ಬ್ಯಾಡಗಿ ಮೆಣಸಿನಕಾಯಿ ಎಂದೇ ಪ್ರಸಿದ್ದ ಪಡೆದಿರುವ ಹಾವೇರಿ ಜಿಲ್ಲೆಯ ಬ್ಯಾಡಗಿ ಪಟ್ಟಣದಲ್ಲಿ ಮೆಣಸಿನಕಾಯಿ ಬೆಲೆ ದಿಢೀರನೆ ಕುಸಿದಿದ್ದರಿಂದ ರೈತರು ಆಕ್ರೋಶ ವ್ಯಕ್ತಪಡಿಸಿದರು.
ಬ್ಯಾಡಗಿ ಪಟ್ಟಣಕ್ಕೆ ವಿವಿಧ ಜಿಲ್ಲೆಗಳಿಂದ ತಾವು ಬೆಳೆದ ಮೆಣಸಿನಕಾಯಿಯನ್ನು ರೈತರು ಬ್ಯಾಡಗಿ ಎಪಿಎಮ್ಸಿಗೆ ಮೆಣಸಿನಕಾಯಿ ಮಾರಾಟಕ್ಕೆ ತೆಗೆದುಕೊಂಡು ಬಂದಿದ್ದರು. ಮಾರುಕಟ್ಟೆಯಲ್ಲಿ ಮೆಣಸಿನಕಾಯಿ ಬೆಲೆ ಕುಸಿದಿದ್ದರಿಂದ ಆಕ್ರೋಶಗೊಂಡು ರೈತರು ಎಪಿಎಮ್ಸಿ ಕಛೇರಿಗೆ ಮುತ್ತಿಗೆ ಹಾಕಿ, ವಾಹನ ಜಖಂ ಗೊಳಿಸಿ ಆಕ್ರೋಶ ವ್ಯಕ್ತಪಡಿಸಿದರು.
ಅಲ್ಲಿರುವ ಕಚೇರಿಗೆ ನುಗ್ಗಿ ಕಾರು ಅಲ್ಲಿರುವ ಮಹತ್ವದ ದಾಖಲೆಗಳನ್ನು ನಾಶ ಗೊಳಿಸಿದ್ದಾರೆ. ಇಡೀ ಬ್ಯಾಡಗಿಯಲ್ಲಿ ನಿಷೇದಾಜ್ಞೆ ಜಾರಿಯಾಗಿದೆ. ರೈತರು ಹಚ್ಚಿದ ಬೆಂಕಿಗೆ ಕಾರುಗಳಿಗೆ ಬೆಂಕಿ ತಗುಲಿದ್ದು ಸ್ಫೋಟಗೊಂಡಿವೆ.