ಹಾಸನ | ಮಹಿಷ ದಸರಾ ಆಚರಣೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಭೀಮ್ ಆರ್ಮಿ

Date:

‘ಘರ್ಷಣೆಯಾದರೂ ಸರಿ ಮಹಿಷ ದಸರಾ ಮಾಡಲು ಬಿಡುವುದಿಲ್ಲʼ ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ ನೀಡಿರುವ ಬೆನ್ನಲ್ಲೇ, ಕರ್ನಾಟಕ ಭೀಮ್ ಆರ್ಮಿ ಹಾಸನ ಜಿಲ್ಲಾಧ್ಯಕ್ಷ ಪ್ರದೀಪ್ ಎಚ್ ಎಸ್ ಅವರು ಮಹಿಷಾಸುರನ ಸೌಮ್ಯ ಸ್ವಭಾವದ ಹೊಸ ಚಿತ್ರಪಟವನ್ನು ಉದ್ಘಾಟನೆ ಮಾಡಲು ಸಿದ್ದರಾಗುತ್ತಿದ್ದಾರೆ.

- Advertisement -

ಪ್ರದೀಪ್ ಎಚ್ ಎಸ್ ಅವರ ನೇತೃತ್ವದಲ್ಲಿ ಹಾಸನ ಭೀಮ್ ಆರ್ಮಿ ವತಿಯಿಂದ ಕಳೆದ ಮೂರು ವರ್ಷಗಳಿಂದ ಮಹಿಷಾ ದಸರಾವನ್ನು ಯಶಸ್ವಿಯಾಗಿ ನಡೆಸಿಕೊಂಡು ಬಂದಿದ್ದು, ಈ ಬಾರಿಯೂ ಮಹಿಷಾ ದಸರಾ ಆಚರಣೆ ಮಾಡಲು ತಯಾರಿ ನಡೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ತಿರುಗೇಟು ನೀಡಿದ್ದು, “ದಲಿತ ನಾಯಕರ ಬಗ್ಗೆ ನಿಮಗೆ ಯಾಕಿಷ್ಟು ತಾತ್ಸಾರ ಭಾವನೆ. ಟಿಪ್ಪು ಸುಲ್ತಾನ್ ಜಯಂತಿಯನ್ನು ವಿರೋಧ ಮಾಡ್ತೀರ, ಮಹಿಷ ದಸರಾ ಮಾಡಿದರೂ ನಿಮಗೆ ಕೋಪ ಬರಲು ಕಾರಣವೇನು? ಮಹಿಷ ದಸರಾ ಎಂಬುದು ನಮ್ಮ ಹಕ್ಕು. ನೀವೇಳಿದ್ದನ್ನು ಕೇಳಲು ನಾವು ನಿಮ್ಮ ರಾಜಪ್ರಭುತ್ವದಲ್ಲಿ ಇಲ್ಲ. ನಾವು ಇರುವುದು ಸಂವಿಧಾನದ ಅಡಿಯಲ್ಲಿ” ಎಂದು ಕರ್ನಾಟಕ ಭೀಮ್ ಆರ್ಮಿ ಜಿಲ್ಲಾಧ್ಯಕ್ಷ ಪ್ರದೀಪ್ ಎಚ್ ಎಸ್ ವಾಗ್ದಾಳಿ ನಡೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ನಿಜಗುಣಾನಂದರಿಗೆ ಜೀವ ಬೆದರಿಕೆ; ಸ್ವಾಮಿಗಳ ಜೊತೆ ನಾವಿದ್ದೇವೆ ಎಂದ ಕರ್ನಾಟಕ

ಮಹಿಷ ದಸರಾ ಆಚರಣೆ ಮಾಡಲು ಸಂವಿಧಾನ ನಮಗೆ ಹಕ್ಕನ್ನು ನೀಡಿದೆ. ನಾವು ಮಹಿಷ ದಸರಾ ಆಚರಣೆ ಮಾಡೇ ಮಾಡುತ್ತೇವೆ. ನಮ್ಮ ಪೂರ್ವಜರ ಇತಿಹಾಸವನ್ನು ಮನೆ ಮನೆಗೆ ತಲುಪಿಸುವ ಕೆಲಸ ಮಾಡುತ್ತೇವೆ. ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಈ ಬಾರಿ ದಲಿತರು ಪ್ರತಿ ಮನೆಯಲ್ಲೂ ಮಹಿಷಾಸುರನ ಫೋಟೋ ಇಟ್ಟು ಮನೆ ಮನೆಯಲ್ಲಿ ಮಹಿಷ ದಸರಾ ಆಚರಣೆ ಮಾಡಬೇಕು” ಎಂದು ಕರೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೊಳೆನರಸೀಪುರ-ಹಾಸನ ನಡುವೆ ಹೆಚ್ಚುವರಿ ಬಸ್‌ಗಳ ವ್ಯವಸ್ಥೆಗೆ ಆಗ್ರಹ

ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಸುತ್ತಮುತ್ತಲಿನ ಗ್ರಾಮಗಳಿಂದ ಪ್ರತಿನಿತ್ಯ ಹೆಚ್ಚಿನ ಸಂಖ್ಯೆಯ...

ಹಾಸನ | ಬೋನಿಗೆ ಚಿರತೆ ಸೆರೆ; ಗ್ರಾಮಸ್ಥರು ನಿರಾಳ 

ಹಾಸನ ಜಿಲ್ಲೆ ಆಲೂರು ತಾಲೂಕಿನ ಕದಾಳು ಗ್ರಾಮದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ...

ಎಡಪಂಥೀಯರ ಬಗ್ಗೆ ವಿವಾದಾತ್ಮಕ ಹೇಳಿಕೆ: ವಿಷಾದ ವ್ಯಕ್ತಪಡಿಸಿದ ನಿಶ್ಚಲಾನಂದ ಸ್ವಾಮಿ

ಇತ್ತೀಚೆಗೆ ಎಡಪಂಥೀಯರಲ್ಲ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಕೆಂಗೇರಿಯ ವಿಶ್ವ ಒಕ್ಕಲಿಗ...

ಹಾಸನ | ಉಪ ವಿಭಾಗಾಧಿಕಾರಿ ನ್ಯಾಯಾಲಯ ಉದ್ಘಾಟನೆ 

ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಹಾಸನಕ್ಕೆ ತೆರಳುವುದರಿಂದ ಹೆಚ್ಚಿನ ಸಮಯ ಹಾಗೂ...