ಹಾವೇರಿ | ಬಂಜಾರ ಸಮುದಾಯದಿಂದ ಕಲೆ, ಸಂಸ್ಕೃತಿಗೆ ಅಪಾರ ಕೊಡುಗೆ : ರಾಜೇಶ್ ಚವ್ಹಾಣ

Date:

ಬಂಜಾರಾ ಸಮುದಾಯವು ತನ್ನದೇ ಆದ ವೇಷ ಭೂಷಣದಿಂದ ಭಾರತೀಯ ಕಲೆ, ಸಂಸ್ಕೃತಿಗೆ ಅಪಾರ ಕೊಡುಗೆ ನೀಡುವ ಮೂಲಕ ಭಾರತೀಯ ಕಲಾ ಸಂಸ್ಕೃತಿಯನ್ನು ಶ್ರೀಮಂತಗೊಳಿಸಿದೆ ಎಂದು ಬಂಜಾರ ಸಮುದಾಯದ ಮುಖಂಡ ಹಾಗೂ ತಾಲೂಕು ಪಂಚಾಯತಿಯ ಕೆಡಿಪಿ ಸದಸ್ಯ ರಾಜೇಶ್ ಚವ್ಹಾಣ ಹೇಳಿದರು.

- Advertisement -

ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದ ರೋಷನಿ ಸಮಾಜ ಸೇವಾ ಸಂಸ್ಥೆ, ಯುವ ಸಂಗಮ ಹಾಗೂ ಜನವೇದಿಕೆ ಸಂಯುಕ್ತ ಆಶ್ರಯದಲ್ಲಿ ಮಾನವ ಹಕ್ಕು ಸಂವಾದ ಮತ್ತು ಲಂಬಾಣಿ ಸಾಂಸ್ಕೃತಿಕ ಕಲಾ ಮೇಳ ಸ್ಪರ್ಧೆಯನ್ನು ರೋಶನಿ ಸಂಸ್ಥೆಯಲ್ಲಿ ಆಯೋಜಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಈ ಕಾರ್ಯಕ್ರಮದಲ್ಲಿ ಮಾತನಾಡಿದ ರಾಜೇಶ್ ಚವ್ಹಾಣ,”ವೈವಿದ್ಯಮಯವಾಗಿ ನೃತ್ಯವನ್ನು ಮಾಡುವ ಮೂಲಕ ಜನರಿಗೆ ಮನರಂಜೀಸುವ ವಿಶೇಷ ಕಲೆ ನಮ್ಮ ಬಂಜಾರಾ ಸಮುದಾಯಲ್ಲಿದೆ. ಹೆಚ್ಚಾಗಿ ಹಬ್ಬ ಹರಿದಿನಗಳಲ್ಲಿ ಅದರಲ್ಲೂ ವಿಶೇಷವಾಗಿ ಗೌರಿ ಹಬ್ಬದಲ್ಲಿ ಕುಣಿದು ಕುಪ್ಪಳಿಸಿ ಸಂಭ್ರಮದಿಂದ ಆಚರಿಸುವುದು ವಿಶೇಷವಾದದ್ದು” ಎಂದರು.

ಬಂಜಾರಾ ಸಮುದಾಯದ ಇಂತಹ ಕಲಾ ಚಟುವಟಿಕೆಗಳನ್ನು ಗಮನಿಸಿ ರೋಶನಿ ಸಂಸ್ಥೆಯಲ್ಲಿ ಕಲಾ ಮೇಳವನ್ನು ಆಯೋಜಿಸಿ ಪ್ರೋತ್ಸಾಹಿಸುತ್ತಿರುವುದು ತಾಲೂಕಿನಲ್ಲಿ ಗಮನಾರ್ಹ ವಿಚಾರವಾಗಿದೆ ಎಂದು ಹೇಳಿದರು.

ಬಂಜಾರ 1

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರೋಶನಿ ಸಮಾಜ ಸೇವಾ ಸಂಸ್ಥೆಯ ನಿರ್ದೇಶಕಿ ಸಿಸ್ಟರ್ ಅನಿತಾ ಡಿಸೋಜಾ ಮಾತನಾಡಿ, “ಲೂಕಿನಲ್ಲಿ ರೋಶನಿ ಸಂಸ್ಥೆಯಿಂದ 20 ಲಂಬಾಣಿ ಮಹಿಳಾ ಸ್ವಸಹಾಯ ಸಂಘಗಳನ್ನು ರಚಿಸಲಾಗಿದೆ. ಯುವ ಸಂಗಮ ಕಾರ್ಯಕ್ರಮದ ಮೂಲಕ ಬಂಜಾರಾ ಸಂಸ್ಕೃತಿಯನ್ನು ಇನ್ನೂ ಉನ್ನತಮಟ್ಟಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಮತ್ತು ಯುವತಿಯರು ಲಂಬಾಣಿ ಕಲೆಯನ್ನು ಉಳಿಸಿ ಬೆಳೆಸಿಕೊಂಡು ಹೋಗುವಂತೆ ಪ್ರೇರೇಪಿಸುವ ಉದ್ದೇಶದಿಂದ ಈ ಕಲಾ ಮೇಳವನ್ನು ಹಮ್ಮಿಕೊಳ್ಳಲಾಗಿದೆ” ಎಂದರು.

“ಉತ್ತಮ ವೇಷ ಭೂಷಣ ತೊಟ್ಟು ನೃತ್ಯ ಮಾಡುವ ಯುವತಿಯರನ್ನು ಗುರುತಿಸಿ ಮುಂದಿನ ದಿನಗಳಲ್ಲಿ ತರಬೇತಿ ನೀಡಿ, ಕಲಾ ತಂಡವನ್ನು ರಚಿಸುವ ಮೂಲಕ ಇವರ ಸಂಸ್ಕೃತಿಗೆ ಒತ್ತು ನೀಡಲಾಗುತ್ತದೆ” ಎಂದು ಅನಿತಾ ಡಿಸೋಜಾ ಹೇಳಿದರು.

ನೃತ್ಯ ಸ್ಪರ್ಧೆಯಲ್ಲಿ ಮಲ್ಲಿಗಾರ, ರತ್ನಾಪುರ, ಜಾನಗುಂಡಿಕೊಪ್ಪ, ಮಾವಕೊಪ್ಪ, ಗುರುರಾಯಪಟ್ಟಣ, ಸೇವಾಲಾಲ ತಾಂಡಾಗಳಿಂದ 7 ಕಲಾ ತಂಡಗಳು ಭಾಗವಹಿಸಿದ್ದವು.

ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ರತ್ನಾಪುರ ತಾಂಡಾದ ಯುವತಿಯರಿಗೆ 3000 ಹಾಗೂ ಟ್ರೋಫಿ, ದ್ವಿತೀಯ ಸ್ಥಾನ ಪಡೆದ ಗುರುರಾಯಪಟ್ಟಣದ ಯುವತಿಯರಿಗೆ 2000 ಮತ್ತು ಟ್ರೋಫಿ ಪಡೆದುಕೊಂಡರೆ, ಮಲ್ಲಿಗಾರ ಯುವತಿಯರು ತೃತೀಯ ಬಹುಮಾನವಾಗಿ 1000 ಮತ್ತು ಟ್ರೋಫಿ ಪಡೆದುಕೊಂಡರು.

ಕೆ.ಎಫ್ ನಾಯ್ಕರ ನಿರೂಪಿಸಿದರು. ನಿರ್ಮಲಾ ಮಡಿವಾಳ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ರೋಶನಿ ಕಾನ್ವೆಂಟ್‌ನ ಸಿಸ್ಟರ್ ಜಾನೆಟ್, ನ್ಯಾಯವಾದಿ ಸಿಸ್ಟರ್ ವೆರೋನಿಕಾ, ಜನವೇದಿಕೆ ನಾಯಕಿ ಯಲ್ಲವ್ವ ತಳಗೇರಿ, ಯುವತಿಯರ ಪ್ರತಿನಿಧಿ ತಾರಾ ಲಮಾಣಿ, ಪವಿತ್ರಾ ಲಮಾಣಿ, ಹಾನಗಲ್ಲಿನ ಕೃಪಾ ಸದನದ ಮುಖ್ಯಸ್ಥೆ ಸಿಸ್ಟ‌ರ್ ಅಶ್ವೇತಾ, ಸಿಬ್ಬಂದಿಗಳಾದ ಸಿಸ್ಟರ್ ಶಾಂತಿ, ಸಿಸ್ಟರ್ ಅಮಿತಾ, ಸಿಸ್ಟರ್ ಎವಿನ್, ಡಾ. ಪ್ರಸನ್ನಕುಮಾರ್, ಶಿವಕುಮಾರ ಮಾಂಗ್ಲೆನವರ, ಡಿಗ್ಗಪ್ಪ ಲಮಾಣಿ, ಮಂಜುನಾಥ ಗೌಳಿಗೌರಮ್ಮ ವೈ.ಕೆ. ಪವಿತ್ರಾ ಜೋಗೇರ, ಗೌರಮ್ಮ ಚಾಕಾಪುರ, ಶಶಿಕಲಾ ಪಟ್ಟಣಶೆಟ್ಟಿ, ಮೀನಾಕ್ಷಿ ಕಡಕೋಳ, ಅನುಷಾ ಕೆ.ಎಸ್ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...