ಗುತ್ತಿಗೆದಾರರರೊಬ್ಬರು ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ನಡೆದಿದೆ.
ಹೊಳೆನರಸೀಪುರದ ಪ್ರಥಮ ದರ್ಜೆ ಗುತ್ತಿಗೆದಾರ ಕೆ ಸತ್ತಾರ್ (79) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಎಂದು ತಿಳಿದುಬಂದಿದೆ.
ಗುರುವಾರ ಬೆಳಗ್ಗೆ ಸುಮಾರು 9 ಗಂಟೆಗೆ ಅವರು ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರು ನದಿಗೆ ಜಿಗಿಯುವ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸತ್ತಾರ್ ಅವರು ವೈಯಕ್ತಿಕ ಸಮಸ್ಯೆಗಳಿಂದ ನೊಂದಿದ್ದರು. ಬೇರೆಯವರಿಗೆ ಕೊಟ್ಟಿದ್ದ ಲಕ್ಷಾಂತರ ರೂಪಾಯಿ ಹಣ ವಾಪಸ್ ಬಂದಿಲ್ಲದ ಕಾರಣದಿಂದ ಮನನೊಂದಿದ್ದರು ಎಂದು ಹೇಳಲಾಗಿದೆ. ಅದೇ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅವರು ಮೃತದೇಹ ಇನ್ನೂ ಪತ್ತೆಯಾಗಿಲ್ಲ. ಅವರ ಮೃತದೇಹಕ್ಕಾಗಿ ಹುಡುಕಾಟ ಕಾರ್ಯಾಚರಣೆ ನಡೆಯುತ್ತಿದೆ. ಮುಳುಗು ತಜ್ಞರು ನದಿಗಿಳಿದು ಅವರ ಮೃತದೇಹವನ್ನು ಹುಡುಕುತ್ತಿದ್ದಾರೆ.