ಹಾವೇರಿ | ಏಟಿಎಂ ಕಾರ್ಡ್ ಬದಲಿಸಿ ಹಣ ಲೂಟಿ ಮಾಡುತ್ತಿದ್ದ ಆರೋಪಿ ಪೊಲೀಸರಿಂದ ಬಂಧನ

Date:

Advertisements

ಏಟಿಎಂ ಕಾರ್ಡ್ ಬದಲಿಸಿ‌ ಹಣ ಲೂಟಿ ಮಾಡುತ್ತಿದ್ದ ಆರೋಪಿಯನ್ನು ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬೆಲಸಿಂದ ಗ್ರಾಮದ ನಿವಾಸಿ ಕಿರಣಕುಮಾರ ಕಾಳೇಗೌಡ (32) ಎಂದು ಗುರುತಿಸಲಾಗಿದೆ. ಈತನಿಂದ 47 ಸಾವಿರ ರೂ. ನಗದು, 28 ಸಾವಿರ ಮೌಲ್ಯದ ಮೊಬೈಲ್, ವಿವಿಧ ಬ್ಯಾಂಕ್​ಗಳ 60ಕ್ಕೂ ಹೆಚ್ಚು ಎಟಿಎಂ ಕಾರ್ಡ್ ವಶಪಡಿಸಿಕೊಳ್ಳಲಾಗಿದೆ.

ಆರೋಪಿ ಕಿರಣಕುಮಾರ ಹಣ ಡ್ರಾ ಮಾಡಿಕೊಳ್ಳುವ ನೆಪದಲ್ಲಿ ಎಟಿಎಂ ಹತ್ತಿರವೇ ನಿಲ್ಲುತ್ತಿದ್ದ. ಎಟಿಎಂಗೆ ಬರುವ ಅನಕ್ಷರಸ್ಥರು, ಅಮಾಯಕರು ಸಹಾಯ ಕೇಳಿದಾಗ ಅವರ ಎಟಿಎಂ ತೆಗೆದುಕೊಂಡು ಪಾಸ್​​ವರ್ಡ್ ಪಡೆಯುತ್ತಿದ್ದ. ಬಳಿಕ ಹಣ ಬರಲಿಲ್ಲ, ಸಮಸ್ಯೆ ಇದೆ ಎಂದು ಅವರಿಗೆ ತನ್ನ ಬಳಿಯಿರುವ ಬದಲಿ ಎಟಿಎಂ ಕಾರ್ಡ್​​ ​ಕೊಡುತ್ತಿದ್ದ. ಈ ವೇಳೆ ಪಾಸ್​ವರ್ಡ್​ ತಿಳಿದುಕೊಂಡಿರುತ್ತಿದ್ದ ಆರೋಪಿಯು ಬಳಿಕ ಬೇರೆ ಎಟಿಎಂಗಳಿಗೆ ತೆರಳಿ ಹಣ ಡ್ರಾ ಮಾಡಿಕೊಂಡು ಪರಾರಿಯಾಗುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Advertisements

ಆರೋಪಿಯು 2024 ಆ.6ರಂದು ಬಂಕಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎಟಿಎಂ ಕಾರ್ಡ್​​ ಬದಲಾವಣೆ ಮಾಡಿ 75 ಸಾವಿರ ಕಳ್ಳತನ ಮಾಡಿದ್ದ. ಬಂಕಾಪುರ ಪಿಎಸ್ಐ ನಿಂಗರಾಜ್ ನೇತೃತ್ವದಲ್ಲಿ ಆರೋಪಿಯನ್ನು ಬಂಧನ ಮಾಡಲಾಗಿದೆ. ಕಿರಣಕುಮಾರ್ ಅಂತರ್​​ಜಿಲ್ಲೆಯಲ್ಲದೆ, ಅಂತಾರಾಜ್ಯ ವಂಚಕನಾಗಿದ್ದಾನೆ ಎಂಬ ಅಂಶ ಪೊಲೀಸರ ತನಿಖೆ ವೇಳೆ ಗೊತ್ತಾಗಿದೆ. 10ಕ್ಕೂ ಅಧಿಕ ಜಿಲ್ಲೆಗಳಲ್ಲಿ ಈತನ ವಿರುದ್ಧ ಪ್ರಕರಣಗಳಿವೆ. ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X