ಹಾವೇರಿ | ಪ್ರಮಾಣ ಪತ್ರ ಪಡೆಯಲು ಲಂಚ; ಕರ್ಜಗಿ ಹೋಬಳಿ ಉಪ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ

Date:

Advertisements

ಪ್ರಮಾಣಪತ್ರವೊಂದನ್ನು ಮಾಡಲು ಹಣಕ್ಕೆ ಬೇಡಿಕೆ ಇಟ್ಟಿದ್ದ ಕರ್ಜಗಿ ಹೋಬಳಿ ಉಪ ತಹಶೀಲ್ದಾರ್  ಸೋಮಪ್ಪ ಶಿವಪ್ಪ ನಾಯ್ಕರ್ ಎರಡು ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತರ ಕೈಗೆ ಸಿಕ್ಕಿಬಿದ್ದಿದ್ದಾರೆ.

ಹಾವೇರಿ ಜಿಲ್ಲೆ ಹಾವೇರಿ ತಾಲೂಕಿನ ಕಳ್ಳಿಹಾಳ ಗ್ರಾಮದ ಪಂಚಯ್ಯ ಹೊಳಬಸಯ್ಯ ಹಿರೇಮಠ ಇವರ ಸಹೋದರನ ಹೆಸರಿನಲ್ಲಿ ವ್ಯವಸಾಯ ಖರೀದಿ ಮಾಡಿದ್ದರು. ಈ ಟ್ರ್ಯಾಕ್ಟರಿಗೆ ಸಂಬಂಧಿಸಿದಂತೆ ಬೋನಫೈಡ್ ಪ್ರಮಾಣ ಪತ್ರ ಪಡೆಯಲು ಅರ್ಜಿ ಸಲ್ಲಿಸಿದ್ದರು.

ಈ ಬೋನಫೈಡ್ ಪ್ರಮಾಣ ಪತ್ರ ನೀಡಲು ಕರ್ಜಗಿ ಉಪ ತಹಶೀಲ್ದಾರ್ ಸೋಮಪ್ಪ ಶಿವಪ್ಪ ನಾಯ್ಕರ್ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಅಷ್ಟೇ ಅಲ್ಲದೇ, ಪ್ರತಿ ಫೈಲ್ ವಿಲೇವಾರಿ ಮಾಡಲು ಐದು ಸಾವಿರ ರೂಪಾಯಿ ಬೇಡಿಕೆ ಇಟ್ಟಿದ್ದರು.

Advertisements

ಅರ್ಜಿಯನ್ನು ವಿಲೇವಾರಿ ಮಾಡಲು ಸದರಿ ಫಿರ್ಯಾದುದಾರರಿಂದ ಸೋಮಪ್ಪ ಶಿವಪ್ಪ ನಾಯ್ಕರ್ ಅಧಿಕಾರಿ(ಜುಲೈ 24) ಎರಡು ಸಾವಿರ ಹಣ ಪಡೆದುಕೊಳ್ಳುವಾಗ ಲೋಕಾಯುಕ್ತರು ಯಶಸ್ವಿಯಾಗಿ ಟ್ರ್ಯಾಪ್ ಮಾಡಿ ಬಂಧಿಸಿದ್ದಾರೆ.

ಇದನ್ನು ಓದಿದ್ದೀರಾ? ಧಾರವಾಡ | ಜುಲೈ 25, 26 ರಂದು ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಸದರಿ ಪ್ರಕರಣದ ತನಿಖೆಯನ್ನು ಮೇಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಕೈಗೊಂಡು, ಸದರಿ ಆರೋಪಿತನನ್ನು ಕರ್ಜಗಿ ನಾಡಕಛೇರಿಯಲ್ಲಿ ದಸ್ತಗಿರಿ ಮಾಡಿದ್ದು, ಹಾವೇರಿ ನಗರದಲ್ಲಿನ ಆರೋಪಿತನ ಮನೆಯ ಶೋಧನೆಯನ್ನು ಕೈಗೊಂಡು ದಾಖಲಾತಿಗಳನ್ನು ಪರಿಶೀಲಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಲೋಕಾಯುಕ್ತ ಪೊಲೀಸರು, ತನಿಖೆ ಮುಂದುವರಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X