೆ ಮಾತ್ರವೇ ತೆರೆಯುವ ಹಾಸನಾಂಬ ದೇವಾಲಯವನ್ನು ದೀಪಾವಳಿ ಸಮಯದಲ್ಲಿ ತೆರೆಯಲಾಗಿದೆ. 9 ದಿನಗಳಿಂದ ತೆರೆದಿರುವ ದೇವಾಲಯದಲ್ಲಿ ಬರೋಬ್ಬರಿ 5.52 ಕೋಟಿ ರೂ. ಹಣ ಸಂಗ್ರಹವಾಗಿದೆ ಎಂದು ತಿಳಿದುಬಂದಿದೆ.

- Advertisement -

ಹಣ ಸಂಗ್ರಹದ ಬಗ್ಗೆ ದೇವಸ್ಥಾನದ ಆಡಳಿತ ಮಂಡಳಿ ಮಾಹಿತಿ ನೀಡಿದೆ. ದೇವಸ್ಥಾನಕ್ಕೆ ಭೇಟಿ ನೀರುವವರಿಗೆ ವಿಶೇಷ ಪಾಸ್‌ ವ್ಯವಸ್ಥೆಯಿತ್ತು. 1,000 ರೂ. ಮತ್ತು 400 ರೂ.ಗಳ ಪಾಸ್‌ಗಳನ್ನು ವಿತರಿಸಲಾಗುತ್ತಿತ್ತು. ಪಾಸ್‌ ಮತ್ತು ಲಡ್ಡು ಮಾರಾಟ ಹಾಗೂ ಹುಂಡಿಯಿಂದ ಒಂಬತ್ತು ದಿನಗಳಲ್ಲಿ 5.52 ಕೋಟಿ ರೂ. ಸಂಗ್ರಹವಾಗಿದೆ ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಮಂಗಳವಾರವೂ ಸಂಜೆ ದೇವಾಲಯದ ಬಾಗಿಲು ಮುಚ್ಚುವ ಹಿನ್ನೆಲೆಯಲ್ಲಿ ಇಂದು ಹೆಚ್ಚಿನ ಭಕ್ತರು ಭೇಟಿ ನೀಡುವ ಸಾಧ್ಯತೆ ಇದೆ. ಹೀಗಾಗಿ, ಸಂಜೆಯ ವೇಳೆಗೆ ಸಂಗ್ರಹದ ಒಟ್ಟು ಮೊತ್ತ ಸುಮಾರು 6.50 ಕೋಟಿ ರೂ. ದಾಟುವ ಸಾಧ್ಯತೆ ಇದೆ ಎಂದು ಮಂಡಳಿ ಅಂದಾಜಿಸಿದೆ.

ದೇವಾಲಯವು ವರ್ಷದಲ್ಲಿ ಒಮ್ಮೆ ಮಾತ್ರ 10 ದಿನಗಳ ಕಾಲ ದೇವಾಲಯ ತೆರೆದಿರುತ್ತದೆ. ಹೀಗಾಗಿ, ಭಕ್ತರು ನೂಕುನುಗ್ಗಲಿನಲ್ಲಿ ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಈ ಬಾರಿ 1,000 ರೂ. ಮೊತ್ತದ ವಿಶೇಷ ಟಿಕೆಟ್‌ಅನ್ನು 28,052 ಮಂದಿ ಖರೀಸಿದ್ದಾರೆ. 400 ರೂ. ಮೊತ್ತದ ಟಿಕೆಟ್‌ಅನ್ನು 71,885 ಮಂದಿ ಖರೀದಿಸಿದ್ದಾರೆ ಎಂದು ದೇವಸ್ಥಾನದ ಆಡಳಿತಾಧಿಕಾರಿ ಮಾರುತಿ ಗೌಡ ತಿಳಿಸಿದ್ದಾರೆ.

ದೇವಸ್ಥಾನದ ಆವರಣದಲ್ಲಿ ಶುಕ್ರವಾರ ಭಕ್ತರಿಗೆ ವಿದ್ಯುತ್‌ ಶಾಕ್ ತಗುಲಿತ್ತು. ಸುಮಾರು 17 ಮಂದಿ ಗಾಯಗೊಂಡಿದ್ದರು. ಜನರು ಭಯದಿಂದ ಚೆಲ್ಲಾಪಿಲ್ಲಿಯಾಗಿ ಓಡಿದ್ದರಿಂದ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...