ಹಾವೇರಿ | 536ನೇ ಕನಕ ಜಯಂತಿ ಆಚರಣೆ

Date:

Advertisements

ಕನಕದಾಸರು ಸಮಾಜದಲ್ಲಿನ ಅನಿಷ್ಠ ಮೂಢನಂಬಿಕೆ ಹಾಗೂ ಅಜ್ಞಾನದ ವಿರುದ್ಧ ದಾಸಸಾಹಿತ್ಯದ ಮೂಲಕ ಜನರಿಗೆ ಅರ್ಥವಾಗುವ ರೀತಿಯಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಆ ಕಾಲದಲ್ಲಿಯೇ ಮಾಡಿದ್ದರು. ಸಮಸಮಾಜದ ನಿರ್ಮಾಣದ ಅವರ ಕನಸನ್ನು ಡಾ.ಬಿ ಆರ್ ಅಂಬೇಡ್ಕರ್ ಅವರು ನಮಗೆಲ್ಲರಿಗೂ ಸಂವಿಧಾನ ನೀಡುವ ಮೂಲಕ ಸಾಕಾರಗೊಳಿಸುವ ಕೆಲಸ ಮಾಡಿದ್ದಾರೆ. ಕನಕದಾಸರ ವಿಚಾರಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕಿದೆ ಎಂದು ಲಿಡ್ಕರ್ ಮಾಜಿ ಉಪಾಧ್ಯಕ್ಷ ಡಿ ಎಸ್ ಮಾಳಗಿ ಹೇಳಿದರು.

ಹಾವೇರಿ ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಮಾನವತಾವಾದಿ ಕನಕದಾಸರ 536ನೇ ಜಯಂತಿಯಲ್ಲಿ ಮಾತನಾಡಿದರು.

ಸಮಿತಿಯ ರಾಜ್ಯಾಧ್ಯಕ್ಷ ಉಡಚಪ್ಪ ಮಾಳಗಿ ಮಾತನಾಡಿ, “ನಾವುಗಳು ಕುಲ-ಕುಲವೆಂದು ಹೊಡಿದಾಡಿದರೆ ಏನು ಫಲ? ಎಂದು ಜನರಿಗೆ ಸಾಹಿತ್ಯದ ಮೂಲಕ ಪ್ರಶ್ನೆ ಮಾಡುತ್ತಾ ಕನಕದಾಸರು ಸರಳ ಸಾಹಿತ್ಯದ ಮೂಲಕ ಸಮಸಮಾಜದ ನಿರ್ಮಾಣಕ್ಕೆ ಅಡಿಪಾಯ ಹಾಕಿದ್ದಾರೆ. ಅವರ ತತ್ವ ಸಿದ್ದಾಂತ ಹಾಗೂ ವಿಚಾರಧಾರೆಗಳನ್ನು ನಾವು ಪಾಲಿಸುವುದು ಅಗತ್ಯವಾಗಿದೆ. ಮಾನವೀಯತೆಯಿಂದ ಸಮಾಜದಲ್ಲಿ ನಾವೆಲ್ಲರೂ ಬಾಳಬೇಕಾಗಿದೆ. ಕನಕರ ಜೀವನ ಸಂದೇಶ ನಮ್ಮೊಳಗೆ ಅಳವಡಿಸಿಕೊಳ್ಳೋಣ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ವಿಜಯಪುರ | ಕನಕದಾಸನಾದ ತಿಮ್ಮಪ್ಪ ನಾಯಕ: ಮುಖ್ಯ ಶಿಕ್ಷಕ ಖಾಜಿ

ಮಂಜುನಾಥ ಮಡಿವಾಳರ, ಅಲೆಮಾರಿ ಸಮಾಜದ ಜಿಲ್ಲಾಧ್ಯಕ್ಷ ವಿಭೂತಿ ಶೆಟ್ಟಿ, ಡಿಎಸ್‌ಎಸ್ ಮಂಜಪ್ಪ ಮರೋಳ, ಜಗದೀಶ ಡೊಳ್ಳೇಶ್ವರ, ಜಗದೀಶ ಹರಿಜನ, ಹನಮಂತಪ್ಪ ಸಿಡಿ, ಶಿವಲಿಂಗಪ್ಪ ನಿಂಗಪ್ಪನವರ, ಮಂಜಪ್ಪ ದೊಡ್ಡಮರೆಮ್ಮನವರ, ಮಹೇಶಪ್ಪ ಹರಿಜನ, ಮಂಜುನಾಥ ವೇಷಗಾರ, ಪ್ರಕಾಶ ಹರಿಜನ, ನಾಗರಾಜ ಬಾಲಣ್ಣನವರ, ಈರಪ್ಪ ಹರಿಜನ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X