ಹಾವೇರಿ | ಕಚವಿ ಪಿಡಿಓ ವಿರುದ್ಧ ಜಾತಿ ನಿಂದನೆ ಆರೋಪ; ವರ್ಗಾವಣೆಗೆ ಆಗ್ರಹ

Date:

Advertisements

ಹಾವೇರಿ ಜಿಲ್ಲೆಯ ಹಿರೇಕೆರೂರ ತಾಲೂಕಿನ ಕಚವಿ ಗ್ರಾಮ ಪಂಚಾಯತಿ ಪಿಡಿಓ ಪರಮೇಶ್ವರಪ್ಪ ಗಿರಿಯಣ್ಣನವರ ವಿರುದ್ಧ ಜಾತಿ ನಿಂದನೆ ಹಾಗೂ ಕರ್ತವ್ಯಲೋಪ ಆರೋಪ ಕೇಳಿಬಂದಿದ್ದು, ಕೂಡಲೇ ವರ್ಗಾವಣೆ ಮಾಡುವಂತೆ ಮಾಜಿ ಗ್ರಾಪಂ ಅಧ್ಯಕ್ಷೆ ಗಿರಿಜಮ್ಮ ಚಂದ್ರಪ್ಪ ಹರಿಜನ ಆಗ್ರಹ ಮಾಡಿದ್ದಾರೆ.

ಜಿಲ್ಲಾ ಡಿಎಸ್‌ಎಸ್ ರಾಜ್ಯ ಸಮಿತಿ ಸದಸ್ಯ ಉಡಚಪ್ಪ ಮಾಳಗಿ ಅವರ ನೇತೃತ್ವದಲ್ಲಿ ಹಾವೇರಿ ಜಿಲ್ಲಾ ಪಂಚಾಯತ್ ಸಿಇಒ ರುಚಿ ಬಿಂದಾಲ್ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿಲಾಯಿತು. ನಂತರ ಮಾತನಾಡಿದ ಕಚವಿ ಗ್ರಾಪಂನ ಹಾಲಿ ಸದಸ್ಯೆಯೂ ಆಗಿರುವ ಗಿರಿಜಮ್ಮ, “ಪಿಡಿಒ ಪರಮೇಶ್ವರಪ್ಪ, ಪಂಚಾಯತಿ ಅಭಿವೃದ್ಧಿ ಕೆಲಸಗಳ ಕಡೆ ಕಿಂಚಿತ್ತೂ ಗಮನ ಹರಿಸುವುದಿಲ್ಲ. ಪಂಚಾಯತಿಗೆ ಬರೋದಿಲ್ಲ. ಬಂದರೂ ಕೆಲಸ ಮಾಡಲ್ಲ. ಯಮ್ಮಿಗನೂರು ಮತ್ತು ಪುರಪುಂಡಿಕೊಪ್ಪ ಕಚವಿ ತಾಂಡಾಗಳಿಗೆ 2021ರಲ್ಲಿ 14-15 ನೇ ಹಣಕಾಸು ಯೋಜನೆಯಡಿ ಮನರೇಗಾ ಅನುದಾನದಲ್ಲಿ ಅಕ್ರಮ ಎಸಗಿದ್ದಾರೆ. ಇದರ ಬಗ್ಗೆ ಸೂಕ್ತ ತನಿಖೆ ಆಗಬೇಕು. ಗ್ರಾಮಗಳ ಅಭಿವೃದ್ಧಿಗೆ ಬಂದ ಸರ್ಕಾರದ ಅನುದಾನಗಳ ಬಗ್ಗೆ ಯಾವುದೇ ಮಾಹಿತಿ‌ ನೀಡದೇ ಬೇಜವಾಬ್ದಾರಿಯಿಂದ ವರ್ತಿಸುತ್ತಾರೆ. ಅವರ ವಿರುದ್ಧ ಸೂಕ್ತ ಕ್ರಮ ಆಗಬೇಕು” ಎಂದರು.

“ಉದ್ದೇಶ ಪೂರ್ವಕವಾಗಿ ಅಭಿವೃದ್ಧಿ ಕಾರ್ಯಗಳ ವಿಳಂಬ ಮಾಡುತ್ತಾರೆ. ಜಾತಿ ಮತ್ತು ಹಣದ ಆಮಿಷಕ್ಕೆ ಒಳಗಾಗಿದ್ದಾರೆ. ನಾವೇನಾದರೂ‌ ಕೆಲಸದ ಬಗ್ಗೆ ಕೇಳಿದರೆ ಏಕ ವಚನದಿಂದ ಮಾತನಾಡಿ‌ ಜಾತಿ ನಿಂದನೆ ಮಾಡುತ್ತಾರೆ. ಅಲ್ಲದೇ ಅನೇಕ ಬಾರಿ ಅಪಮಾನ ಮಾಡಿದ್ದಾರೆ. ಸರ್ಕಾರದಿಂದ ಬರುವ ಮಾಹಿತಿ ಕೇಳಿದಾಗ ನಮಗೆ ಸ್ಪಂದಿನೆ ನೀಡುವುದಿಲ್ಲ. ಮನರೇಗಾ ಯೋಜನೆಯ ಕೆಲಸದಲ್ಲಿ ಕೂಲಿ‌ ಕಾರ್ಮಿಕರಿಗೆ ಇದು ವರೆಗೂ ಕೆಲಸ ಕೊಟ್ಟಿಲ್ಲ. ಯಮ್ಮಿಗನೂರು ಗ್ರಾಮದ ಎಸ್ಸಿ‌ ಮತ್ತು ಎಸ್ಟಿ ಸೋಲಾರ ಕೂಡಾ ನೀಡಿಲ್ಲ. 2021 ರಲ್ಲಿ ದನದ ಕೊಟ್ಟಿಗೆ ನಿರ್ಮಾಣ ಮಾಡಿಕೊಂಡವರಿಗೆ ಬಿಲ್ ಪೆಂಡಿಂಗ್ ಇಟ್ಟುಕೊಂಡಿದ್ದಾರೆ. ಪಂಚಾಯತಿಗೆ ಬರುವ ಸಾರ್ವಜನಿಕರೊಂದಿಗೆ ಉದ್ದಟತನದಿಂದ ನಡೆದುಕೊಳ್ಳುತ್ತಾರೆ. ‌ಗ್ರಾಪಂ ಸದಸ್ಯರಲ್ಲಿ ತಾರತಮ್ಯವನ್ನು ಮಾಡಿಕೊಂಡು ಬಂದಿದ್ದಾರೆ. ನಾನು ಹೇಳಿದ ಒಂದು ಕೆಲಸವನ್ನು ಇದು ವರಗೂ ಸರಿಯಾಗಿ ಮಾಡುತ್ತಿಲ್ಲ. ಕೀಳು ಜಾತಿಯವರನ್ನು ನಾವೇಕೆ ಭೇಟಿ ಮಾಡಬೇಕು ಅವರು ಹೇಳಿದಂತೆ ನಾವು ಕೆಲಸ ಮಾಡಬೇಕಾ ಅನ್ನುವ ಮನಸ್ಥಿತಿ ಇವರಿಗಿದೆ. ತಕ್ಷಣ ಇವರನ್ನು ಇಲ್ಲಿಂದ ವರ್ಗಾವಣೆ ಮಾಡಲೇಬೇಕು” ಎಂದು ಆಗ್ರಹಿಸಿದರು.

Advertisements

ಇದನ್ನೂ ಓದಿ:ಹಾವೇರಿ | ಅಸಮಾನತೆ ವಿರುದ್ಧ  ಧ್ವನಿ ಎತ್ತಲು ಶಿಕ್ಷಣ ಬೇಕು: ಭವ್ಯ ನರಸಿಂಹಮೂರ್ತಿ

ಈ ಸಂದರ್ಭದಲ್ಲಿ ಡಿಎಸ್ಎಸ್ ರಾಜ್ಯ ಸಮಿತಿ ಸದಸ್ಯ ಉಡಚಪ್ಪ ಮಾಳಗಿ, ಮುಖಂಡರಾದ ಚಂದ್ರಪ್ಪ ಹರಿಜನ, ಜಗದೀಶ್ ಹರಿಜನ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X