ಹಾವೇರಿ | ವಿದ್ಯುತ್ ತಂತಿ ತುಂಡಾಗಿ ಬಿದ್ದು ಬಾಲಕನೋರ್ವ ಸಾವು

Date:

Advertisements

ಶಾಲೆಯ ಆವರಣದಲ್ಲಿ ನಿಂತಿದ್ದ ವೇಳೆ ವಿದ್ಯುತ್ ತಂತಿ ತುಂಡಾಗಿ ಮೈ ಮೇಲೆ ಬಿದ್ದು ಬಾಲಕನೋರ್ವ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ಹಂಸಬಾವಿಯಲ್ಲಿ ನಡೆದಿದೆ.

ಗೌಸ್ ಮುಹಿಯುದ್ದೀನ್ ಎಂಬವರ ಪುತ್ರ ಮುಹಮ್ಮದ್ ಶಾ ಕಲಂದರ್(10) ಮೃತಪಟ್ಟ ಬಾಲಕ. ಹಂಸಬಾವಿಯ ಶಿವಯೋಗೇಶ್ವರ ಪ್ರೌಢಶಾಲೆಯ 4ನೇ ತರಗತಿಯ ವಿದ್ಯಾರ್ಥಿಯಾಗಿದ್ದ ಕಲಂದರ್ ಶುಕ್ರವಾರ ಮಧ್ಯಾಹ್ನ ಊಟದ ವಿರಾಮದ ಸಂದರ್ಭ ಇನ್ನಿಬ್ಬರು ಗೆಳೆಯಯರಾದ ಶ್ರೇಯಸ್ ಮತ್ತು ಚೇತನ್ ಜೊತೆ ಶಾಲಾ ಆವರಣದಲ್ಲಿ ನಿಂತಿದ್ದರು. ಈ ವೇಳೆ ಅಲ್ಲೇ ಹಾದುಹೋಗಿದ್ದ ವಿದ್ಯುತ್ ತಂತಿ ತುಂಡಾಗಿ ಕಲಂದರ್ ಮೈ ಮೇಲೆ ಬಿದ್ದಿದೆ. ಅಕ್ಕ–ಪಕ್ಕದಲ್ಲಿದ್ದ ಸ್ನೇಹಿತರಿಬ್ಬರಿಗೂ ವಿದ್ಯುತ್ ತಂತಿ ತಗುಲಿದೆ.

ತಕ್ಷಣ ಮೂವರೂ ವಿದ್ಯಾರ್ಥಿಗಳನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈ ವೇಳೆ ಕಲಂದರ್ ಕೊನೆಯುಸಿರೆಳೆದಿದ್ದರು. ಶ್ರೇಯಸ್ ಮತ್ತು ಚೇತನ್ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X