ಹಾವೇರಿ | ತಂದೆಯ ಸಾವಿನಲ್ಲೂ ಪರೀಕ್ಷೆ ಬರೆದ ಅಣ್ಣ-ತಂಗಿ

Date:

Advertisements

ತಂದೆಯ ಸಾವಿನ ನೋವಿನಲ್ಲೂ ಅಣ್ಣ-ತಂಗಿ ಎಸ್​​ಎಸ್​ಎಲ್​ಸಿ ಪರೀಕ್ಷೆ ಬರೆದ ಮನ ಮಿಡಿಯುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರ ಪಟ್ಟಣದಲ್ಲಿ ನಿನ್ನೆ ದಿನ ನಡೆದಿದೆ.

ರಾಣೆಬೆನ್ನೂರ ಪಟ್ಟಣದ ಪ್ರತ್ಯೇಕ ಪರೀಕ್ಷಾ ಕೇಂದ್ರದಲ್ಲಿ ರಕ್ಷಿತಾ ಹನುಮಂತಪ್ಪ ಲಮಾಣಿ ಮತ್ತು ಧನರಾಜ ಹಿಂದಿ ಪರೀಕ್ಷೆಗೆ ಹಾಜರಾದರು.

ತಾಲೂಕಿನ ಪದ್ಮಾವತಿಪುರ(ಬಸಲಿಕಟ್ಟಿ ತಾಂಡಾ)ದ 46 ವರ್ಷದ ಹನುಮಂತಪ್ಪ ಗುಡ್ಡಪ್ಪ ಲಮಾಣಿ ಶುಕ್ರವಾರ ಬೆಳಗಿನ ಜಾವ ಮನೆಯಲ್ಲೇ ಹೃದಯಾಘಾತದಿಂದ ನಿಧನರಾಗಿದ್ದು, ಇಡೀ ಕುಟುಂಬವೇ ಕಣ್ಣೀರ ಸಾಗರದಲ್ಲಿ ಮುಳುಗಿತ್ತು.

Advertisements

ಹಿಂದಿ ಎಸ್​ಎಸ್​ಎಲ್​ಸಿಯ ಕೊನೆಯ ಪರೀಕ್ಷೆಯಾಗಿದ್ದು, ಸೇಂಟ್ ಲಾರೆನ್ಸ್ ಶಾಲೆಯಲ್ಲಿ ಓದುತ್ತಿದ್ದ ಧನರಾಜ ಹಾಗೂ ವಿದ್ಯಾಚೇತನ ಶಾಲೆಯಲ್ಲಿ ಓದುತ್ತಿದ್ದ ತಂಗಿ ರಕ್ಷಿತಾ ಪ್ರತ್ಯೇಕ ಪರೀಕ್ಷಾ ಕೇಂದ್ರದಲ್ಲಿ ತಂದೆ ಸಾವಿನ ದುಃಖವನ್ನು ನುಂಗಿಕೊಂಡು ಪರೀಕ್ಷೆ ಬರೆದು, ನಂತರ ತಂದೆಯ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಿದರು.

ಈ ಸುದ್ದಿ ಓದಿದ್ದೀರಾ? ಗದಗ | ಉದ್ಯೋಗ ಖಾತ್ರಿ ದಿನಕ್ಕೆ ₹ 370, ದುಡಿಯುವ ಕೈಗೆ ಕೆಲಸ: ಧರ್ಮರ ಕೃಷ್ಣಪ್ಪ

ಗಾರೆ ಕೆಲಸ ಮಾಡುತ್ತಿದ್ದ ಹನುಮಂತಪ್ಪ ಮಕ್ಕಳಿಬ್ಬರಿಗೆ ಉತ್ತಮ ಶಿಕ್ಷಣ ಕೊಡಿಸಿದ್ದು, ಮಕ್ಕಳ ಯಶಸ್ಸನ್ನು ಕಣ್ತುಂಬಿಕೊಳ್ಳುವ ಮೊದಲೇ ವಿಧಿಯಾಟಕ್ಕೆ ಬಲಿಯಾಗಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

Download Eedina App Android / iOS

X