ಹಾಸನ | ಭೀಕರ ಅಪಘಾತ; ಓರ್ವ ಸಾವು, ಆರು ಮಂದಿಗೆ ಗಂಭೀರ ಗಾಯ

Date:

Advertisements

ಹಾಸನದಲ್ಲಿ ನಡೆದ ಭೀಕರ ಅಪಘಾತದಲ್ಲಿ ಬೆಂಗಳೂರು ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಆರು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ನುಗ್ಗೆಹಳ್ಳಿ ಕ್ರಾಸ್‌ ಬಳಿಯ ರಾಷ್ಟ್ರೀಯ ಹೆದ್ದಾರಿ 75ರ ಫ್ಲೈಒವರ್ ಬಳಿ ಕ್ಯಾಂಟರ್ ವಾಹನ ಹಾಗೂ ಇನ್ನೋವಾ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಂಗಳೂರು ಮೂಲದ ನಂದಕುಮಾರ್ (37) ಮೃತ ದುರ್ದೈವಿ. ಮಂಗಳವಾರ ಮುಂಜಾನೆ ಅಪಘಾತ ನಡೆದಿದ್ದು, ಇನ್ನೋವಾ ಕಾರು ಬೆಂಗಳೂರು ಕಡೆಗೆ ತೆರಳುತ್ತಿದ್ದ ವೇಳೆ ಹಾಸನದ ಕಡೆಗೆ ಬರುತ್ತಿದ್ದ ಕ್ಯಾಂಟರ್ ನಡುವೆ ಡಿಕ್ಕಿಯಾಗಿದೆ. ಇನ್ನೋವಾದಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿವೆ.

Advertisements

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಅಪಘಾತದ ಬಾಕಿ ಪರಿಹಾರ ವಿಳಂಬ; 2 ಕೆಎಸ್‌ಆರ್‌ಟಿಸಿ ಬಸ್ ಜಪ್ತಿ

ಚನ್ನರಾಯಪಟ್ಟಣ ತಾಲೂಕು ಆಸ್ಪತ್ರೆಯಲ್ಲಿ ಇಬ್ಬರಿಗೆ, ಹಾಸನ ಜಿಲ್ಲಾಸ್ಪತ್ರೆಯಲ್ಲಿ ಮೂವರು ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿದಿದೆ. ಇನ್ನೋವಾದಲ್ಲಿದ್ದ ಏಳು ಮಂದಿ ಬೆಂಗಳೂರು ಮೂಲದವರು ಎಂದು ತಿಳಿದುಬಂದಿದೆ. ಅಪಘಾತದ ಬಳಿಕ ಕ್ಯಾಂಟರ್ ಚಾಲಕ ಪರಾರಿಯಾಗಿದ್ದಾನೆ. ಚನ್ನರಾಯಪಟ್ಟಣ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಶಿರಾಡಿ ಘಾಟ್ ಬಳಿ ಗುಡ್ಡ ಕುಸಿತ: ವಾಹನ ಸಂಚಾರ ಸ್ಥಗಿತ, ಬದಲಿ ಮಾರ್ಗ ಬಳಕೆಗೆ ಸೂಚನೆ

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ(NH-75)ಯ ದೊಡ್ಡತಪ್ಪಲೆಯಲ್ಲಿ ಭಾರೀ...

ಪಕ್ಷದ ವಿಪ್ ಉಲ್ಲಂಘನೆ; ಹಾಸನದ ಪ್ರಥಮ ಮೇಯರ್ ಚಂದ್ರೇಗೌಡ ಅನರ್ಹ

ಪಕ್ಷಾಂತರ ನಿಷೇಧ ಕಾಯ್ದೆ ಉಲ್ಲಂಘನೆ ವಿಚಾರವಾಗಿ ಹಾಸನ ಮಹಾ ನಗರ ಪಾಲಿಕೆ...

ಹಾಸನ | ವರ್ಷಾಂತ್ಯದ ವೇಳೆಗೆ 2 ಲಕ್ಷ ಮಂದಿಗೆ ಭೂಮಿ ಮಂಜೂರು ಗುರಿ: ಸಚಿವ ಕೃಷ್ಣ ಬೈರೇಗೌಡ

ಈ ವರ್ಷಾಂತ್ಯದ ವೇಳೆಗೆ ರಾಜ್ಯದಲ್ಲಿ 2 ಲಕ್ಷ ದರಕಾಸ್ತು ಪೋಡಿ ಸರ್ವೆ...

ಹಾಸನ | ಮಹನೀಯರ ತ್ಯಾಗ ಬಲಿದಾನದ ಫಲವೇ ಇಂದಿನ ಸ್ವಾತಂತ್ರ್ಯ: ಸಚಿವ ಕೃಷ್ಣ ಬೈರೇಗೌಡ

ದೇಶಕ್ಕೆ ಸ್ವಾತಂತ್ರ್ಯವನ್ನು ಬ್ರಿಟಿಷರು ಕೊಟ್ಟಿದ್ದಲ್ಲ, ಬದಲಾಗಿ ಭಾರತೀಯರು ಸತತ ಹೋರಾಟ, ಸಂಘರ್ಷ,...

Download Eedina App Android / iOS

X