ಹಾವೇರಿ | ಗುತ್ತಿಗೆ ಆಧಾರದಲ್ಲಿ ಪ್ರಾಂಶುಪಾಲರ ನೇಮಕ; ಖಾಯಂ ನೇಮಕಾತಿಗೆ ಡಿವೈಎಫ್ಐ ಆಗ್ರಹ

Date:

Advertisements

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇದ್ದ 310 ಪ್ರಾಂಶುಪಾಲರ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ಪ್ರಾಂಶುಪಾಲರ ನೇಮಕ ಮಾಡಿಕೊಳ್ಳುತ್ತಿರುವುದು ಖಂಡನೀಯ ಎಂದು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್(ಡಿವೈಎಫ್ಐ) ಕರ್ನಾಟಕ ರಾಜ್ಯ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಬಸವರಾಜ ಪೂಜಾರ ಹೇಳಿದ್ದಾರೆ.

ಹಾವೇರಿ ನಗರದಲ್ಲಿ ಪತ್ರಿಕೆ ಹೇಳಿಕೆ ನೀಡಿರುವ ಅವರು, “ಪ್ರಾಂಶುಪಾಲರ ನೇರ‌ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಲಿಖಿತ ಪರೀಕ್ಷೆಯ ಮೂಲಕ, ಸರ್ಕಾರ ಐದು ವರ್ಷಗಳ ಅವಧಿಗೆ ಮಾತ್ರ ಗುತ್ತಿಗೆಯಾಧಾರದಲ್ಲಿ ನೇಮಕ ಮಾಡಿಕೊಳ್ಳುತ್ತಿದೆ. ರಾಜ್ಯದ 434 ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 400 ಪ್ರಾಂಶುಪಾಲ ಹುದ್ದೆಗಳ ಪೈಕಿ 310 ಸ್ಥಾನಗಳಿಗೆ ಗುತ್ತಿಗೆ ಪದ್ಧತಿಯಡಿ ನೇಮಕ ಮಾಡಲು ಹೊರಟಿದೆ. ಗುತ್ತಿಗೆ ಪದ್ಧತಿ ಬದಲಿಸಿ ಖಾಲಿಯಿರುವ 400 ಪ್ರಾಂಶುಪಾಲರ ಹುದ್ದೆಗಳಿಗೆ ಖಾಯಂ ಆಗಿ ನೇಮಕಾತಿ ಮಾಡಿಕೊಳ್ಳಬೇಕು” ಎಂದು ಆಗ್ರಹಿಸಿದರು.

“ಕೇವಲ ಐದು ವರ್ಷಗಳ ಅವಧಿಗೆ ಆಯ್ಕೆ ಮಾಡಿಕೊಳ್ಳುವ ಸರ್ಕಾರ, ಈ ಅವಧಿ ನಂತರ ಅವರನ್ನು ಸೇವೆಯಿಂದ ಬಿಡುಗಡೆಗೊಳಿಸಿದರೆ ಅತಂತ್ರರಾಗುವ ಅವರು ಏನು ಕೆಲಸ ಮಾಡಬೇಕು? ಇದರಲ್ಲಿ ಸರ್ಕಾರಕ್ಕೆ ಹೊಣೆಗಾರಿಕೆ ಇಲ್ಲವೇ? ಶಿಕ್ಷಣ ಕ್ಷೇತ್ರದಲ್ಲಿ ಈ ರೀತಿ ಬಳಸಿ ಬಿಸಾಡುವ ಜೀತಪದ್ಧತಿ ಸ್ವರೂಪದ ಕೆಲಸವನ್ನು ರಾಜ್ಯ ಸರ್ಕಾರ ಕೂಡಲೇ ರದ್ದುಪಡಿಸಬೇಕು”‌ ಎಂದು ಒತ್ತಾಯಿಸಿದರು.

Advertisements

“ಎಂಜನಿಯರಿಂಗ್ ಸೇರಿದಂತೆ ಇತರೆ ಪದವಿ ಕಾಲೇಜುಗಳಲ್ಲಿ ಹದಿನೈದು ವರ್ಷಗಳ ಬೋಧನಾನುಭವ ಹೊಂದಿರುವವರಿಗೆ ನೇಮಕಾತಿಯಲ್ಲಿ ಅವಕಾಶವಿದೆ. ಎಂಜನಿಯರಿಂಗ್ ಕಾಲೇಜು ಮತ್ತು ಇತರ ಕಾಲೇಜುಗಳಲ್ಲಿ ಕೆಲಸ ಮಾಡಿದವರು ಆಯ್ಕೆಯಾದರೆ ಪದವಿ ವಿದ್ಯಾರ್ಥಿಗಳಿಗೆ ಬೋಧನೆ ಮಾಡಲು ಹೇಗೆ ಸಾಧ್ಯ? ತಾತ್ಕಾಲಿಕವಾಗಿ ಶಿಕ್ಷಣ ಕ್ಷೇತ್ರದಲ್ಲಿ ಆಯ್ಕೆ ಮಾಡುವುದರಿಂದ, ಆಯ್ಕೆಯಾದವರಿಗೆ ಸೇವಾ ಭದ್ರತೆ ಖಾತರಿಯೂ ಇಲ್ಲ. ಅಲ್ಲದೆ ವಿದ್ಯಾರ್ಥಿಗಳ ಪಾಠ, ಪ್ರವಚನಕ್ಕೆ ತೊಂದರೆಯಾಗುತ್ತದೆ” ಎಂದು ಹೇಳಿದರು.

ತನಿಖೆಗೆ ಆಗ್ರಹ: “ಸರ್ಕಾರ ನಿಗದಿಗೊಳಿಸಿರುವ ಹದಿನೈದು ವರ್ಷಗಳ ಸೇವಾನುಭವವಿಲ್ಲದವರೂ, ಹಲವು ದುರ್ಮಾರ್ಗದ ಪ್ರಭಾವ ಬಳಸಿ ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಹದಿನೈದು ವರ್ಷಗಳ ಸೇವಾ ದೃಢೀಕರಣ ಪಡೆದಿರುವ ವದಂತಿಗಳಿವೆ. ಸರ್ಕಾರದ ಉನ್ನತ ಅಧಿಕಾರಿಗಳ ಕುಟುಂಬಸ್ಥರೇ ಇಂತಹ ದುಷ್ಕೃತ್ಯದಲ್ಲಿ ಪಾಲ್ಗೊಂಡಿದ್ದಾರೆಂಬುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಇದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ಮಾಡಿ ತಪಿತಸ್ಥರನ್ನು ಕಠಿಣ ಶಿಕ್ಷೆಗೊಳಪಡಿಸಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಜೆಜೆಎಂ ಕಾಮಗಾರಿಯಲ್ಲಿ ಅವ್ಯವಹಾರ; ತನಿಖೆಗೆ ದಸಂಸ ಆಗ್ರಹ

“ಒಟ್ಟಾರೆಯಾಗಿ ಉನ್ನತ ಶಿಕ್ಷಣ, ಪಿಎಚ್‌ಡಿ ಪಡೆದು ಕೆಲಸ ಮಾಡಲು ಸಾಮರ್ಥ್ಯವಿರುವ ಲಕ್ಷಾಂತರ ಜನತೆಗೆ ಅವಕಾಶ ನೀಡಬೇಕು. ಸರ್ಕಾರ ಪರೀಕ್ಷಾ ಪ್ರಾಧಿಕಾರದ ಮೂಲಕ ಐದು ವರ್ಷದ ಅವಧಿಗೆ ಗುತ್ತಿಗೆಯಾಧಾರದಲ್ಲಿ ಪ್ರಾಂಶುಪಾಲರ ನೇಮಕ ಮಾಡಲು ಹೊರಟಿರುವುದನ್ನು ಕೂಡಲೇ ರದ್ದುಪಡಿಸಿ, ಖಾಲಿ ಇರುವ ಎಲ್ಲ ಹುದ್ದೆಗಳನ್ನು ಖಾಯಂ ನೇಮಕ ಮಾಡಿಕೊಳ್ಳಲು ಮುಂದಾಗಬೇಕು.‌ ಇಲ್ಲವಾದರೆ ಡಿವೈಎಫ್ಐ ತೀವ್ರವಾದ ಪ್ರತಿಭಟನೆಗೆ ಮುಂದಾಗಬೇಕಾಗುತ್ತದೆ” ಎಂದು ಸರ್ಕಾರಕ್ಕೆ ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X